ಬ್ರೇಕಿಂಗ್ ನ್ಯೂಸ್
10-10-20 10:53 am Headline Karnataka News Network ಕರ್ನಾಟಕ
ಮೈಸೂರು, ಅಕ್ಟೋಬರ್ .10 : ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ವನ್ಯಜೀವಿ ಧಾಮ ವ್ಯಾಪ್ತಿಯ ಕಾಡಿನ ದುರ್ಗಮ ಹಾದಿಯಲ್ಲಿ ಪತಿಯೊಂದಿಗೆ ಆಸ್ಪತ್ರೆಗೆ ನಡೆದು ಹೋಗುತ್ತಿದ್ದ ಗರ್ಭಿಣಿ ಕಾಡಿನ ಮಧ್ಯದಲ್ಲೇ ಮಗುವಿಗೆ ಜನ್ಮ ನೀಡಿದ್ದಾಳೆ.
ಕಾಡಿನಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ತಾಯಿ ಪತಿ ವಾಹನ ಕರೆ ತರಲು ಹೋಗಿ ಬರುವಷ್ಟು ಕಾಲ ಕಾಡಿನಲ್ಲೇ ಹಸುಗೂಸಿನ ಜತೆ ಕಳೆದಿದ್ದಾಳೆ..!
ಮಲೆ ಮಹದೇಶ್ವರ ಬೆಟ್ಟದ ತಪ್ಪಲಿನ ಅಣ್ಣೇಹೊಲ ಗ್ರಾಮದ ವೀರಣ್ಣ ಎಂಬವರ ಪತ್ನಿ ಕಮಲ(22) ಈ ಗಟ್ಟಿಗಿತ್ತಿ ತಾಯಿ. ಗುರುವಾರ ರಾತ್ರಿ ಕಮಲನಿಗೆ ಹೆರಿಗೆ ನೋವು ಕಾಣಿಸಿಕೊಂಡಿತ್ತು. ಕಾಡಂಚಿನ ಗ್ರಾಮ ಆಗಿರುವುದರಿಂದ ವಾಹನ ಸೌಲಭ್ಯ ಸಿಗದೆ ವೀರಣ್ಣ ತನ್ನ ಪತ್ನಿಯನ್ನು ನಡೆಸಿಕೊಂಡೇ ಸುಮಾರು 5 ಕಿ.ಮೀ ದೂರದಲ್ಲಿರುವ ಮಹದೇಶ್ವರ ಬೆಟ್ಟದ ಸಾರ್ವಜನಿಕ ಆಸ್ಪತ್ರೆಗೆ ಹೊರಟಿದ್ದ.

ಹೊಟ್ಟೆ ನೋವಿನೊಂದಿಗೆ ಭಾರದ ಹೆಜ್ಜೆ ಇಡುತ್ತಿದ್ದ ಗರ್ಭಿಣಿಗೆ ಕಾಡಿನ ಮಧ್ಯೆ ದಾರಿಯಲ್ಲೇ ಹೆರಿಗೆಯಾಗಿದ್ದು ಹೆಣ್ಣು ಮಗು ಜನಿಸಿದೆ.
ಕೊನೆಗೆ, ತಾಯಿ ಮತ್ತು ಮಗುವನ್ನು ಅರ್ಧ ದಾರಿಯಲ್ಲೇ ಬಿಟ್ಟು ವಾಹನ ಕರೆತರಲೆಂದು ವೀರಣ್ಣ ಗ್ರಾಮದತ್ತ ತೆರಳಿದ್ದಾನೆ. ಈ ವೇಳೆ ಕಗ್ಗತ್ತಲಲ್ಲಿ, ಕಾಡು ಪ್ರಾಣಿಗಳ ಭಯದ ನಡುವೆ ತಾಯಿ ಮಗುವಿನೊಂದಿಗೆ ಸಮಯ ಕಳೆದಿದ್ದಾಳೆ. ಬಳಿಕ ಪತಿ ವೀರಣ್ಣ ನೆರೆ ಹೊರೆಯವರ ಬಳಿ ಹೇಳಿ ಸರಕು ಸಾಗಣೆ ವಾಹನವನ್ನು ಕರೆತಂದಿದ್ದು ಅದರಲ್ಲಿ ತಾಯಿ ಮತ್ತು ಮಗುವನ್ನು ಆಸ್ಪತ್ರೆಗೆ ದಾಖಲಿಸಿದ್ದಾನೆ. ಚಿಕಿತ್ಸೆ ನೀಡಿದ ವೈದ್ಯರು ಮಗು ಮತ್ತು ತಾಯಿ ಆರೋಗ್ಯವಾಗಿರುವುದಾಗಿ ತಿಳಿಸಿದ್ದಾರೆ.
02-03-26 09:19 pm
HK News Staffer
ಗಲ್ಫ್ ಯುದ್ಧ; ಬಳ್ಳಾರಿಯಿಂದ ದುಬೈ ಟೂರ್ ತೆರಳಿದ್ದ 5...
01-03-26 09:20 pm
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
02-03-26 09:23 pm
HK News Staffer
ಇರಾನ್ ಸಂಘರ್ಷ ; ಸುಪ್ರೀಂ ಲೀಡರ್ ಆಗಿ ನೇಮಿಸಲ್ಪಟ್ಟ...
02-03-26 06:51 pm
ಖಮೇನಿ ಹತ್ಯೆಗೆ ಕಾಶ್ಮೀರದಲ್ಲಿ ಬೀದಿಗಿಳಿದ ಶಿಯಾಗಳು...
02-03-26 03:10 pm
ಇರಾನ್ ಸಂಘರ್ಷ; ಭಾರತದಲ್ಲಿ ಹಿಂಸಾಚಾರ ಸಾಧ್ಯತೆ, ತುರ...
02-03-26 02:26 pm
ಮಧ್ಯಪ್ರಾಚ್ಯ ಯುದ್ಧ ಎಫೆಕ್ಟ್ ; ಸೆನ್ಸೆಕ್ಸ್ 1,000...
02-03-26 01:34 pm
02-03-26 10:06 pm
HK News Staffer
ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆಂದು ಪ್ರಚ...
02-03-26 07:57 pm
'ಬೊಲ್ಪು’ ಯೋಜನೆಯಡಿ 11 ಸ್ಟಾರ್ಟಪ್ಗಳ ಆಯ್ಕೆ ; ಭಾವ...
01-03-26 08:37 pm
PSI Nasir Hussain: ಉಡುಪಿ ; ಮ್ಯಾರಥಾನಲ್ಲಿ ಪಾಲ್ಗ...
01-03-26 04:07 pm
ಹುಲಿಕಲ್ ಘಾಟಿಯಲ್ಲಿ ದುರ್ಗಾಂಬಾ ಬಸ್ ಗೆ ಬೆಂಕಿ ; ಕು...
28-02-26 08:53 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm