ಬ್ರೇಕಿಂಗ್ ನ್ಯೂಸ್
03-10-22 09:13 pm HK News Desk ಕರ್ನಾಟಕ
ಮೈಸೂರು, ಅ.3: ಸಂಸದ ರಾಹುಲ್ ಗಾಂಧಿ ನಡೆಸುತ್ತಿರುವ ಭಾರತ್ ಜೋಡೊ ಪಾದಯಾತ್ರೆಯಲ್ಲಿ ಪಾಲ್ಗೊಳ್ಳಲು ಕಾಂಗ್ರೆಸ್ ಸೋನಿಯಾ ಗಾಂಧಿ ಮೈಸೂರಿಗೆ ಆಗಮಿಸಿದ್ದು, ಕಬಿನಿಯ ರೆಸಾರ್ಟ್ ನಲ್ಲಿ ವಾಸ್ತವ್ಯ ಹೂಡಿದ್ದಾರೆ.
ಮೈಸೂರಿನ ಮಂಡಕಳ್ಳಿ ನಿಲ್ದಾಣಕ್ಕೆ ವಿಶೇಷ ವಿಮಾನದಲ್ಲಿ ಆಗಮಿಸಿದ ಸೋನಿಯಾ ಅವರನ್ನು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಬರಮಾಡಿಕೊಂಡರು. ಮೈಸೂರಿಗೆ ಆಗಮಿಸಿದ ಬಳಿಕ ಮಡಿಕೇರಿಗೆ ತೆರಳಿ ಅಲ್ಲಿ ಸೋನಿಯಾ ಗಾಂಧಿ ವಾಸ್ತವ್ಯ ಹೂಡಲಿದ್ದಾರೆ ಎಂದು ಹೇಳಲಾಗಿತ್ತು. ಆದರೆ ಕೊನೆಕ್ಷಣದಲ್ಲಿ ಮಡಿಕೇರಿ ವಾಸ್ತವ್ಯ ನಿರ್ಧಾರವನ್ನು ಬದಲಾವಣೆ ಮಾಡಿದ್ದಾರೆ.

ಮಡಿಕೇರಿಯಲ್ಲಿ ಇತ್ತೀಚೆಗೆ ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆತ, ಗಲಾಟೆ ನಡೆದಿದ್ದ ಕಾರಣ ಭದ್ರತಾ ದೃಷ್ಟಿಯಿಂದ ಸೋನಿಯಾ ವಾಸ್ತವ್ಯವನ್ನು ಮಡಿಕೇರಿ ಬದಲು ಕಬಿನಿಗೆ ವರ್ಗಾಯಿಸಿದ್ದಾರೆ ಎನ್ನಲಾಗುತ್ತಿದೆ. ಕಬಿನಿಯ ರೆಸಾರ್ಟಿನಲ್ಲಿ ಸೋನಿಯಾ ಅವರು ಇನ್ನೆರಡು ದಿನ ವಾಸ್ತವ್ಯ ಹೂಡಲಿದ್ದು, ಅಲ್ಲಿಯೇ ಕಾಂಗ್ರೆಸ್ ಪ್ರಮುಖರ ಜೊತೆಗೆ ಮಾತುಕತೆ ನಡೆಸಲಿದ್ದಾರೆ.


ದಸರಾ ಹಬ್ಬದ ನಿಮಿತ್ತ ಅ.4 ಮತ್ತು 5ರಂದು ಭಾರತ್ ಜೋಡೊ ಯಾತ್ರೆ ಇರುವುದಿಲ್ಲ. ಎರಡು ದಿನಗಳ ಯಾತ್ರೆಯನ್ನು ರದ್ದುಪಡಿಸಲಿದ್ದು, 6ರಂದು ಮತ್ತೆ ಯಾತ್ರೆ ಮಂಡ್ಯದ ಪಾಂಡವಪುರದಿಂದ ಶುರುವಾಗಲಿದೆ. ಸೋಮವಾರ ಶ್ರೀರಂಗಪಟ್ಟಣ ದಾಟಿ ಮಂಡ್ಯಕ್ಕೆ ಪಾದಯಾತ್ರೆ ತಲುಪಿತ್ತು. 6ರಂದು ಸೋನಿಯಾ ಗಾಂಧಿ, ರಾಹುಲ್ ಜೊತೆಗೆ ಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಎರಡು ದಿನಗಳ ವಿಶ್ರಾಂತಿ ಸಂದರ್ಭದಲ್ಲಿ ರಾಹುಲ್, ಸೋನಿಯಾ ಮತ್ತು ರಾಜ್ಯದ ಕಾಂಗ್ರೆಸ್ ನಾಯಕರು ಕಬಿನಿ ರೆಸಾರ್ಟಿನಲ್ಲಿ ಮಹತ್ವದ ಮಾತುಕತೆ, ಸಭೆಯನ್ನು ನಡೆಸಲಿದ್ದಾರೆ. ಇದರಲ್ಲಿ ಪಕ್ಷದ ಕೇಂದ್ರ ಮಟ್ಟದ ನಾಯಕರು ಕೂಡ ಪಾಲ್ಗೊಳ್ಳಲಿದ್ದಾರೆ.
All India Congress Committee (AICC) leader Sonia Gandhi arrived in Mysuru airport on Monday. She is scheduled to join the Bharat Jodo Yatra led by Congress leader Rahul Gandhi on October 6, said sources in the Congress.
27-05-26 06:26 pm
HK News Staffer
ನಾಗಲಕ್ಷ್ಮಿಗೆ ಸುತ್ತಿಕೊಂಡ ಮತ್ತೊಂದು ವಿವಾದ ; ಉಡುಪ...
27-05-26 04:58 pm
ಡಿಕೆಗೆ ಪಟ್ಟ ; ಬಹುತೇಕ ಸಚಿವರಿಗೆ ಕೊಕ್- ಹೊಸಬರಿಗೆ...
27-05-26 01:41 pm
ರಾಜ್ಯ ರಾಜಕೀಯದಲ್ಲಿ ಭಾರೀ ಕ್ಲೈಮ್ಯಾಕ್ಸ್ ; ಸಿಎಂ ಸಿ...
26-05-26 11:03 pm
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
27-05-26 12:29 pm
HK News Desk
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
27-05-26 08:34 pm
HK News Staffer
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm
ಇಸ್ರೇಲ್ನಿಂದ ರಜೆ ಮೇಲೆ ಊರಿಗೆ ಬಂದವನ ದುರಂತ ಅಂತ್ಯ...
26-05-26 02:43 pm