ಬ್ರೇಕಿಂಗ್ ನ್ಯೂಸ್
16-10-22 10:54 pm HK News Desk ಕರ್ನಾಟಕ
ಬಳ್ಳಾರಿ, ಅ.16 : ಎಐಸಿಸಿ ಮುಖಂಡ ರಾಹುಲ್ ಗಾಂಧಿ ಗಣಿನಾಡು ಕರ್ನಾಟಕದಲ್ಲಿ 17 ದಿನಗಳಿಂದ ಕೈಗೊಂಡಿದ್ದ ಭಾರತ್ ಜೋಡೋ ಯಾತ್ರೆ ಭಾನುವಾರ ಸಂಜೆ ಆಂಧ್ರಪ್ರದೇಶಕ್ಕೆ ಪ್ರವೇಶಿಸಿದ್ದು ಕರ್ನಾಟಕ ಯಾತ್ರೆ ಅಂತ್ಯಗೊಂಡಿದೆ.
ಬಳ್ಳಾರಿ ಜಿಲ್ಲೆಯ ಸಂಗನಕಲ್ಲು ಗ್ರಾಮದ ಹೊರವಲಯದಲ್ಲಿ ಶನಿವಾರ ರಾತ್ರಿ ತಂಗಿದ್ದ ರಾಹುಲ್ ಗಾಂಧಿ ಭಾನುವಾರ ಬೆಳಗ್ಗೆ 6.30ಕ್ಕೆ ಗ್ರಾಮದ ಕಾಳಿದಾಸ ವೃತ್ತದಿಂದ ಯಾತ್ರೆ ಆರಂಭಿಸಿದರು. ಆರಂಭದಲ್ಲಿ ಬಳ್ಳಾರಿ ಗ್ರಾಮಾಂತರ ಶಾಸಕ ಬಿ.ನಾಗೇಂದ್ರ, ವಿಧಾನ ಪರಿಷತ್ ವಿಪಕ್ಷ ನಾಯಕ ಬಿ.ಕೆ. ಹರಿಪ್ರಸಾದ್, ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ ಜೊತೆಗೆ ಹೆಜ್ಜೆ ಹಾಕಿದರು.

ಈ ನಡುವೆ, ಯಾತ್ರೆ ಮೋಕಾಕ್ಕೆ ತಲುಪಿದಾಗ ವಿದ್ಯುತ್ ಅವಘಡ ಸಂಭವಿಸಿದ್ದು ಯಾತ್ರೆಯಲ್ಲಿ ಪಾಲ್ಗೊಂಡಿದ್ದವರು ಗಲಿಬಿಲಿಗೆ ಒಳಗಾದರು. ವಿದ್ಯುತ್ ಶಾರ್ಟ್ ಸರ್ಕಿಟ್ ನಿಂದಾಗಿ ಯಾತ್ರೆಯಲ್ಲಿ ಪಾಲ್ಗೊಂಡಿದ್ದ ನಾಲ್ವರು ಗಾಯಗೊಂಡಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲಾಗಿದ್ದು ಅಪಾಯದಿಂದ ಪಾರಾಗಿದ್ದಾರೆ. ವಿದ್ಯುತ್ ಅವಘಡದ ಕಾರಣ ರಾಹುಲ್ ಜೊತೆಗಿದ್ದ ಎಸ್ಪಿಜಿ ಸಿಬಂದಿ ಕಟ್ಟುನಿಟ್ಟಿನ ಕ್ರಮ ವಹಿಸಲು ಮುಂದಾಗಿದೆ.



ಘಟನೆಯಲ್ಲಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಗಾಯಾಳುಗಳನ್ನು ಎಐಸಿಸಿ ಪ್ರಧಾನ ಕಾರ್ಯದರ್ಶಿ ಸುರ್ಜೇವಾಲ ಭೇಟಿಯಾಗಿ ಆರೋಗ್ಯ ವಿಚಾರಿಸಿದರು. ಎಸ್ಪಿಜಿ ಕ್ಲಿಯರೆನ್ಸ್ ಸಿಕ್ಕ ನಂತರ ರಾಹುಲ್ ಗಾಂಧಿ ಕೂಡ ಆಸ್ಪತ್ರೆಗೆ ಆಗಮಿಸಿ ಗಾಯಾಳುಗಳಿಗೆ ಸಾಂತ್ವನ ಹೇಳಿದರು. ಸಂಜೆ ನಿಗದಿಯಾದಂತೆ 4.30ಕ್ಕೆ ಯಾತ್ರೆ ಆರಂಭಗೊಂಡ ವೇಳೆ ಮಧ್ಯಪ್ರದೇಶ ಮಾಜಿ ಮುಖ್ಯಮಂತ್ರಿ ಕಮಲನಾಥ್, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ರಾಹುಲ್ ಗಾಂಧಿಗೆ ಸಾಥ್ ನೀಡಿದ್ದರು. ರಾಹುಲ್ ಗಾಂಧಿ ಜತೆ ಫೋಟೋ ಕ್ಲಿಕ್ಕಿಸಿಕೊಳ್ಳಲು ಕೆಲವರು ಮುಗಿಬಿದ್ದರಾದರೂ ಎಸ್ಪಿಜಿ ಅವಕಾಶ ಕೊಡಲಿಲ್ಲ.


)

ಅ.17ರಂದು ಎಐಸಿಸಿ ಚುನಾವಣೆ ನಿಮಿತ್ತ ಪಾದಯಾತ್ರೆ ಇರುವುದಿಲ್ಲ. ಅ.19ರಿಂದ ಆಂಧ್ರಪ್ರದೇಶದ ಛತ್ರಗುಡಿಯಿಂದ ಯಾತ್ರೆ ಪುನರಾರಂಭಗೊಳ್ಳಲಿದೆ ಎಂದು ಎಐಸಿಸಿ ಮೂಲಗಳು ತಿಳಿಸಿವೆ.
The miles, smiles and trials as Bharat Jodo completes 1,000 km
19-06-26 04:18 pm
HK News Staffer
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 09:05 pm
HK News Staffer
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
ಅಸ್ಸಾಂ ಕಾರ್ಮಿಕರಿಗೆ ಪೊಲೀಸ್ ಕ್ಲಿಯರೆನ್ಸ್ ಸರ್ಟಿಫಿ...
19-06-26 12:24 pm
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
19-06-26 09:07 pm
HK News Staffer
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm
Bhatkal News: ಭಟ್ಕಳದಲ್ಲಿ ಮತ್ತೆ ಕೋಮು ಸಂಘರ್ಷ ;...
18-06-26 01:20 pm
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm