ಬ್ರೇಕಿಂಗ್ ನ್ಯೂಸ್
03-10-22 10:57 pm HK News Desk ಕರ್ನಾಟಕ
ಕಾರವಾರ, ಅ.3 : ಹೊನ್ನಾವರ ಪರೇಶ್ ಮೇಸ್ತಾ ಹತ್ಯೆ ಪ್ರಕರಣದಲ್ಲಿ ತನಿಖೆ ನಡೆಸಿದ ಸಿಬಿಐ ಅಧಿಕಾರಿಗಳು ನ್ಯಾಯಾಲಯಕ್ಕೆ ವರದಿ ಸಲ್ಲಿಸಿದ್ದು ಪರೇಶ್ ಮೇಸ್ತನದ್ದು ಹತ್ಯೆಯಲ್ಲ, ಆಕಸ್ಮಿಕ ಸಾವು ಎಂದು ವರದಿ ನೀಡಿದೆ.
ಹೊನ್ನಾವರ ನ್ಯಾಯಾಲಯಕ್ಕೆ ಸಿಬಿಐ ತಂಡ ವರದಿ ಸಲ್ಲಿಸಿದ್ದು ವರದಿ ಪರಿಶೀಲಿಸಿದ ಹೊನ್ನಾವರ ನ್ಯಾಯಾಲಯ ನವಂಬರ್ 16ಕ್ಕೆ ತೀರ್ಪು ಮುಂದೂಡಿದೆ. 2017ರ ಡಿಸೆಂಬರ್ 6ರಂದು ಹೊನ್ನಾವರದಲ್ಲಿ ನಡೆದ ಗಲಭೆಯಲ್ಲಿ ಮೀನುಗಾರ ಯುವಕ ಪರೇಶ್ ಮೇಸ್ತಾ ಕಾಣೆಯಾಗಿದ್ದ. ಎರಡು ದಿನಗಳ ನಂತರ ಡಿಸೆಂಬರ್ 8ರಂದು ಹೊನ್ನಾವರ ನಗರದ ಶನಿ ದೇವಸ್ಥಾನದ ಹಿಂಭಾಗದ ಶೆಟ್ಟಿ ಕೆರೆಯಲ್ಲಿ ಪರೇಶ್ ಮೇಸ್ತನ ಶವವಾಗಿ ಪತ್ತೆಯಾಗಿತ್ತು. ಆತನನ್ನು ಅನ್ಯ ಕೋಮಿನವರು ಹತ್ಯೆ ಮಾಡಿದ್ದಾರೆಂದು ಹಿಂದೂ ಸಂಘಟನೆಗಳು ಹಾಗೂ ಬಿಜೆಪಿ ನಾಯಕರು ಆರೋಪಿಸಿದ್ದರು.


ಈತನನ್ನು ಹಿಂದು ಸಂಘಟನೆಗಳು ಹಿಂದು ಕಾರ್ಯಕರ್ತ ಎಂದು ಬಿಂಬಿಸಿದ್ದರಿಂದ ಕೋಮು ಸಂಘರ್ಷಕ್ಕೂ ಕಾರಣವಾಗಿತ್ತು. ಇದೇ ವಿಚಾರದಲ್ಲಿ ಹೊನ್ನಾವರದಲ್ಲಿ ಭಾರೀ ಗಲಾಟೆಯೂ ನಡೆದಿತ್ತು. ಅಂದಿನ ಸಿದ್ದರಾಮಯ್ಯ ಸರ್ಕಾರ ಒತ್ತಡಕ್ಕೆ ಬಿದ್ದು ಪ್ರಕರಣವನ್ನು ಸಿಬಿಐಗೆ ವಹಿಸಿತ್ತು. ಐದು ಜನರನ್ನು ಪೊಲೀಸರು ಪ್ರಕರಣದಲ್ಲಿ ಬಂಧಿಸಿದ್ದರು. ಬಳಿಕ ನಾಲ್ಕೂವರೆ ವರ್ಷದ ಕಾಲ ತನಿಖೆ ನಡೆಸಿದ ಸಿಬಿಐ ಅಧಿಕಾರಿಗಳು ಕೂಲಂಕಷ ತನಿಖೆಯ ಬಳಿಕ ಕೋರ್ಟಿಗೆ ವರದಿ ಸಲ್ಲಿಸಿದ್ದಾರೆ.
Paresh Mesta death was not murder it was an accidental death says CBI report to court. Paresh Mesta, a resident of Tulasinagar in Honnavar taluk was murdered on December 6, 2017 in Honnavar. His body was found floating in Honnavar’s Shettikere lake on December 8, 2017.
24-12-25 11:20 pm
Bangalore Correspondent
ಶಿವಮೊಗ್ಗ ; ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದ...
24-12-25 10:26 pm
MLA Byrathi Basavaraj, Bikklu Shiva Murder Ca...
24-12-25 04:07 pm
ಗಾಳಿಯಲ್ಲಿ ಗುಂಡು ಹಾರಿಸಿ ಉಡಚಣ ಸ್ವಾಮೀಜಿ ರಂಪಾಟ ;...
22-12-25 11:09 pm
ಕ್ರಿಮಿನಲ್ ಹಿನ್ನೆಲೆಯ ವ್ಯಕ್ತಿಯ ಹುಟ್ಟುಹಬ್ಬದಲ್ಲಿ...
22-12-25 10:30 pm
24-12-25 11:13 pm
HK News Desk
ಅಯೋಧ್ಯೆ ಮಂದಿರಕ್ಕೆ ಚಿನ್ನ, ವಜ್ರ, ಪಚ್ಚೆ ಕಲ್ಲುಗಳಿ...
24-12-25 07:38 pm
ಹಿಂಸೆಗೆ ನಲುಗಿದ ಬಾಂಗ್ಲಾ ; ಹಿಂದುಗಳನ್ನು ಗುರಿಯಾಗಿ...
23-12-25 03:28 pm
ಭಾರತ ಹಿಂದೂ ರಾಷ್ಟ್ರ ಎನ್ನಲು ಸಾಂವಿಧಾನಿಕ ಅನುಮೋದನೆ...
22-12-25 06:32 pm
ಶಬರಿಮಲೆ ಚಿನ್ನ ಕಳವು ; ಬೆಂಗಳೂರಿನ ಜುವೆಲ್ಲರಿ ಮಾಲೀ...
20-12-25 01:51 pm
24-12-25 10:30 pm
Mangalore Correspondent
ಬಜಪೆಯಲ್ಲಿ ಕಾಂಗ್ರೆಸ್ ಓಟಕ್ಕೆ ಎಸ್ಡಿಪಿಐ ಅಡ್ಡಗಾಲು...
24-12-25 06:07 pm
ವಿದ್ಯಾರ್ಥಿಗಳ ಕುಸಿತ, ಅಸ್ತಿತ್ವ ಕಳಕೊಂಡ ಸಣ್ಣ ಕಾಲೇ...
24-12-25 12:23 pm
ಬಜಪೆ ಪಟ್ಟಣ ಪಂಚಾಯತ್ ಚುನಾವಣೆ ; ಬಿಜೆಪಿಗೆ ಸ್ಪಷ್ಟ...
24-12-25 12:02 pm
MLA Vedavyas Kamath: ಮಹಾನಗರ ಪಾಲಿಕೆ ಕಾಂಗ್ರೆಸ್...
23-12-25 10:51 pm
23-12-25 01:41 pm
Mangalore Correspondent
ನೀವು 24 ಸಾವಿರ ಕಟ್ಟಿದರೆ ತಿಂಗಳಿಗೆ 20 ಲಕ್ಷ, ಕೇಂದ...
22-12-25 04:00 pm
ಹುಬ್ಬಳ್ಳಿಯಲ್ಲಿ ಮರ್ಯಾದಾ ಹತ್ಯೆ ; 19 ವರ್ಷದ ಗರ್ಭಿ...
22-12-25 02:18 pm
Udupi Arrest, Pakistan: ಕೊಚ್ಚಿನ್ ಶಿಪ್ ಯಾರ್ಡ್...
22-12-25 01:06 pm
ಟ್ರಾಫಿಕ್ ದಂಡದ ಹೆಸರಲ್ಲಿ ಎಪಿಕೆ ಫೈಲ್ ಲಿಂಕ್ ; ಮೋಸ...
21-12-25 09:36 pm