ಬ್ರೇಕಿಂಗ್ ನ್ಯೂಸ್
12-10-22 04:44 pm HK News Desk ಕರ್ನಾಟಕ
ಕಾರವಾರ, ಅ.12 : ಉತ್ತರ ಕನ್ನಡ ಜಿಲ್ಲೆಗೆ ಪ್ರವಾಸ ಬೆಳೆಸಿದ್ದ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ರಾತ್ರಿ ವೇಳೆ ಭಟ್ಕಳದಲ್ಲಿ ತಂಗಿ ಯಕ್ಷಗಾನ ವೀಕ್ಷಿಸಿದ್ದಲ್ಲದೇ, ಯಕ್ಷಗಾನ ಪೋಷಾಕು ಧರಿಸಿ ಮಿಂಚಿದ್ದಾರೆ. ಚಿಕ್ಕಬಳ್ಳಾಪುರ ಮೂಲದ ಸುಧಾಕರ್ ಗೆ ಯಕ್ಷಗಾನ ಹೊಸತು. ಹೀಗಾಗಿ ಕರಾವಳಿಯ ಗಂಡುಕಲೆಯ ಬಗ್ಗೆ ಮೆಚ್ಚುಗೆ ತೋರಿದ್ದಲ್ಲದೆ ತಾನೇ ವೇಷ ಧರಿಸಿ ವರಸೆ ನೋಡಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕೆ ಸ್ಥಳ ವೀಕ್ಷಣೆಗಾಗಿ ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಮತ್ತು ಅಧಿಕಾರಿಗಳು ಕಾರವಾರ, ಕುಮಟಾ ಹಾಗೂ ಭಟ್ಕಳಕ್ಕೆ ಭೇಟಿ ನೀಡಿದ್ದರು. ಭಟ್ಕಳದಲ್ಲಿ ಸಮುದಾಯ ಆಸ್ಪತ್ರೆಯ ವೀಕ್ಷಣೆ ಬಳಿಕ ನೇರವಾಗಿ ಭಟ್ಕಳ ಶಾಸಕ ಸುನಿಲ್ ನಾಯ್ಕ ಅವರ ಫಾರ್ಮ್ ಹೌಸ್ಗೆ ತೆರಳಿದ್ದರು. ಸಚಿವರಿಗೆ ಭರ್ಜರಿ ಸ್ವಾಗತ ನೀಡಿದ್ದ ಸುನಿಲ್ ನಾಯ್ಕ, ಸಚಿವರಿಗೆಂದೇ ಕರಾವಳಿಯ ಗಂಡು ಕಲೆಯಾದ ಯಕ್ಷಗಾನ ಆಯೋಜಿಸಿದ್ದರು.


ರಾತ್ರಿ ವೇಳೆ ಬಿರುಸಾದ ಮಳೆಯ ನಡುವೆಯೂ ಕೋಟ ಶ್ರೀನಿವಾಸ ಪೂಜಾರಿ, ಶಾಸಕ ಸುನಿಲ್ ನಾಯ್ಕರ ಜೊತೆ ಬಡಗುತಿಟ್ಟು ಶೈಲಿಯಲ್ಲಿ "ಭೀಷ್ಮ ವಿಜಯ" ಯಕ್ಷಗಾನ ನೋಡಿದ ಸಚಿವರು ಸಂತೋಷಪಟ್ಟರು. ಯಕ್ಷಗಾನ ನೋಡಿದ ಬಳಿಕ ಕಲಾವಿದರ ಪೋಷಾಕು ಧರಿಸಿ ಸಚಿವರು ಖುಷಿಪಟ್ಟರು. ಕಲಾವಿದರ ಅನುಭವ ಪಡೆದುಕೊಂಡಿದ್ದಲ್ಲದೆ, ಯಕ್ಷಗಾನ ಧಿರಿಸಿನಲ್ಲೇ ಸಚಿವ ಡಾ. ಸುಧಾಕರ್ ಅವರನ್ನು ಸನ್ಮಾನಿಸಲಾಯಿತು. ಯಕ್ಷಗಾನ ವೇದಿಕೆಯಲ್ಲಿ ಬಡಗುತಿಟ್ಟು ಶೈಲಿಯ ಪೋಷಾಕು ಧರಿಸಿ ಮಿಂಚಿದ ಆರೋಗ್ಯ ಸಚಿವ ಡಾ.ಸುಧಾಕರ್ ಅವರನ್ನು ಕಂಡು ಪಕ್ಷದ ಕಾರ್ಯಕರ್ತರು ಕೊಂಡಾಡಿದರಲ್ಲದೇ, ಹಲವರು ಸಚಿವರ ಜೊತೆ ಫೋಟೊ ಕ್ಲಿಕ್ಕಿಸಿಕೊಂಡರು.
Karwar Minister Sudhakar in Yakshagana costume.
19-06-26 04:18 pm
HK News Staffer
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 09:05 pm
HK News Staffer
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
ಅಸ್ಸಾಂ ಕಾರ್ಮಿಕರಿಗೆ ಪೊಲೀಸ್ ಕ್ಲಿಯರೆನ್ಸ್ ಸರ್ಟಿಫಿ...
19-06-26 12:24 pm
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
19-06-26 09:07 pm
HK News Staffer
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm
Bhatkal News: ಭಟ್ಕಳದಲ್ಲಿ ಮತ್ತೆ ಕೋಮು ಸಂಘರ್ಷ ;...
18-06-26 01:20 pm
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm