ಬ್ರೇಕಿಂಗ್ ನ್ಯೂಸ್
01-10-22 01:59 pm Bangalore Correspondent ಕರ್ನಾಟಕ
ಬೆಂಗಳೂರು, ಅ.1: ದಸರಾ ಹಿನ್ನೆಲೆಯಲ್ಲಿ ಅ.1ರಿಂದ 5 ದಿನಗಳ ರಜೆ ಇರುವುದರಿಂದ ರಾಜಧಾನಿ ಬೆಂಗಳೂರಿನಿಂದ ರಾಜ್ಯದ ಇತರೇ ಉಪ ನಗರಗಳಿಗೆ ತೆರಳುವ ಖಾಸಗಿ ಬಸ್ಸುಗಳ ದರವನ್ನು ದಿಢೀರ್ ಹೆಚ್ಚಳ ಮಾಡಲಾಗಿದೆ. ರಜೆಯ ಸಂದರ್ಭದಲ್ಲಿ ಬೆಂಗಳೂರಿನಲ್ಲಿ ಕೆಲಸದಲ್ಲಿರುವ ಮಂದಿ ಊರಿಗೆ ತೆರಳುವುದರಿಂದ ಜನಸಾಮಾನ್ಯರನ್ನು ದರೋಡೆ ಮಾಡಲು ಖಾಸಗಿ ಬಸ್ ಮಾಲಕರು ಮುಂದಾಗಿದ್ದಾರೆ.
ಬೆಂಗಳೂರಿನಿಂದ ಮಂಗಳೂರು, ಕುಂದಾಪುರ, ಬೆಳಗಾವಿ, ಶಿವಮೊಗ್ಗ, ಹುಬ್ಬಳ್ಳಿ ಹೀಗೆ ರಾಜ್ಯದ ಹಲವೆಡೆ ತೆರಳುವ ಖಾಸಗಿ ಬಸ್ಸುಗಳ ದರವನ್ನು ಒಂದೇ ಬಾರಿಗೆ ಡಬಲ್ ಮಾಡಲಾಗಿದೆ. ಖಾಸಗಿ ಬಸ್ಸುಗಳ ಟಿಕೆಟ್ ಬುಕ್ಕಿಂಗ್ ಏಪ್ ಗಳಲ್ಲಿ ಅ.1ರಿಂದ 5ರ ವರೆಗಿನ ಬಸ್ ದರವನ್ನು ಎರಡು ಪಟ್ಟು, ಮೂರು ಪಟ್ಟು ಏರಿಸಿದ್ದು ಕಂಡುಬಂದಿದೆ.
ಸಾಮಾನ್ಯ ದಿನಗಳಲ್ಲಿ ಬೆಂಗಳೂರು- ಉಡುಪಿ ದರವು 700-750 ಇದ್ದರೆ, ಈ ದಿನಗಳಲ್ಲಿ ಅದನ್ನು 1400-1500 ರೂಪಾಯಿಗೆ ಏರಿಕೆ ಮಾಡಲಾಗಿದೆ. ಬೆಳಗಾವಿಗೆ ಇತರೇ ದಿನಗಳಲ್ಲಿ 800-900 ರೂ. ಇದ್ದರೆ, ಈಗ ಅದನ್ನು 1100ರಿಂದ 1500 ರೂ.ಗೆ ಏರಿಸಲಾಗಿದೆ. ಹುಬ್ಬಳ್ಳಿ ಬಸ್ ಗಳ ದರವೂ ಇದೇ ರೀತಿಯಾಗಿದ್ದು, ಸಾಮಾನ್ಯ ದಿನಗಳಲ್ಲಿ 800 ರೂ. ಇದ್ದುದ್ದನ್ನು 1200ರಿಂದ 1500ಕ್ಕೆ ಏರಿಸಲಾಗಿದೆ. ಕಲಬುರ್ಗಿಯ ಬಸ್ ದರವನ್ನೂ 900 ರೂ. ಇದ್ದುದನ್ನು 1500 ಮಾಡಲಾಗಿದೆ.
ಟಿಕೆಟ್ ದರವನ್ನು ದುಪ್ಪಟ್ಟು ಮಾಡಿದ್ದರೂ, ಹೆಚ್ಚಿನ ಟ್ರಾವೆಲ್ ಬಸ್ ಗಳಲ್ಲಿ ಟಿಕೆಟ್ ಭರ್ತಿಯಾಗಿವೆ. ಹೀಗಾಗಿ ಈ ದಿನಗಳಲ್ಲಿ ಹೆಚ್ಚುವರಿಯಾಗಿ ಬಸ್ ಓಡಿಸಲು ಬಸ್ ಮಾಲೀಕರು ಮುಂದಾಗಿದ್ದಾರೆ. ಹಬ್ಬದ ಸೀಸನ್ ಸಂದರ್ಭದಲ್ಲಿ ಪ್ರತಿ ಬಾರಿಯೂ ಖಾಸಗಿ ಮತ್ತು ಸರಕಾರಿ ಬಸ್ ಗಳ ದರವನ್ನು ಏರಿಸುವುದು ಮಾಮೂಲಿ ಆಗಿದೆ. ಆದರೆ ಈ ರೀತಿ ಜನರನ್ನು ಸುಲಿಯುವುದಕ್ಕೆ ಭಾರೀ ವಿರೋಧ ಬಂದಿದ್ದು ಸಾರಿಗೆ ಸಚಿವ ಶ್ರೀರಾಮುಲು ಖಾಸಗಿ ಬಸ್ ಗಳ ವಿರುದ್ಧ ದೂರು ನೀಡುವಂತೆ ಹೇಳಿದ್ದಾರೆ. ಸಾರಿಗೆ ಇಲಾಖೆಯಿಂದ ದೂರು ಪಡೆಯುವುದಕ್ಕಾಗಿಯೇ ಹೆಲ್ಪ್ ಲೈನ್ ನಂಬರ್ ಗಳನ್ನು ಕೊಡಲಾಗಿದ್ದು, 9449863249, 9449863426 ನಂಬರಿಗೆ ಕರೆ ಮಾಡಿ ದೂರು ನೀಡುವಂತೆ ಸಾರ್ವಜನಿಕರಲ್ಲಿ ಕೋರಿದೆ.
Private Bus fares zoom for festival season, public can lodge complaint if they are found looting.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm