ಬ್ರೇಕಿಂಗ್ ನ್ಯೂಸ್
10-10-20 10:53 am Headline Karnataka News Network ಕರ್ನಾಟಕ
ಮೈಸೂರು, ಅಕ್ಟೋಬರ್ .10 : ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ವನ್ಯಜೀವಿ ಧಾಮ ವ್ಯಾಪ್ತಿಯ ಕಾಡಿನ ದುರ್ಗಮ ಹಾದಿಯಲ್ಲಿ ಪತಿಯೊಂದಿಗೆ ಆಸ್ಪತ್ರೆಗೆ ನಡೆದು ಹೋಗುತ್ತಿದ್ದ ಗರ್ಭಿಣಿ ಕಾಡಿನ ಮಧ್ಯದಲ್ಲೇ ಮಗುವಿಗೆ ಜನ್ಮ ನೀಡಿದ್ದಾಳೆ.
ಕಾಡಿನಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ತಾಯಿ ಪತಿ ವಾಹನ ಕರೆ ತರಲು ಹೋಗಿ ಬರುವಷ್ಟು ಕಾಲ ಕಾಡಿನಲ್ಲೇ ಹಸುಗೂಸಿನ ಜತೆ ಕಳೆದಿದ್ದಾಳೆ..!
ಮಲೆ ಮಹದೇಶ್ವರ ಬೆಟ್ಟದ ತಪ್ಪಲಿನ ಅಣ್ಣೇಹೊಲ ಗ್ರಾಮದ ವೀರಣ್ಣ ಎಂಬವರ ಪತ್ನಿ ಕಮಲ(22) ಈ ಗಟ್ಟಿಗಿತ್ತಿ ತಾಯಿ. ಗುರುವಾರ ರಾತ್ರಿ ಕಮಲನಿಗೆ ಹೆರಿಗೆ ನೋವು ಕಾಣಿಸಿಕೊಂಡಿತ್ತು. ಕಾಡಂಚಿನ ಗ್ರಾಮ ಆಗಿರುವುದರಿಂದ ವಾಹನ ಸೌಲಭ್ಯ ಸಿಗದೆ ವೀರಣ್ಣ ತನ್ನ ಪತ್ನಿಯನ್ನು ನಡೆಸಿಕೊಂಡೇ ಸುಮಾರು 5 ಕಿ.ಮೀ ದೂರದಲ್ಲಿರುವ ಮಹದೇಶ್ವರ ಬೆಟ್ಟದ ಸಾರ್ವಜನಿಕ ಆಸ್ಪತ್ರೆಗೆ ಹೊರಟಿದ್ದ.
ಹೊಟ್ಟೆ ನೋವಿನೊಂದಿಗೆ ಭಾರದ ಹೆಜ್ಜೆ ಇಡುತ್ತಿದ್ದ ಗರ್ಭಿಣಿಗೆ ಕಾಡಿನ ಮಧ್ಯೆ ದಾರಿಯಲ್ಲೇ ಹೆರಿಗೆಯಾಗಿದ್ದು ಹೆಣ್ಣು ಮಗು ಜನಿಸಿದೆ.
ಕೊನೆಗೆ, ತಾಯಿ ಮತ್ತು ಮಗುವನ್ನು ಅರ್ಧ ದಾರಿಯಲ್ಲೇ ಬಿಟ್ಟು ವಾಹನ ಕರೆತರಲೆಂದು ವೀರಣ್ಣ ಗ್ರಾಮದತ್ತ ತೆರಳಿದ್ದಾನೆ. ಈ ವೇಳೆ ಕಗ್ಗತ್ತಲಲ್ಲಿ, ಕಾಡು ಪ್ರಾಣಿಗಳ ಭಯದ ನಡುವೆ ತಾಯಿ ಮಗುವಿನೊಂದಿಗೆ ಸಮಯ ಕಳೆದಿದ್ದಾಳೆ. ಬಳಿಕ ಪತಿ ವೀರಣ್ಣ ನೆರೆ ಹೊರೆಯವರ ಬಳಿ ಹೇಳಿ ಸರಕು ಸಾಗಣೆ ವಾಹನವನ್ನು ಕರೆತಂದಿದ್ದು ಅದರಲ್ಲಿ ತಾಯಿ ಮತ್ತು ಮಗುವನ್ನು ಆಸ್ಪತ್ರೆಗೆ ದಾಖಲಿಸಿದ್ದಾನೆ. ಚಿಕಿತ್ಸೆ ನೀಡಿದ ವೈದ್ಯರು ಮಗು ಮತ್ತು ತಾಯಿ ಆರೋಗ್ಯವಾಗಿರುವುದಾಗಿ ತಿಳಿಸಿದ್ದಾರೆ.
15-07-25 01:32 pm
Bangalore Correspondent
ನಟಿ ಸರೋಜಾ ದೇವಿ- ಎಸ್ಸೆಂ ಕೃಷ್ಣ ಪ್ರೇಮ ಪ್ರಸಂಗ ; ಮ...
15-07-25 12:27 pm
ಕೇವಲ 2 ಸಾವಿರ ಲಂಚ ಕೇಳಿ ಸಿಕ್ಕಿಬಿದ್ದ ಪಂಚಾಯತ್ ಪಿಡ...
15-07-25 10:35 am
ಧರ್ಮಸ್ಥಳದಲ್ಲಿ 20 ವರ್ಷಗಳಲ್ಲಾದ ಯುವತಿಯರ ನಾಪತ್ತೆ-...
14-07-25 10:44 pm
Shiradi Ghat Accident, Car: ಶಿರಾಡಿ ಘಾಟ್ ; ರಸ್...
14-07-25 01:43 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
15-07-25 10:32 am
Mangalore Correspondent
ಕಲ್ಲು ಮರಳಿನ ಸಮಸ್ಯೆಯಿಂದ ಜನರ ತಲೆಗೆ ಚಪ್ಪಡಿ ಕಲ್ಲು...
14-07-25 09:55 pm
Mrpl leakgae, Death, Fight: ಅನಿಲ ಸೋರಿಕೆಯಿಂದ ಇ...
14-07-25 07:56 pm
Mangalore, Help: ಅಪಘಾತದಲ್ಲಿ ಬಡ ಮಹಿಳೆಯ ತಲೆಗೆ ತ...
13-07-25 11:13 pm
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
15-07-25 01:13 pm
HK News Desk
Mangalore Crime, Police: ದುಬೈನಲ್ಲಿ ವಹಿವಾಟು ;...
15-07-25 11:38 am
ಮ್ಯಾಟ್ರಿಮನಿ ಸೈಟಲ್ಲಿ ಸಿಕ್ಕ ಗೆಳತಿಯಿಂದಲೇ ಮೋಸ ; ಆ...
13-07-25 05:23 pm
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm