ಬ್ರೇಕಿಂಗ್ ನ್ಯೂಸ್
30-09-22 08:57 pm HK News Desk ಕರ್ನಾಟಕ
ಹಾಸನ, ಸೆ.30 : ಪಿಎಫ್ ಐ ರೀತಿಯ ಸಂಘಟನೆಗಳು ಬಹಳಷ್ಟು ಇವೆ. ಪಿಎಫ್ ಐ ಒಂದೇ ಅಲ್ಲ, ಎಸ್ ಡಿ ಪಿಐ ಒಂದೇ ಅಲ್ಲ, ಆರೆಸ್ಸೆಸ್ ಒಂದೇ ಅಲ್ಲ, ಬಜರಂಗದಳ ಒಂದೇ ಅಲ್ಲ. ಬ್ಯಾನ್ ಮಾಡೋದಾದೇ ಎಲ್ಲವನ್ನು ಟೋಟಲಿ ಬ್ಯಾನ್ ಮಾಡಿ. ಇಲ್ಲವಾದರೆ ಅವರ ನಂಬಿಕೆ, ಅವರ ಮನಸ್ಸಿನಲ್ಲಿ ಏನಿರುತ್ತೆ ಅದನ್ನ ಮಾಡೋಕೆ ಸ್ವಾತಂತ್ರ್ಯ ಕೊಡಿ. ಒಂದೆರಡು ಬ್ಯಾನ್ ಮಾಡೋದು ಇನ್ನು ಕೆಲವು ಹಾಗೆ ಬಿಡೋದು ಸಮಾಜದಲ್ಲಿ ಗೊಂದಲ ಸೃಷ್ಟಿಗೆ ಕಾರಣವಾಗುತ್ತೆ. ಮತ್ತೆ ನೀವೇ ಬೆಂಕಿ ಹಚ್ಚುವ ಕೆಲಸ ಮಾಡಿದಂತೆ ಆಗುತ್ತೆ ಎಂದು ಹಾಸನ ಸಂಸದ ಪ್ರಜ್ವಲ್ ರೇವಣ್ಣ ಹೇಳಿದ್ದಾರೆ.
ಬರೇ ಪಿಎಫ್ಐ, ಎಸ್ ಡಿ ಪಿಐ ಬ್ಯಾನ್ ಮಾಡಿದ್ರೆ ಅವರು ಸುಮ್ಮನೆ ಇರ್ತಾರಾ, ಬೇರೆಯವರನ್ನು ಬ್ಯಾನ್ ಮಾಡಿ ಅಂತಾರೆ. ಹಾಗಾಗಿ ಸರ್ಕಾರ ಈ ಬಗ್ಗೆ ಸರಿಯಾದ ನಿರ್ಧಾರ ಮಾಡಬೇಕು. ಬ್ಯಾನ್ ಗೂ ಮೊದಲು ಸರ್ವಪಕ್ಷ ಸಭೆ ಮಾಡಬೇಕಿತ್ತು. ಎಲ್ಲ ಹಿರಿಯರ ಮುಂದೆ ಇಂತಿಂಥ ಸಮಸ್ಯೆ ಇದೆ ಎಂದು ಹೇಳಬೇಕಿತ್ತು. ಅವರಿಂದ ಆಗಿರೋ ತಪ್ಪು ಏನೆಂದು ಹೇಳಬೇಕಿತ್ತು. ಕೆಲವು ಸಚಿವರು ಶಾಸಕರು ಹೇಳ್ತಾರೆ, ಭಯೋತ್ಪಾದನಾ ಕೃತ್ಯಕ್ಕೆ ಬೆಂಬಲ ನೀಡುತ್ತಿದ್ದರು ಅಂತ. ಅದಕ್ಕೆ ದಾಖಲೆ ಎಲ್ಲಿದೆ. ಸೂಕ್ತ ದಾಖಲೆ ಜನರ ಮುಂದಿಟ್ಟು ಯಾರನ್ನಾದರೂ ಬ್ಯಾನ್ ಮಾಡಿ, ಬೇಡ ಅನ್ನಲ್ಲ. ನಾಳೆ ಆರ್ ಎಸ್ ಎಸ್ ಬ್ಯಾನ್ ಮಾಡ್ತೀರೊ, ಪಿಎಫ್ಐ ಬ್ಯಾನ್ ಮಾಡ್ತೀರೊ, ಎಸ್ ಡಿ ಪಿಐ ಬ್ಯಾನ್ ಮಾಡ್ತೀರೊ ಅದು ಸರ್ಕಾರದ ನಿರ್ಧಾರ. ಆದರೆ ಜನ ಕೇಳ್ತಿದ್ದಾರೆ, ಬ್ಯಾನ್ ಮಾಡಲು ಕಾರಣ ಏನು ಹೇಳಿಯಂತ. ಬ್ಯಾನ್ ಮಾಡಲು ನೈಜ ಕಾರಣ ಏನು ಹೇಳಿ.

ನಾನು ತಪ್ಪು ಮಾಡಿದ್ದರೆ ಶಿಕ್ಷೆ ಆಗಬೇಕು ಅಲ್ಲವೇ, ತಪ್ಪೇ ಮಾಡದೆ ಶಿಕ್ಷೆ ಆದರೆ ಹೇಗೆ. ಹಾಗಾಗಿ ಸೂಕ್ತ ದಾಖಲೆ ನೀಡಿ ಜನರಿಗೆ ಅರ್ಥ ಮಾಡಿಸಿ. ಸರ್ವ ಪಕ್ಷಗಳ ಸಭೆ ಮುಂದೆ ಎಲ್ಲವನ್ನೂ ಹೇಳಿ. ನನಗನಿಸುತ್ತೆ ಖಂಡಿತ ಇದು ದುಡುಕಿನ ನಿರ್ಧಾರ, ಮಾತ್ರವಲ್ಲ ರಾಜಕೀಯ ಲಾಭಕ್ಕಾಗಿ ಮಾಡಿರೋ ನಿರ್ಧಾರ ಅಂತ. ಚುನಾವಣೆ ಹತ್ತಿರ ಬರುತ್ತಿರುವುದಕ್ಕೆ ಮಾಡಿರುವ ನಿರ್ಧಾರ ಎಂದು ಟೀಕೆ ಮಾಡಿದ್ದಾರೆ. ಇವರು ಬ್ಯಾನ್ ಮಾಡೋದೇ ಆಗಿದ್ದರೆ, ಪಿಎಫ್ ಐ, ಎಸ್ ಡಿ ಪಿಐ ನಿನ್ನೆ ಮೊನ್ನೆ ಹುಟ್ಟಿಕೊಂಡಿದೆಯಾ? ಹಲವು ವರ್ಷಗಳಿಂದ ಇದೆ ಅಲ್ಲವಾ. ಇವರು ಮೂರು ವರ್ಷಗಳ ಹಿಂದೆಯೇ ಬ್ಯಾನ್ ಮಾಡಬಹುದಿತ್ತಲ್ಲವೇ ? ಇದು ಚುನಾವಣೆ ಗಿಮಿಕ್ ಅಷ್ಟೇ, ಚುನಾವಣೆಗಾಗಿ ಟ್ರಿಕ್ಸ್ ಮಾಡುತ್ತಿದ್ದಾರೆ. ಇದು ಶಾಶ್ವತ ಅಲ್ಲ, ಹೀಗೆ ಮಾಡಿದ್ರೆ ನಾವೇ ಸಮಾಜದಲ್ಲಿ ಒಡಕು ಮೂಡಿಸಿದಂತೆ ಆಗುತ್ತೆ. ಈಗಾಗಲೇ ಸಮಾಜದಲ್ಲಿ ಒಡಕು ಮೂಡಿದೆ. ಎಲ್ಲ ಸಮಾಜವನ್ನು ಒಟ್ಟುಗೂಡಿಸಿ ದೇಶವನ್ನು ಬೆಳೆಸಬೇಕು. ಈ ನಿರ್ಧಾರವನ್ನು ಮತ್ತೊಮ್ಮೆ ಪರಿಶೀಲನೆ ಮಾಡಲಿ. ಎಲ್ಲಾ ಸಿಎಂಗಳು ತಮ್ಮ ರಾಜ್ಯದಿಂದ ಕೇಂದ್ರಕ್ಕೆ ಮನವಿ ಮಾಡಲಿ. ಸದನದಲ್ಲಿ ನಾನು ಕೂಡ ಈ ಬಗ್ಗೆ ಚರ್ಚೆ ಮಾಡುತ್ತೇನೆ ಎಂದು ಸಂಸದ ಪ್ರಜ್ವಲ್ ರೇವಣ್ಣ ಹೇಳಿದ್ದಾರೆ.
Prajwal Revanna slams BJP, says PFI ban is just a political game of party.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm