ಬ್ರೇಕಿಂಗ್ ನ್ಯೂಸ್
10-10-20 10:53 am Headline Karnataka News Network ಕರ್ನಾಟಕ
ಮೈಸೂರು, ಅಕ್ಟೋಬರ್ .10 : ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ವನ್ಯಜೀವಿ ಧಾಮ ವ್ಯಾಪ್ತಿಯ ಕಾಡಿನ ದುರ್ಗಮ ಹಾದಿಯಲ್ಲಿ ಪತಿಯೊಂದಿಗೆ ಆಸ್ಪತ್ರೆಗೆ ನಡೆದು ಹೋಗುತ್ತಿದ್ದ ಗರ್ಭಿಣಿ ಕಾಡಿನ ಮಧ್ಯದಲ್ಲೇ ಮಗುವಿಗೆ ಜನ್ಮ ನೀಡಿದ್ದಾಳೆ.
ಕಾಡಿನಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ತಾಯಿ ಪತಿ ವಾಹನ ಕರೆ ತರಲು ಹೋಗಿ ಬರುವಷ್ಟು ಕಾಲ ಕಾಡಿನಲ್ಲೇ ಹಸುಗೂಸಿನ ಜತೆ ಕಳೆದಿದ್ದಾಳೆ..!
ಮಲೆ ಮಹದೇಶ್ವರ ಬೆಟ್ಟದ ತಪ್ಪಲಿನ ಅಣ್ಣೇಹೊಲ ಗ್ರಾಮದ ವೀರಣ್ಣ ಎಂಬವರ ಪತ್ನಿ ಕಮಲ(22) ಈ ಗಟ್ಟಿಗಿತ್ತಿ ತಾಯಿ. ಗುರುವಾರ ರಾತ್ರಿ ಕಮಲನಿಗೆ ಹೆರಿಗೆ ನೋವು ಕಾಣಿಸಿಕೊಂಡಿತ್ತು. ಕಾಡಂಚಿನ ಗ್ರಾಮ ಆಗಿರುವುದರಿಂದ ವಾಹನ ಸೌಲಭ್ಯ ಸಿಗದೆ ವೀರಣ್ಣ ತನ್ನ ಪತ್ನಿಯನ್ನು ನಡೆಸಿಕೊಂಡೇ ಸುಮಾರು 5 ಕಿ.ಮೀ ದೂರದಲ್ಲಿರುವ ಮಹದೇಶ್ವರ ಬೆಟ್ಟದ ಸಾರ್ವಜನಿಕ ಆಸ್ಪತ್ರೆಗೆ ಹೊರಟಿದ್ದ.

ಹೊಟ್ಟೆ ನೋವಿನೊಂದಿಗೆ ಭಾರದ ಹೆಜ್ಜೆ ಇಡುತ್ತಿದ್ದ ಗರ್ಭಿಣಿಗೆ ಕಾಡಿನ ಮಧ್ಯೆ ದಾರಿಯಲ್ಲೇ ಹೆರಿಗೆಯಾಗಿದ್ದು ಹೆಣ್ಣು ಮಗು ಜನಿಸಿದೆ.
ಕೊನೆಗೆ, ತಾಯಿ ಮತ್ತು ಮಗುವನ್ನು ಅರ್ಧ ದಾರಿಯಲ್ಲೇ ಬಿಟ್ಟು ವಾಹನ ಕರೆತರಲೆಂದು ವೀರಣ್ಣ ಗ್ರಾಮದತ್ತ ತೆರಳಿದ್ದಾನೆ. ಈ ವೇಳೆ ಕಗ್ಗತ್ತಲಲ್ಲಿ, ಕಾಡು ಪ್ರಾಣಿಗಳ ಭಯದ ನಡುವೆ ತಾಯಿ ಮಗುವಿನೊಂದಿಗೆ ಸಮಯ ಕಳೆದಿದ್ದಾಳೆ. ಬಳಿಕ ಪತಿ ವೀರಣ್ಣ ನೆರೆ ಹೊರೆಯವರ ಬಳಿ ಹೇಳಿ ಸರಕು ಸಾಗಣೆ ವಾಹನವನ್ನು ಕರೆತಂದಿದ್ದು ಅದರಲ್ಲಿ ತಾಯಿ ಮತ್ತು ಮಗುವನ್ನು ಆಸ್ಪತ್ರೆಗೆ ದಾಖಲಿಸಿದ್ದಾನೆ. ಚಿಕಿತ್ಸೆ ನೀಡಿದ ವೈದ್ಯರು ಮಗು ಮತ್ತು ತಾಯಿ ಆರೋಗ್ಯವಾಗಿರುವುದಾಗಿ ತಿಳಿಸಿದ್ದಾರೆ.
10-08-26 07:54 pm
HK News Staffer
ಕೋರ್ಟ್ ಆದೇಶ ಉಲ್ಲಂಘಿಸಿ ನಾಗೇಂದ್ರ ದೆಹಲಿಗೆ ; ಸಚಿವ...
10-08-26 02:38 pm
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
ಡಿಕೆ ಸಂಪುಟ ಚಾಲ್ತಿಗೆ ಬರುವ ಮುನ್ನವೇ ಸರ್ಜರಿ ! ಸಚಿ...
07-08-26 10:42 pm
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
11-08-26 03:08 pm
HK News Staffer
Mangalore Suicide: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ...
10-08-26 11:00 pm
ನಿವೃತ್ತ ಸರ್ಕಾರಿ ನೌಕರರಿಗೆ ಗುಡ್ನ್ಯೂಸ್ ; ‘ಸಂಧ್ಯ...
08-08-26 12:17 pm
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
ಹೆಬ್ರಿ ; ಭಾರೀ ಗಾಳಿ ಮಳೆಗೆ ಕಾರಿನ ಮೇಲೆ ಮುರಿದು ಬಿ...
07-08-26 10:13 pm
11-08-26 01:04 pm
HK News Staffer
ಮಣಿಪಾಲದಲ್ಲಿ ಭೀಕರ ಅಪಘಾತ ; ಮರಕ್ಕೆ ಬುಲೆಟ್ ಡಿಕ್ಕ...
11-08-26 12:38 pm
ಪತ್ನಿಯ ಅಕ್ರಮ ಸಂಬಂಧಕ್ಕೆ ಬೇಸತ್ತ ಪತಿ; ಬೆಂಗಳೂರಿನ...
10-08-26 08:49 pm
Leopard Bajpe, Mangalore: ಬಜ್ಪೆಯಲ್ಲಿ ಮನೆ ಅಂಗಳ...
10-08-26 07:22 pm
ಬಾರ್ ಮುಂದೆ ತಲವಾರು ಝಳಪಿಸಿ ದಾಂಧಲೆ ; ಪುಡಿ ರೌಡಿ ಶ...
10-08-26 11:09 am