ಬ್ರೇಕಿಂಗ್ ನ್ಯೂಸ್
11-10-22 12:12 pm Bangalore Correspondent ಕರ್ನಾಟಕ
ಬೆಂಗಳೂರು, ಅ.11: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ವಸತಿ ಯೋಜನೆಯ ಕಾಮಗಾರಿಯ ಗುತ್ತಿಗೆ ನೀಡಲು ಲಂಚ ಪಡೆದ ಬಗ್ಗೆ ದಾಖಲಾಗಿರುವ ಎಫ್ಐಆರ್ ರದ್ದು ಕೋರಿ ಕರ್ನಾಟಕದ ಸಹಕಾರ ಸಚಿವ ಎಸ್.ಟಿ.ಸೋಮಶೇಖರ್, ಐಎಎಸ್ ಅಧಿಕಾರಿ ಜಿ.ಸಿ.ಪ್ರಕಾಶ್ ಹಾಗೂ 37 ಕ್ರೆಸೆಂಟ್ ಹೋಟೆಲ್ ಮಾಲೀಕ ಕೆ.ರವಿ ಸಲ್ಲಿಸಿರುವ ಪ್ರತ್ಯೇಕ ಅರ್ಜಿಯನ್ನು ವಿಚಾರಣೆಗೆ ಪರಿಗಣಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.
ಪ್ರಕರಣದಲ್ಲಿ ಬಿಜೆಪಿ ಶಾಸಕ ಬಿ.ಎಸ್.ಯಡಿಯೂರಪ್ಪ ವಿರುದ್ಧ ಲೋಕಾಯುಕ್ತ ಪೊಲೀಸರು ದಾಖಲಿಸಿರುವ ಎಫ್ಐಆರ್ ಬಗ್ಗೆ ತನಿಖೆಗೆ ಸುಪ್ರೀಂ ಕೋರ್ಟ್ ಸೆಪ್ಟೆಂಬರ್ 23 ರಂದು ತಡೆಯಾಜ್ಞೆ ನೀಡಿತ್ತು. ಇದೇ ನೆಲೆಯಲ್ಲಿ ಮೂವರು ಅರ್ಜಿದಾರರ ಪರವಾಗಿ ಹಿರಿಯ ವಕೀಲರಾದ ಮುಕುಲ್ ರೋಹಟಗಿ, ದೇವದತ್ತ ಕಾಮತ್ ಹಾಗೂ ಸಿದ್ಧಾರ್ಥ ದವೆ ವಾದ ಮಂಡಿಸಿ, ಹೈಕೋರ್ಟ್ ಆದೇಶದ ಸಿಂಧುತ್ವ ಪ್ರಶ್ನಿಸಿದ್ದರು.


ಪ್ರಕರಣದಲ್ಲಿ ಒಬ್ಬ ಆರೋಪಿ ವಿರುದ್ಧ ತನಿಖೆಗೆ ತಡೆಯಾಜ್ಞೆ ನೀಡಿರುವುದರಿಂದ ಲೋಕಾಯುಕ್ತ ಪೊಲೀಸರು ಇತರರ ವಿರುದ್ಧ ವಿಚಾರಣೆ ನಡೆಸುವುದು ಸರಿಯಲ್ಲ ಎಂದು ವಾದಿಸಿದ್ದರು. ಆದರೆ ನ್ಯಾಯಮೂರ್ತಿಗಳಾದ ಡಿ.ವೈ.ಚಂದ್ರಚೂಡ್ ಹಾಗೂ ಹಿಮಾ ಕೊಹ್ಲಿ ಅವರಿದ್ದ ನ್ಯಾಯಪೀಠ ಮನವಿಯನ್ನು ತಿರಸ್ಕರಿಸಿದೆ.

ಈ ನಡುವೆ, ದೂರುದಾರ ಟಿ.ಜೆ.ಅಬ್ರಹಾಂ ಪರ ವಕೀಲರು, 'ಯಡಿಯೂರಪ್ಪ ಪ್ರಕರಣ ವಿಭಿನ್ನವಾಗಿತ್ತು. ಯಡಿಯೂರಪ್ಪ ಪ್ರಕರಣದಲ್ಲಿ ರಾಜ್ಯಪಾಲರಿಂದ ಪೂರ್ವಾನುಮತಿ ಕೋರಲಾಗಿತ್ತು. ಅದು ತಿರಸ್ಕೃತವಾಗಿತ್ತು. ಆದರೆ, ಬೇರೆ ಆರೋಪಿಗಳ ವಿಚಾರದಲ್ಲಿ ಇದು ಅನ್ವಯವಾಗುವುದಿಲ್ಲ' ಎಂದರು. ಬೆಂಗಳೂರು ಪೂರ್ವ ತಾಲ್ಲೂಕಿನ ಕೋನದಾಸನಪುರದಲ್ಲಿ ಬಿಡಿಎ ನಿರ್ಮಿಸುತ್ತಿರುವ ಬಹುಮಹಡಿ ವಸತಿ ಸಮುಚ್ಚಯದ ಗುತ್ತಿಗೆ ಸಂಬಂಧ ಚಂದ್ರಕಾಂತ್ ರಾಮಲಿಂಗಂ ಎಂಬ ಗುತ್ತಿಗೆದಾರರಿಂದ ಆರೋಪಿಗಳು ಒಟ್ಟು ₹ 29.5 ಕೋಟಿ ಲಂಚ ಪಡೆದಿದ್ದಾರೆ ಎಂದು ಆರೋಪಿಸಿ ಟಿ.ಜೆ. ಅಬ್ರಹಾಂ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಖಾಸಗಿ ದೂರು ಸಲ್ಲಿಸಿದ್ದರು. ಎಫ್ಐಆರ್ ದಾಖಲಿಸಿ ಕೋರ್ಟ್ ತನಿಖೆಗೆ ಆದೇಶ ಮಾಡಿತ್ತು.
BDA bribe case, S T Somashekar in troubke, supreme court rejects application of consideration.
19-06-26 04:18 pm
HK News Staffer
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 09:05 pm
HK News Staffer
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
ಅಸ್ಸಾಂ ಕಾರ್ಮಿಕರಿಗೆ ಪೊಲೀಸ್ ಕ್ಲಿಯರೆನ್ಸ್ ಸರ್ಟಿಫಿ...
19-06-26 12:24 pm
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
19-06-26 09:07 pm
HK News Staffer
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm
Bhatkal News: ಭಟ್ಕಳದಲ್ಲಿ ಮತ್ತೆ ಕೋಮು ಸಂಘರ್ಷ ;...
18-06-26 01:20 pm
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm