ಬ್ರೇಕಿಂಗ್ ನ್ಯೂಸ್
09-10-20 10:54 pm Bangalore Correspondent ಕರ್ನಾಟಕ
ಬೆಂಗಳೂರು, ಅಕ್ಟೋಬರ್ 9: ರೈತರನ್ನು ಭಯೋತ್ಪಾದಕರಿಗೆ ಹೋಲಿಸಿ ಟ್ವೀಟ್ ಮಾಡಿದ್ದ ಬಾಲಿವುಡ್ ನಟಿ ಕಂಗನಾ ರಣಾವತ್ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಕೇಂದ್ರ ಕೃಷಿ ಮಸೂದೆಯನ್ನು ವಿರೋಧಿಸಿ ಪ್ರತಿಭಟಿಸಿದ ಪಂಜಾಬ್ ರೈತರನ್ನು ಪರೋಕ್ಷವಾಗಿ ಕಂಗನಾ ರಣಾವತ್ ಭಯೋತ್ಪಾದಕರಿಗೆ ಹೋಲಿಸಿ ಟ್ವೀಟ್ ಮಾಡಿದ್ದರು. ಕಂಗನಾ ಅವರ ಹೇಳಿಕೆಯನ್ನು ಖಂಡಿಸಿ ಕರ್ನಾಟಕದ ಹೈಕೋರ್ಟ್ ವಕೀಲ ರಮೇಶ್ ನಾಯಕ್, ತುಮಕೂರು ಕೋರ್ಟ್ನಲ್ಲಿ ಕೇಸ್ ದಾಖಲಿಸಿದ್ದರು.
ಅರ್ಜಿ ಕುರಿತು ಅ.5ರಂದು ವಿಚಾರಣೆ ನಡೆದಿದ್ದು ಆದೇಶ ಕಾಯ್ದಿರಿಸಿತ್ತು. ಶುಕ್ರವಾರ ಕೋರ್ಟ್ ಈ ಬಗ್ಗೆ ಆದೇಶ ನೀಡಿದ್ದು, ಕಂಗನಾ ವಿರುದ್ಧ ಎಫ್ಐಆರ್ ದಾಖಲಿಸಲು ತುಮಕೂರು ನಗರದ ಕ್ಯಾತಸಂದ್ರ ಪೊಲೀಸ್ ಠಾಣೆಗೆ ಸೂಚಿಸಿದೆ.
‘ಸಿಎಎ ಕಾಯ್ದೆಯಿಂದ ಒಬ್ಬನ ನಾಗರಿಕತ್ವವೂ ಹೋಗಲಿಲ್ಲ. ಆದರೆ, ಇವರು ರಕ್ತದ ಕೋಡಿಯನ್ನೇ ಹರಿಸಿದರು. ಅದೇ ಭಯೋತ್ಪಾದಕರು ಈಗ ಪ್ರತಿಭಟಿಸುತ್ತಿದ್ದಾರೆ. ಮಲಗಿದವರನ್ನು ಎಬ್ಬಿಸಬಹುದು, ಆದರೆ ಮಲಗಿದ ರೀತಿ ನಟಿಸುವವರನ್ನು ಎಬ್ಬಿಸಲಾಗದು. ದಡ್ಡರಂತೆ ನಟಿಸುತ್ತಿರುವವರಿಗೆ ಏನು ಹೇಳಿದರೂ ಪ್ರಯೋಜನ ಇರಲ್ಲ ಎಂದು ಕಂಗನಾ ಟ್ವೀಟ್ ಮಾಡಿದ್ದರು.
ನಟಿ ಕಂಗನಾ ಟ್ವೀಟ್ಗೆ ನೆಟ್ಟಿಗರ ಕಡೆಯಿಂದ ವಿರೋಧ ವ್ಯಕ್ತವಾಗುತ್ತಿದ್ದಂತೆ ಮತ್ತೊಂದು ಟ್ವೀಟ್ ಮಾಡಿದ್ದ ಕಂಗನಾ, ಪಪ್ಪು ಸೇನೆ ಸುಳ್ಳು ಸುದ್ದಿಗಳನ್ನು ಮುಂದಿಟ್ಟು ಗಲಾಟೆ ಎಬ್ಬಿಸುತ್ತಿದೆ. ನಾನು ರೈತರನ್ನು ಭಯೋತ್ಪಾದಕರು ಎಂದಿಲ್ಲ. ನಾನು ಹಾಗೆ ಹೇಳಿದ್ದಾಗಿ ಸಾಬೀತು ಪಡಿಸಿದರೆ ಕ್ಷಮೆ ಕೇಳುತ್ತೇನೆ ಎಂದು ಸವಾಲು ಹಾಕಿದ್ದರು.
The Tumakuru district court has ordered an FIR or first information report against actor Kangana Ranaut over her tweet in which she had slammed the protests against the Centre's farm laws.
10-12-25 05:37 pm
Bangalore Correspondent
ಅಧಿಕಾರ ಹಂಚಿಕೆ ಬಗ್ಗೆ ಗೊಂದಲ ; ಯಾರೂ ಆ ಬಗ್ಗೆ ಮಾತನ...
10-12-25 12:58 pm
ಮಹಿಳಾ ಉದ್ಯೋಗಿಗಳಿಗೆ ಋತುಚಕ್ರ ರಜೆ ; ಹೊಟೇಲುಗಳ ಸಂಘ...
09-12-25 08:56 pm
ಶಾಲಾ ಬಸ್ಸಿನಡಿಗೆ ಬಿದ್ದು ಎಂಟು ವರ್ಷದ ಬಾಲಕಿ ದುರಂತ...
09-12-25 08:53 pm
ಕಾಂಗ್ರೆಸ್ ಗ್ಯಾರಂಟಿ ವಿರುದ್ಧ ಸುಪ್ರೀಂ ಕೋರ್ಟಿಗೆ ಅ...
08-12-25 10:39 pm
10-12-25 01:17 pm
HK News Desk
ಮಾಜಿ ಸಿಜೆಐ ಗವಾಯಿಗೆ ಶೂ ಎಸೆದಿದ್ದ ವಕೀಲ ರಾಕೇಶ್ ಕಿ...
09-12-25 11:03 pm
Goa Fire Accident, 23 dead: ಗೋವಾದ ನೈಟ್ಕ್ಲಬ್...
07-12-25 02:04 pm
ಸಂವಿಧಾನ ಪೀಠಿಕೆಯಲ್ಲಿ ಜಾತ್ಯತೀತ, ಸಮಾಜವಾದ ಪದ ಅಗತ್...
07-12-25 12:31 pm
ದೇವಾಲಯದ ಹಣ ದೇವರಿಗೆ ಸೇರಿದ್ದು, ಸಹಕಾರಿ ಬ್ಯಾಂಕುಗಳ...
06-12-25 04:58 pm
10-12-25 08:45 pm
Mangalore Correspondent
“Board Exams Made Easier: AI Shikshak Breaks...
10-12-25 06:01 pm
Mangalore Accident, Gowjee Events owner Death...
10-12-25 04:00 pm
Mangalore, Builder Encroaches Bejai Canal: ಬಿ...
09-12-25 07:30 pm
ರಿಷಬ್ ಶೆಟ್ಟಿ ತೊಡೆಯ ಮೇಲೆ ಮಲಗಿದ ದೈವ ! ಹರಕೆ ನೇಮದ...
09-12-25 05:21 pm
09-12-25 04:33 pm
Mangalore Correspondent
ಚಿನ್ನ ಅಡವಿಟ್ಟು ನಕಲಿ ಷೇರು ಮಾರುಕಟ್ಟೆಗೆ 31 ಲಕ್ಷ...
09-12-25 11:58 am
ಗಡಿಭಾಗ ತಲಪಾಡಿಯಲ್ಲಿ ಎಂಡಿಎಂಎ ಡ್ರಗ್ಸ್ ಮಾರಾಟ ; ಎರ...
08-12-25 09:29 pm
ವಿದ್ಯಾರ್ಥಿಗಳಿಗೆ ಡ್ರಗ್ಸ್ ಪೂರೈಸುತ್ತಿದ್ದ ಜಾಲ ; ಸ...
06-12-25 09:52 pm
Ganesh Gowda, Chikkamagaluru, Congress, Murde...
06-12-25 02:43 pm