ಬ್ರೇಕಿಂಗ್ ನ್ಯೂಸ್
03-10-22 09:13 pm HK News Desk ಕರ್ನಾಟಕ
ಮೈಸೂರು, ಅ.3: ಸಂಸದ ರಾಹುಲ್ ಗಾಂಧಿ ನಡೆಸುತ್ತಿರುವ ಭಾರತ್ ಜೋಡೊ ಪಾದಯಾತ್ರೆಯಲ್ಲಿ ಪಾಲ್ಗೊಳ್ಳಲು ಕಾಂಗ್ರೆಸ್ ಸೋನಿಯಾ ಗಾಂಧಿ ಮೈಸೂರಿಗೆ ಆಗಮಿಸಿದ್ದು, ಕಬಿನಿಯ ರೆಸಾರ್ಟ್ ನಲ್ಲಿ ವಾಸ್ತವ್ಯ ಹೂಡಿದ್ದಾರೆ.
ಮೈಸೂರಿನ ಮಂಡಕಳ್ಳಿ ನಿಲ್ದಾಣಕ್ಕೆ ವಿಶೇಷ ವಿಮಾನದಲ್ಲಿ ಆಗಮಿಸಿದ ಸೋನಿಯಾ ಅವರನ್ನು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಬರಮಾಡಿಕೊಂಡರು. ಮೈಸೂರಿಗೆ ಆಗಮಿಸಿದ ಬಳಿಕ ಮಡಿಕೇರಿಗೆ ತೆರಳಿ ಅಲ್ಲಿ ಸೋನಿಯಾ ಗಾಂಧಿ ವಾಸ್ತವ್ಯ ಹೂಡಲಿದ್ದಾರೆ ಎಂದು ಹೇಳಲಾಗಿತ್ತು. ಆದರೆ ಕೊನೆಕ್ಷಣದಲ್ಲಿ ಮಡಿಕೇರಿ ವಾಸ್ತವ್ಯ ನಿರ್ಧಾರವನ್ನು ಬದಲಾವಣೆ ಮಾಡಿದ್ದಾರೆ.

ಮಡಿಕೇರಿಯಲ್ಲಿ ಇತ್ತೀಚೆಗೆ ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆತ, ಗಲಾಟೆ ನಡೆದಿದ್ದ ಕಾರಣ ಭದ್ರತಾ ದೃಷ್ಟಿಯಿಂದ ಸೋನಿಯಾ ವಾಸ್ತವ್ಯವನ್ನು ಮಡಿಕೇರಿ ಬದಲು ಕಬಿನಿಗೆ ವರ್ಗಾಯಿಸಿದ್ದಾರೆ ಎನ್ನಲಾಗುತ್ತಿದೆ. ಕಬಿನಿಯ ರೆಸಾರ್ಟಿನಲ್ಲಿ ಸೋನಿಯಾ ಅವರು ಇನ್ನೆರಡು ದಿನ ವಾಸ್ತವ್ಯ ಹೂಡಲಿದ್ದು, ಅಲ್ಲಿಯೇ ಕಾಂಗ್ರೆಸ್ ಪ್ರಮುಖರ ಜೊತೆಗೆ ಮಾತುಕತೆ ನಡೆಸಲಿದ್ದಾರೆ.


ದಸರಾ ಹಬ್ಬದ ನಿಮಿತ್ತ ಅ.4 ಮತ್ತು 5ರಂದು ಭಾರತ್ ಜೋಡೊ ಯಾತ್ರೆ ಇರುವುದಿಲ್ಲ. ಎರಡು ದಿನಗಳ ಯಾತ್ರೆಯನ್ನು ರದ್ದುಪಡಿಸಲಿದ್ದು, 6ರಂದು ಮತ್ತೆ ಯಾತ್ರೆ ಮಂಡ್ಯದ ಪಾಂಡವಪುರದಿಂದ ಶುರುವಾಗಲಿದೆ. ಸೋಮವಾರ ಶ್ರೀರಂಗಪಟ್ಟಣ ದಾಟಿ ಮಂಡ್ಯಕ್ಕೆ ಪಾದಯಾತ್ರೆ ತಲುಪಿತ್ತು. 6ರಂದು ಸೋನಿಯಾ ಗಾಂಧಿ, ರಾಹುಲ್ ಜೊತೆಗೆ ಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಎರಡು ದಿನಗಳ ವಿಶ್ರಾಂತಿ ಸಂದರ್ಭದಲ್ಲಿ ರಾಹುಲ್, ಸೋನಿಯಾ ಮತ್ತು ರಾಜ್ಯದ ಕಾಂಗ್ರೆಸ್ ನಾಯಕರು ಕಬಿನಿ ರೆಸಾರ್ಟಿನಲ್ಲಿ ಮಹತ್ವದ ಮಾತುಕತೆ, ಸಭೆಯನ್ನು ನಡೆಸಲಿದ್ದಾರೆ. ಇದರಲ್ಲಿ ಪಕ್ಷದ ಕೇಂದ್ರ ಮಟ್ಟದ ನಾಯಕರು ಕೂಡ ಪಾಲ್ಗೊಳ್ಳಲಿದ್ದಾರೆ.
All India Congress Committee (AICC) leader Sonia Gandhi arrived in Mysuru airport on Monday. She is scheduled to join the Bharat Jodo Yatra led by Congress leader Rahul Gandhi on October 6, said sources in the Congress.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm