ಬ್ರೇಕಿಂಗ್ ನ್ಯೂಸ್
11-10-22 12:12 pm Bangalore Correspondent ಕರ್ನಾಟಕ
ಬೆಂಗಳೂರು, ಅ.11: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ವಸತಿ ಯೋಜನೆಯ ಕಾಮಗಾರಿಯ ಗುತ್ತಿಗೆ ನೀಡಲು ಲಂಚ ಪಡೆದ ಬಗ್ಗೆ ದಾಖಲಾಗಿರುವ ಎಫ್ಐಆರ್ ರದ್ದು ಕೋರಿ ಕರ್ನಾಟಕದ ಸಹಕಾರ ಸಚಿವ ಎಸ್.ಟಿ.ಸೋಮಶೇಖರ್, ಐಎಎಸ್ ಅಧಿಕಾರಿ ಜಿ.ಸಿ.ಪ್ರಕಾಶ್ ಹಾಗೂ 37 ಕ್ರೆಸೆಂಟ್ ಹೋಟೆಲ್ ಮಾಲೀಕ ಕೆ.ರವಿ ಸಲ್ಲಿಸಿರುವ ಪ್ರತ್ಯೇಕ ಅರ್ಜಿಯನ್ನು ವಿಚಾರಣೆಗೆ ಪರಿಗಣಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.
ಪ್ರಕರಣದಲ್ಲಿ ಬಿಜೆಪಿ ಶಾಸಕ ಬಿ.ಎಸ್.ಯಡಿಯೂರಪ್ಪ ವಿರುದ್ಧ ಲೋಕಾಯುಕ್ತ ಪೊಲೀಸರು ದಾಖಲಿಸಿರುವ ಎಫ್ಐಆರ್ ಬಗ್ಗೆ ತನಿಖೆಗೆ ಸುಪ್ರೀಂ ಕೋರ್ಟ್ ಸೆಪ್ಟೆಂಬರ್ 23 ರಂದು ತಡೆಯಾಜ್ಞೆ ನೀಡಿತ್ತು. ಇದೇ ನೆಲೆಯಲ್ಲಿ ಮೂವರು ಅರ್ಜಿದಾರರ ಪರವಾಗಿ ಹಿರಿಯ ವಕೀಲರಾದ ಮುಕುಲ್ ರೋಹಟಗಿ, ದೇವದತ್ತ ಕಾಮತ್ ಹಾಗೂ ಸಿದ್ಧಾರ್ಥ ದವೆ ವಾದ ಮಂಡಿಸಿ, ಹೈಕೋರ್ಟ್ ಆದೇಶದ ಸಿಂಧುತ್ವ ಪ್ರಶ್ನಿಸಿದ್ದರು.


ಪ್ರಕರಣದಲ್ಲಿ ಒಬ್ಬ ಆರೋಪಿ ವಿರುದ್ಧ ತನಿಖೆಗೆ ತಡೆಯಾಜ್ಞೆ ನೀಡಿರುವುದರಿಂದ ಲೋಕಾಯುಕ್ತ ಪೊಲೀಸರು ಇತರರ ವಿರುದ್ಧ ವಿಚಾರಣೆ ನಡೆಸುವುದು ಸರಿಯಲ್ಲ ಎಂದು ವಾದಿಸಿದ್ದರು. ಆದರೆ ನ್ಯಾಯಮೂರ್ತಿಗಳಾದ ಡಿ.ವೈ.ಚಂದ್ರಚೂಡ್ ಹಾಗೂ ಹಿಮಾ ಕೊಹ್ಲಿ ಅವರಿದ್ದ ನ್ಯಾಯಪೀಠ ಮನವಿಯನ್ನು ತಿರಸ್ಕರಿಸಿದೆ.

ಈ ನಡುವೆ, ದೂರುದಾರ ಟಿ.ಜೆ.ಅಬ್ರಹಾಂ ಪರ ವಕೀಲರು, 'ಯಡಿಯೂರಪ್ಪ ಪ್ರಕರಣ ವಿಭಿನ್ನವಾಗಿತ್ತು. ಯಡಿಯೂರಪ್ಪ ಪ್ರಕರಣದಲ್ಲಿ ರಾಜ್ಯಪಾಲರಿಂದ ಪೂರ್ವಾನುಮತಿ ಕೋರಲಾಗಿತ್ತು. ಅದು ತಿರಸ್ಕೃತವಾಗಿತ್ತು. ಆದರೆ, ಬೇರೆ ಆರೋಪಿಗಳ ವಿಚಾರದಲ್ಲಿ ಇದು ಅನ್ವಯವಾಗುವುದಿಲ್ಲ' ಎಂದರು. ಬೆಂಗಳೂರು ಪೂರ್ವ ತಾಲ್ಲೂಕಿನ ಕೋನದಾಸನಪುರದಲ್ಲಿ ಬಿಡಿಎ ನಿರ್ಮಿಸುತ್ತಿರುವ ಬಹುಮಹಡಿ ವಸತಿ ಸಮುಚ್ಚಯದ ಗುತ್ತಿಗೆ ಸಂಬಂಧ ಚಂದ್ರಕಾಂತ್ ರಾಮಲಿಂಗಂ ಎಂಬ ಗುತ್ತಿಗೆದಾರರಿಂದ ಆರೋಪಿಗಳು ಒಟ್ಟು ₹ 29.5 ಕೋಟಿ ಲಂಚ ಪಡೆದಿದ್ದಾರೆ ಎಂದು ಆರೋಪಿಸಿ ಟಿ.ಜೆ. ಅಬ್ರಹಾಂ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಖಾಸಗಿ ದೂರು ಸಲ್ಲಿಸಿದ್ದರು. ಎಫ್ಐಆರ್ ದಾಖಲಿಸಿ ಕೋರ್ಟ್ ತನಿಖೆಗೆ ಆದೇಶ ಮಾಡಿತ್ತು.
BDA bribe case, S T Somashekar in troubke, supreme court rejects application of consideration.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 11:48 am
HK News Staffer
ಬಾಂಬ್ ಮಾದರಿಯ ವಸ್ತು ಸ್ಫೋಟಿಸಿ ರೀಲ್ಸ್ ಶೂಟಿಂಗ್ ;...
01-05-26 10:30 am
ಗುದದ್ವಾರದಲ್ಲಿ ಮೊಬೈಲ್ ಬಚ್ಚಿಟ್ಟು ಜೈಲು ಎಂಟ್ರಿಯಾದ...
01-05-26 09:39 am
ಸೌಜನ್ಯಾ ಪ್ರಕರಣ ಮರು ತನಿಖೆಗೆ ಸುಪ್ರೀಂ ಕೋರ್ಟಿಗೆ ಅ...
30-04-26 04:30 pm
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm