ಬ್ರೇಕಿಂಗ್ ನ್ಯೂಸ್
08-10-22 07:49 pm Bangalore Correspondent ಕರ್ನಾಟಕ
ಬೆಂಗಳೂರು,ಅ.8 : ಸ್ವಯಂ ಘೋಷಿತ ದೇವಮಾನವ ನಿತ್ಯಾನಂದ ಕೈಲಾಸ ಎಂಬ ಪ್ರತ್ಯೇಕ ರಾಷ್ಟ್ರವನ್ನು ಕಟ್ಟಿಕೊಂಡಿರುವುದು ಗೊತ್ತೇ ಇದೆ. ಈಗ ವಿಶ್ವದ ಎಲ್ಲಾ ಗರ್ಭಿಣಿಯರಿಗೆ ಆಫರ್ ಒಂದನ್ನು ನೀಡಿ ಸುದ್ದಿಯಾಗುತ್ತಿದೆ. ಕೈಲಾಸದಲ್ಲಿ ಬಿಂದಾಸ್ ಆಗಿರುವ ಬಿಡದಿ ಸ್ವಾಮಿ ನಿತ್ಯಾನಂದ, ವಿಶ್ವದ ಎಲ್ಲಾ ಮಹಿಳೆಯರು ಹೆರಿಗೆಗೆ ಕೈಲಾಸಕ್ಕೆ ಬನ್ನಿ ಎಂದು ಆಹ್ವಾನ ನೀಡಿದ್ದಾನೆ.
ಕೈಲಾಸದಲ್ಲಿ ಹೆರಿಗೆಯಾಗುವ ಪ್ರತಿ ಮಗುವಿಗೆ, ವಿಶೇಷವಾದ ಅಲೌಕಿಕವಾದ ಪ್ರಕಾಶಮಾನವಾದ ಶಕ್ತಿಯುಳ್ಳ ಡಿಎನ್ಎ ದಯಪಾಲಿಸುವುದಾಗಿ ತಿಳಿಸಿದ್ದು,
ಅಲ್ಲದೇ ಕೈಲಾಸದಲ್ಲಿ ಹೆರಿಗೆಯಾದರೆ ಏನೇನು ಪ್ರಯೋಜನಗಳಿವೆ ಎಂಬುದರ ಕುರಿತಾಗಿ ವೀಡಿಯೋ ಮೂಲಕ ವಿವರಿಸಿದ್ದಾನೆ. ಇದೀಗ ಸಾಮಾಜಿಕ ಜಾಲತಾಣದಲ್ಲಿ ಈ ವೀಡಿಯೋ ವೈರಲ್ ಆಗುತ್ತಿದೆ. ಕೈಲಾಸದಲ್ಲಿ ಇಡೀ ಬ್ರಹ್ಮಾಂಡಕ್ಕಾಗಿಯೇ ಮೀಸಲಾಗಿರುವ ಶಾಶ್ವತ ಕಾಸ್ಮಿಕ್ ಏರ್ಪೋರ್ಟ್ ಹಾಗೂ ಹೆರಿಗೆ ಆಸ್ಪತ್ರೆಯನ್ನು ಸದ್ಯದಲ್ಲೇ ನಿರ್ಮಿಸಲಾಗುತ್ತದೆ.
ಇಲ್ಲಿ ಹೆರಿಗೆಯಾಗುವ ಪ್ರತಿ ಮಗುವಿಗೂ ಪ್ರಬುದ್ಧವಾದಂತಹ ಅಲೌಕಿಕವಾದ ಪ್ರಕಾಶಮಾನವಾದ ಶಕ್ತಿಯುಳ್ಳ ಡಿಎನ್ಎ ಒಲಿಯುತ್ತದೆ. ಜೊತೆಗೆ, ಬ್ರಹ್ಮಜ್ಞಾನವುಳ್ಳ ಅನುವಂಶೀಯ ಕೋಡ್ ಅನ್ನು ನೀಡಲಾಗುತ್ತದೆ ಎಂದು ಸ್ಪಷ್ಟಪಡಿಸಿದ್ದಾನೆ. ನೀವು ಎಲ್ಲೇ ಇರಿ, ಯಾವ ದೇಶದಲ್ಲೇ ಇರಿ ಅಲ್ಲೇ ಗರ್ಭಿಣಿಯಾಗಿರಿ. ಆದರೆ, ನೀವು ಹೆರಿಗೆಗೆ ಮಾತ್ರ ಕೈಲಾಸಕ್ಕೆ ಬನ್ನಿ. ಈ ಮೂಲಕ ನಿಮ್ಮ ಮಗುವಿಗೆ ಹಲವು ಪ್ರಯೋಜನಗಳಿವೆ. ಈ ಪ್ರಯೋಜನಗಳನ್ನು ಬಳಸಿಕೊಳ್ಳಿ ಎಂದು ಆಫರ್ ನೀಡಿದ್ದಾನೆ.
Nithyananda gives a bumper offer to pregnant ladies all over the world.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm