ಬ್ರೇಕಿಂಗ್ ನ್ಯೂಸ್
10-10-22 01:31 pm Bangalore Correspondent ಕರ್ನಾಟಕ
ಬೆಂಗಳೂರು, ಅ.10: ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ನಿರ್ಮಿಸಿರುವ ನಾಡಪ್ರಭು ಕೆಂಪೇಗೌಡರ 108 ಅಡಿ ಕಂಚಿನ ಪ್ರತಿಮೆ ಹಾಗೂ ಕೆಂಪೇಗೌಡ ಥೀಮ್ ಪಾರ್ಕ್ ಉದ್ಘಾಟನೆಗಾಗಿ ಪ್ರಧಾನಿ ನರೇಂದ್ರ ಮೋದಿ ನವೆಂಬರ್ 10 ರಂದು ಬೆಂಗಳೂರಿಗೆ ಆಗಮಿಸಲಿದ್ದಾರೆ.
ಈ ಕುರಿತು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ರವಿಕುಮಾರ್ ಮಾಹಿತಿ ನೀಡಿದ್ದು, ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದ ಬಳಿಯ ನಾಡಪ್ರಭು ಕೆಂಪೇಗೌಡರ 108 ಅಡಿ ಕಂಚಿನ ಪ್ರತಿಮೆಯನ್ನು ಮೋದಿ ಲೋಕಾರ್ಪಣೆ ಮಾಡಲಿದ್ದಾರೆ. ಅಲ್ಲದೆ, ಕೆಂಪೇಗೌಡ ಥೀಮ್ ಪಾರ್ಕ್ ಉದ್ಘಾಟನೆಯನ್ನೂ ಇದೇ ವೇಳೆ ಪ್ರಧಾನಿ ನೇರವೇರಿಸಲಿದ್ದಾರೆ. ಆನಂತರ ಸಾರ್ವಜನಿಕ ಕಾರ್ಯಕ್ರಮದಲ್ಲಿ ಪ್ರಧಾನಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ.
ಇತ್ತೀಚೆಗೆ ಸೆ.2ರಂದು ಮಂಗಳೂರಿಗೆ ಆಗಮಿಸಿದ್ದ ಪ್ರಧಾನಿ ಮೋದಿ, ಮುಂದೆ ಪ್ರತಿ ತಿಂಗಳು ರಾಜ್ಯಕ್ಕೆ ಆಗಮಿಸುವ ಸುಳಿವು ನೀಡಿದ್ದರು. ಅದರಂತೆ, ರಾಜ್ಯ ಬಿಜೆಪಿಯಿಂದ ಕಾರ್ಯಕ್ರಮ ಆಯೋಜಿಸಿದ್ದು ಚುನಾವಣೆ ಪ್ರಚಾರಕ್ಕೆ ಬಳಸಿಕೊಳ್ಳಲು ಸಿದ್ಧತೆ ನಡೆಸಿದ್ದಾರೆ. ಈ ನಡುವೆ, ರಾಜ್ಯ ಸರ್ಕಾರದ ಜನಸ್ಪಂದನ ಕಾರ್ಯಕ್ರಮ ಆಯೋಜಿಸಲಾಗಿತ್ತು. ಆದರೆ ಕಾರ್ಯಕ್ರಮದಲ್ಲಿ ನಿರೀಕ್ಷಿತ ಜನರು ಸೇರದೇ ರಾಜ್ಯ ಬಿಜೆಪಿಗೆ ಮುಜುಗರ ಸೃಷ್ಟಿಯಾಗಿತ್ತು. ದೊಡ್ಡಬಳ್ಳಾಪುರದಲ್ಲಿ ಖಾಲಿ ಖಾಲಿ ಕುರ್ಚಿಗಳ ಮುಂದೆ ಕೇಂದ್ರ ಸಚಿವೆ ಸ್ಮೃತಿ ಇರಾನಿ ಭಾಷಣ ಮಾಡಿದ್ದ ವಿಡಿಯೋ ವೈರಲ್ ಆಗಿತ್ತು. ಅದೇ ಕಾರಣಕ್ಕೆ ಬಿಜೆಪಿಯಿಂದ ರಾಜ್ಯದಲ್ಲಿ ಸರಣಿ ಜನಸ್ಪಂದನ ಏರ್ಪಡಿಸಿದ್ದನ್ನು ಸದ್ದಿಲ್ಲದೆ ಮುಂದಕ್ಕೆ ಹಾಕಲಾಗಿತ್ತು.
ಇದೇ ವೇಳೆ ಬಿಜೆಪಿ ಕಾರ್ಯದರ್ಶಿ ರವಿಕುಮಾರ್, ಅಕ್ಟೋಬರ್ 10 ರಂದು ಜನಸಂಕಲ್ಪ ಯಾತ್ರೆ ಆರಂಭಿಸಲಾಗುತ್ತದೆ. 30 ರಂದು ಕಲಬುರಗಿಯಲ್ಲಿ ಒಬಿಸಿ ಸಮಾವೇಶ ನಡೆಸಲಾಗುತ್ತದೆ ಎಂದು ತಿಳಿಸಿದ್ದಾರೆ. ರಾಜ್ಯ ಬಿಜೆಪಿ ನಾಯಕರು ಆಡಳಿತ ವಿರೋಧಿ ಅಲೆಯನ್ನು ಎದುರಿಸಲು ನಾನಾ ಕಸರತ್ತು ನಡೆಸುತ್ತಿದ್ದಾರೆ.
The second terminal of the Kempegowda International Airport (KIA) on the outskirts of Bengaluru will likely be inaugurated in November by Prime Minister Narendra Modi. As per reports, the Prime Minister has been invited to inaugurate the new terminal, however, The Hindu reported that the PMO (Prime Minister’s Office) has not yet responded. As per reports, PM Modi has also been invited to inaugurate the massive 108-ft statue of Kempe Gowda, hailed as the founder of Bengaluru.
16-09-25 11:00 pm
Bangalore Correspondent
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
17-09-25 01:34 pm
Mangalore Correspondent
Dharmasthala, Lakshmish Tolpadi, Mangalore: ಧ...
16-09-25 07:48 pm
Ex IPS Kempaiah, Professor Umeshchandra, Mang...
16-09-25 07:02 pm
Mangalore BJP Protest, UT khader, Red Stone:...
16-09-25 06:51 pm
UT Khader, Mangalore, Ullal: ಉಳ್ಳಾಲ ಕ್ಷೇತ್ರದಲ...
16-09-25 06:06 pm
17-09-25 02:46 pm
Udupi Correspondent
ಫುಡ್ ಡೆಲಿವರಿ ನೆಪದಲ್ಲಿ ಬಾಗಿಲು ತಟ್ಟಿದ ಕಳ್ಳ ; ವೃ...
17-09-25 12:25 pm
Vijayapura Bank Robbery: ಮಹಾರಾಷ್ಟ್ರ ಗಡಿಭಾಗದ ವ...
16-09-25 10:40 pm
Bidar crime: ಏಳು ವರ್ಷದ ಬಾಲಕಿಯನ್ನ ಮೂರನೇ ಮಹಡಿಯಿ...
16-09-25 07:12 pm
Bangalore Police, Inspector Suspend, Crime, D...
15-09-25 10:47 pm