ಬ್ರೇಕಿಂಗ್ ನ್ಯೂಸ್
03-10-22 09:13 pm HK News Desk ಕರ್ನಾಟಕ
ಮೈಸೂರು, ಅ.3: ಸಂಸದ ರಾಹುಲ್ ಗಾಂಧಿ ನಡೆಸುತ್ತಿರುವ ಭಾರತ್ ಜೋಡೊ ಪಾದಯಾತ್ರೆಯಲ್ಲಿ ಪಾಲ್ಗೊಳ್ಳಲು ಕಾಂಗ್ರೆಸ್ ಸೋನಿಯಾ ಗಾಂಧಿ ಮೈಸೂರಿಗೆ ಆಗಮಿಸಿದ್ದು, ಕಬಿನಿಯ ರೆಸಾರ್ಟ್ ನಲ್ಲಿ ವಾಸ್ತವ್ಯ ಹೂಡಿದ್ದಾರೆ.
ಮೈಸೂರಿನ ಮಂಡಕಳ್ಳಿ ನಿಲ್ದಾಣಕ್ಕೆ ವಿಶೇಷ ವಿಮಾನದಲ್ಲಿ ಆಗಮಿಸಿದ ಸೋನಿಯಾ ಅವರನ್ನು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಬರಮಾಡಿಕೊಂಡರು. ಮೈಸೂರಿಗೆ ಆಗಮಿಸಿದ ಬಳಿಕ ಮಡಿಕೇರಿಗೆ ತೆರಳಿ ಅಲ್ಲಿ ಸೋನಿಯಾ ಗಾಂಧಿ ವಾಸ್ತವ್ಯ ಹೂಡಲಿದ್ದಾರೆ ಎಂದು ಹೇಳಲಾಗಿತ್ತು. ಆದರೆ ಕೊನೆಕ್ಷಣದಲ್ಲಿ ಮಡಿಕೇರಿ ವಾಸ್ತವ್ಯ ನಿರ್ಧಾರವನ್ನು ಬದಲಾವಣೆ ಮಾಡಿದ್ದಾರೆ.
ಮಡಿಕೇರಿಯಲ್ಲಿ ಇತ್ತೀಚೆಗೆ ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆತ, ಗಲಾಟೆ ನಡೆದಿದ್ದ ಕಾರಣ ಭದ್ರತಾ ದೃಷ್ಟಿಯಿಂದ ಸೋನಿಯಾ ವಾಸ್ತವ್ಯವನ್ನು ಮಡಿಕೇರಿ ಬದಲು ಕಬಿನಿಗೆ ವರ್ಗಾಯಿಸಿದ್ದಾರೆ ಎನ್ನಲಾಗುತ್ತಿದೆ. ಕಬಿನಿಯ ರೆಸಾರ್ಟಿನಲ್ಲಿ ಸೋನಿಯಾ ಅವರು ಇನ್ನೆರಡು ದಿನ ವಾಸ್ತವ್ಯ ಹೂಡಲಿದ್ದು, ಅಲ್ಲಿಯೇ ಕಾಂಗ್ರೆಸ್ ಪ್ರಮುಖರ ಜೊತೆಗೆ ಮಾತುಕತೆ ನಡೆಸಲಿದ್ದಾರೆ.
ದಸರಾ ಹಬ್ಬದ ನಿಮಿತ್ತ ಅ.4 ಮತ್ತು 5ರಂದು ಭಾರತ್ ಜೋಡೊ ಯಾತ್ರೆ ಇರುವುದಿಲ್ಲ. ಎರಡು ದಿನಗಳ ಯಾತ್ರೆಯನ್ನು ರದ್ದುಪಡಿಸಲಿದ್ದು, 6ರಂದು ಮತ್ತೆ ಯಾತ್ರೆ ಮಂಡ್ಯದ ಪಾಂಡವಪುರದಿಂದ ಶುರುವಾಗಲಿದೆ. ಸೋಮವಾರ ಶ್ರೀರಂಗಪಟ್ಟಣ ದಾಟಿ ಮಂಡ್ಯಕ್ಕೆ ಪಾದಯಾತ್ರೆ ತಲುಪಿತ್ತು. 6ರಂದು ಸೋನಿಯಾ ಗಾಂಧಿ, ರಾಹುಲ್ ಜೊತೆಗೆ ಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಎರಡು ದಿನಗಳ ವಿಶ್ರಾಂತಿ ಸಂದರ್ಭದಲ್ಲಿ ರಾಹುಲ್, ಸೋನಿಯಾ ಮತ್ತು ರಾಜ್ಯದ ಕಾಂಗ್ರೆಸ್ ನಾಯಕರು ಕಬಿನಿ ರೆಸಾರ್ಟಿನಲ್ಲಿ ಮಹತ್ವದ ಮಾತುಕತೆ, ಸಭೆಯನ್ನು ನಡೆಸಲಿದ್ದಾರೆ. ಇದರಲ್ಲಿ ಪಕ್ಷದ ಕೇಂದ್ರ ಮಟ್ಟದ ನಾಯಕರು ಕೂಡ ಪಾಲ್ಗೊಳ್ಳಲಿದ್ದಾರೆ.
All India Congress Committee (AICC) leader Sonia Gandhi arrived in Mysuru airport on Monday. She is scheduled to join the Bharat Jodo Yatra led by Congress leader Rahul Gandhi on October 6, said sources in the Congress.
14-08-25 03:51 pm
Bangalore Correspondent
DK Shivakumar, Dharmasthala, Virendra Heggade...
14-08-25 03:49 pm
IPS Alok Kumar, News: ಪೊಲೀಸ್ ಶಾಲೆಗಳಲ್ಲೇ ಲಂಚ,...
14-08-25 01:48 pm
Dharmasthala Case, Dinesh Gundu Rao: ಮತ್ತೆ ಗು...
13-08-25 07:03 pm
ವಜಾ ಹಿಂದೆ ದೊಡ್ಡ ಷಡ್ಯಂತ್ರ ಆಗಿದೆ, ರಾಹುಲ್ ಗಾಂಧಿ...
12-08-25 10:39 pm
14-08-25 11:26 am
HK News Desk
ತಾಯಿ ಜೊತೆ ಅಂಡಮಾನ್ ಹೋಗ್ತೀನಿ ಎಂದಿದ್ದ ಮಗಳು ; ಬೇಡ...
13-08-25 11:56 am
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
'ದೇಶ ಸುರಕ್ಷಿತ ಕೈಯಲ್ಲಿದೆ' ; ನರೇಂದ್ರ ಮೋದಿ ಸರ್ಕ...
12-08-25 02:49 pm
ಕಾಶ್ಮೀರಿ ಪಂಡಿತರ ಗುರಿಯಾಗಿಸಿ ಮಾರಣಹೋಮ ; 35 ವರ್ಷಗ...
12-08-25 11:42 am
14-08-25 01:12 pm
Mangaluru Staff
Bantwal Deputy Tahsildar, Lokayukta: 20 ಸಾವಿರ...
13-08-25 10:22 pm
Dharmasthala News Today, Point No 13: ಕಡೆಗೂ ಪ...
13-08-25 10:01 pm
The Ocean Pearl Brings “Flavors of India” to...
13-08-25 08:23 pm
ಹಠಾತ್ ಕುಸಿದು ಬಿದ್ದು ಕಾಲೇಜು ಬಸ್ ನಿರ್ವಾಹಕ ಸಾವು...
13-08-25 01:49 pm
14-08-25 11:51 am
HK Staff
Fake Stock Market Scam, Fraud: 10 ಲಕ್ಷ ಹೂಡಿಕೆ...
13-08-25 05:40 pm
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm
Mangalore Digital Arrest, Fraud: ಚೀನಾಕ್ಕೆ ಡ್ರ...
11-08-25 12:37 pm