ಬ್ರೇಕಿಂಗ್ ನ್ಯೂಸ್
12-10-22 04:58 pm HK News Desk ಕರ್ನಾಟಕ
ಚಿಕ್ಕಮಗಳೂರು, ಅ.12 : ಚಿಕ್ಕಮಗಳೂರು ತಾಲೂಕು ಹುಣಸೆಹಳ್ಳಿಪುರದ ಕಾಫಿ ಎಸ್ಟೇಟ್ ಒಂದರಲ್ಲಿ ಕೆಲಸಕ್ಕಿದ್ದ ಪರಿಶಿಷ್ಟ ಜಾತಿಯ ಒಂದೇ ಕುಟುಂಬದ 14 ಮಂದಿ ಕಾರ್ಮಿಕರನ್ನು ಎಸ್ಟೇಟ್ ಮಾಲೀಕ ಕೂಡಿ ಹಾಕಿ ಚಿತ್ರಹಿಂಸೆ ನೀಡಿದ ಘಟನೆ ಬಗ್ಗೆ ಪ್ರಕರಣ ದಾಖಲಾಗಿದೆ.
ಹಣದ ವಿಚಾರದಲ್ಲಿ ಕಾರ್ಮಿಕರನ್ನು ಹಿಂಸಿಸಿ ಸೆರೆಯಲ್ಲಿಟ್ಟ ಆರೋಪದ ಮೇಲೆ ಕಾಫಿ ಎಸ್ಟೇಟ್ ಮಾಲೀಕ ಜಗದೀಶ್ ಗೌಡ ಮತ್ತು ಆತನ ಪುತ್ರ ತಿಲಕ್ ವಿರುದ್ಧ ಬಾಳೆಹೊನ್ನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
)
ಹಲ್ಲೆಗೀಡಾದ ಮಹಿಳೆಗೆ ಗರ್ಭಪಾತ
ಹಲ್ಲೆಗೊಳಗಾದ ಕಾರ್ಮಿಕರು ಒಂದೇ ಹಳ್ಳಿಗೆ ಸೇರಿದವರು. ಹೆಚ್ಚಿನವರು ಮಹಿಳೆಯರು. ಕಾರ್ಮಿಕರಲ್ಲಿ ಒಬ್ಬ ಮಹಿಳೆ ಗರ್ಭಿಣಿಯಾಗಿದ್ದು ಚಿತ್ರಹಿಂಸೆಯಿಂದ ರಕ್ತಸ್ರಾವ ಉಂಟಾಗಿ ಗರ್ಭಪಾತ ಆಗಿರುವ ಆರೋಪ ಕೇಳಿಬಂದಿದೆ. ಆ ಮಹಿಳೆ ನೀಡಿರುವ ದೂರಿನಂತೆ ಬಾಳೆಹೊನ್ನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಹಿಳೆಯ ಪತಿ ವಿಜಯ್ ಸಂಬಂಧಿಕರು ಮತ್ತು ನೆರೆಮನೆಯವರ ನಡುವೆ 15 ದಿನಗಳ ಹಿಂದೆ ಜಗಳವಾಗಿತ್ತು. ವಿಜಯ್ ಸಂಬಂಧಿಕರಾದ ಸತೀಶ್ ಮತ್ತು ಮಂಜು ಕಾಫಿ ಎಸ್ಟೇಟ್ ಮಾಲೀಕ ಜಗದೀಶ್ ಗೌಡರಿಂದ 9 ಲಕ್ಷ ರೂ. ಹಣ ಸಾಲ ಪಡೆದಿದ್ದಾರೆ ಎನ್ನಲಾಗುತ್ತಿದ್ದು ಹಣ ಪಾವತಿ ಮಾಡುವ ವರೆಗೆ 14 ಕಾರ್ಮಿಕರನ್ನು ಬಿಡೋದಿಲ್ಲ ಎಂದು ಎಸ್ಟೇಟ್ ಮಾಲೀಕರು ತಮ್ಮ ಕ್ವಾಟ್ರರ್ಸ್ನಲ್ಲಿ ಕೂಡಿ ಹಾಕಿ ಬೀಗ ಹಾಕಿದ್ದರು ಎಂದು ಆರೋಪಿಸಲಾಗಿದೆ. ಅ.8ರಂದು ಘಟನೆ ನಡೆದಿದ್ದು ತಡವಾಗಿ ಪೊಲೀಸ್ ದೂರು ನೀಡಲಾಗಿದೆ.
A Case has been filed against coffee estate owner Jagadeesh Gowda (a BJP member) and his son Tilak, allegedly for keeping 14 female Dalit labourers under house arrest in Hunasehalli village over a financial issue. Gowda assaulted a pregnant woman labour too."The Dalit women were kept imprisoned inside the house. There was a pregnant woman among them. All the female labourers including the pregnant woman have been rescued" Chikkamagaluru SP said on Wednesday.
27-05-26 06:26 pm
HK News Staffer
ನಾಗಲಕ್ಷ್ಮಿಗೆ ಸುತ್ತಿಕೊಂಡ ಮತ್ತೊಂದು ವಿವಾದ ; ಉಡುಪ...
27-05-26 04:58 pm
ಡಿಕೆಗೆ ಪಟ್ಟ ; ಬಹುತೇಕ ಸಚಿವರಿಗೆ ಕೊಕ್- ಹೊಸಬರಿಗೆ...
27-05-26 01:41 pm
ರಾಜ್ಯ ರಾಜಕೀಯದಲ್ಲಿ ಭಾರೀ ಕ್ಲೈಮ್ಯಾಕ್ಸ್ ; ಸಿಎಂ ಸಿ...
26-05-26 11:03 pm
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
27-05-26 12:29 pm
HK News Desk
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
27-05-26 08:34 pm
HK News Staffer
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm
ಇಸ್ರೇಲ್ನಿಂದ ರಜೆ ಮೇಲೆ ಊರಿಗೆ ಬಂದವನ ದುರಂತ ಅಂತ್ಯ...
26-05-26 02:43 pm