ಬ್ರೇಕಿಂಗ್ ನ್ಯೂಸ್
03-10-22 09:13 pm HK News Desk ಕರ್ನಾಟಕ
ಮೈಸೂರು, ಅ.3: ಸಂಸದ ರಾಹುಲ್ ಗಾಂಧಿ ನಡೆಸುತ್ತಿರುವ ಭಾರತ್ ಜೋಡೊ ಪಾದಯಾತ್ರೆಯಲ್ಲಿ ಪಾಲ್ಗೊಳ್ಳಲು ಕಾಂಗ್ರೆಸ್ ಸೋನಿಯಾ ಗಾಂಧಿ ಮೈಸೂರಿಗೆ ಆಗಮಿಸಿದ್ದು, ಕಬಿನಿಯ ರೆಸಾರ್ಟ್ ನಲ್ಲಿ ವಾಸ್ತವ್ಯ ಹೂಡಿದ್ದಾರೆ.
ಮೈಸೂರಿನ ಮಂಡಕಳ್ಳಿ ನಿಲ್ದಾಣಕ್ಕೆ ವಿಶೇಷ ವಿಮಾನದಲ್ಲಿ ಆಗಮಿಸಿದ ಸೋನಿಯಾ ಅವರನ್ನು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಬರಮಾಡಿಕೊಂಡರು. ಮೈಸೂರಿಗೆ ಆಗಮಿಸಿದ ಬಳಿಕ ಮಡಿಕೇರಿಗೆ ತೆರಳಿ ಅಲ್ಲಿ ಸೋನಿಯಾ ಗಾಂಧಿ ವಾಸ್ತವ್ಯ ಹೂಡಲಿದ್ದಾರೆ ಎಂದು ಹೇಳಲಾಗಿತ್ತು. ಆದರೆ ಕೊನೆಕ್ಷಣದಲ್ಲಿ ಮಡಿಕೇರಿ ವಾಸ್ತವ್ಯ ನಿರ್ಧಾರವನ್ನು ಬದಲಾವಣೆ ಮಾಡಿದ್ದಾರೆ.

ಮಡಿಕೇರಿಯಲ್ಲಿ ಇತ್ತೀಚೆಗೆ ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆತ, ಗಲಾಟೆ ನಡೆದಿದ್ದ ಕಾರಣ ಭದ್ರತಾ ದೃಷ್ಟಿಯಿಂದ ಸೋನಿಯಾ ವಾಸ್ತವ್ಯವನ್ನು ಮಡಿಕೇರಿ ಬದಲು ಕಬಿನಿಗೆ ವರ್ಗಾಯಿಸಿದ್ದಾರೆ ಎನ್ನಲಾಗುತ್ತಿದೆ. ಕಬಿನಿಯ ರೆಸಾರ್ಟಿನಲ್ಲಿ ಸೋನಿಯಾ ಅವರು ಇನ್ನೆರಡು ದಿನ ವಾಸ್ತವ್ಯ ಹೂಡಲಿದ್ದು, ಅಲ್ಲಿಯೇ ಕಾಂಗ್ರೆಸ್ ಪ್ರಮುಖರ ಜೊತೆಗೆ ಮಾತುಕತೆ ನಡೆಸಲಿದ್ದಾರೆ.


ದಸರಾ ಹಬ್ಬದ ನಿಮಿತ್ತ ಅ.4 ಮತ್ತು 5ರಂದು ಭಾರತ್ ಜೋಡೊ ಯಾತ್ರೆ ಇರುವುದಿಲ್ಲ. ಎರಡು ದಿನಗಳ ಯಾತ್ರೆಯನ್ನು ರದ್ದುಪಡಿಸಲಿದ್ದು, 6ರಂದು ಮತ್ತೆ ಯಾತ್ರೆ ಮಂಡ್ಯದ ಪಾಂಡವಪುರದಿಂದ ಶುರುವಾಗಲಿದೆ. ಸೋಮವಾರ ಶ್ರೀರಂಗಪಟ್ಟಣ ದಾಟಿ ಮಂಡ್ಯಕ್ಕೆ ಪಾದಯಾತ್ರೆ ತಲುಪಿತ್ತು. 6ರಂದು ಸೋನಿಯಾ ಗಾಂಧಿ, ರಾಹುಲ್ ಜೊತೆಗೆ ಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಎರಡು ದಿನಗಳ ವಿಶ್ರಾಂತಿ ಸಂದರ್ಭದಲ್ಲಿ ರಾಹುಲ್, ಸೋನಿಯಾ ಮತ್ತು ರಾಜ್ಯದ ಕಾಂಗ್ರೆಸ್ ನಾಯಕರು ಕಬಿನಿ ರೆಸಾರ್ಟಿನಲ್ಲಿ ಮಹತ್ವದ ಮಾತುಕತೆ, ಸಭೆಯನ್ನು ನಡೆಸಲಿದ್ದಾರೆ. ಇದರಲ್ಲಿ ಪಕ್ಷದ ಕೇಂದ್ರ ಮಟ್ಟದ ನಾಯಕರು ಕೂಡ ಪಾಲ್ಗೊಳ್ಳಲಿದ್ದಾರೆ.
All India Congress Committee (AICC) leader Sonia Gandhi arrived in Mysuru airport on Monday. She is scheduled to join the Bharat Jodo Yatra led by Congress leader Rahul Gandhi on October 6, said sources in the Congress.
09-11-25 06:53 pm
Bangalore Correspondent
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
09-11-25 07:49 pm
HK News Desk
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 03:50 pm
Mangalore Correspondent
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm