ಬ್ರೇಕಿಂಗ್ ನ್ಯೂಸ್
16-10-22 10:54 pm HK News Desk ಕರ್ನಾಟಕ
ಬಳ್ಳಾರಿ, ಅ.16 : ಎಐಸಿಸಿ ಮುಖಂಡ ರಾಹುಲ್ ಗಾಂಧಿ ಗಣಿನಾಡು ಕರ್ನಾಟಕದಲ್ಲಿ 17 ದಿನಗಳಿಂದ ಕೈಗೊಂಡಿದ್ದ ಭಾರತ್ ಜೋಡೋ ಯಾತ್ರೆ ಭಾನುವಾರ ಸಂಜೆ ಆಂಧ್ರಪ್ರದೇಶಕ್ಕೆ ಪ್ರವೇಶಿಸಿದ್ದು ಕರ್ನಾಟಕ ಯಾತ್ರೆ ಅಂತ್ಯಗೊಂಡಿದೆ.
ಬಳ್ಳಾರಿ ಜಿಲ್ಲೆಯ ಸಂಗನಕಲ್ಲು ಗ್ರಾಮದ ಹೊರವಲಯದಲ್ಲಿ ಶನಿವಾರ ರಾತ್ರಿ ತಂಗಿದ್ದ ರಾಹುಲ್ ಗಾಂಧಿ ಭಾನುವಾರ ಬೆಳಗ್ಗೆ 6.30ಕ್ಕೆ ಗ್ರಾಮದ ಕಾಳಿದಾಸ ವೃತ್ತದಿಂದ ಯಾತ್ರೆ ಆರಂಭಿಸಿದರು. ಆರಂಭದಲ್ಲಿ ಬಳ್ಳಾರಿ ಗ್ರಾಮಾಂತರ ಶಾಸಕ ಬಿ.ನಾಗೇಂದ್ರ, ವಿಧಾನ ಪರಿಷತ್ ವಿಪಕ್ಷ ನಾಯಕ ಬಿ.ಕೆ. ಹರಿಪ್ರಸಾದ್, ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ ಜೊತೆಗೆ ಹೆಜ್ಜೆ ಹಾಕಿದರು.

ಈ ನಡುವೆ, ಯಾತ್ರೆ ಮೋಕಾಕ್ಕೆ ತಲುಪಿದಾಗ ವಿದ್ಯುತ್ ಅವಘಡ ಸಂಭವಿಸಿದ್ದು ಯಾತ್ರೆಯಲ್ಲಿ ಪಾಲ್ಗೊಂಡಿದ್ದವರು ಗಲಿಬಿಲಿಗೆ ಒಳಗಾದರು. ವಿದ್ಯುತ್ ಶಾರ್ಟ್ ಸರ್ಕಿಟ್ ನಿಂದಾಗಿ ಯಾತ್ರೆಯಲ್ಲಿ ಪಾಲ್ಗೊಂಡಿದ್ದ ನಾಲ್ವರು ಗಾಯಗೊಂಡಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲಾಗಿದ್ದು ಅಪಾಯದಿಂದ ಪಾರಾಗಿದ್ದಾರೆ. ವಿದ್ಯುತ್ ಅವಘಡದ ಕಾರಣ ರಾಹುಲ್ ಜೊತೆಗಿದ್ದ ಎಸ್ಪಿಜಿ ಸಿಬಂದಿ ಕಟ್ಟುನಿಟ್ಟಿನ ಕ್ರಮ ವಹಿಸಲು ಮುಂದಾಗಿದೆ.



ಘಟನೆಯಲ್ಲಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಗಾಯಾಳುಗಳನ್ನು ಎಐಸಿಸಿ ಪ್ರಧಾನ ಕಾರ್ಯದರ್ಶಿ ಸುರ್ಜೇವಾಲ ಭೇಟಿಯಾಗಿ ಆರೋಗ್ಯ ವಿಚಾರಿಸಿದರು. ಎಸ್ಪಿಜಿ ಕ್ಲಿಯರೆನ್ಸ್ ಸಿಕ್ಕ ನಂತರ ರಾಹುಲ್ ಗಾಂಧಿ ಕೂಡ ಆಸ್ಪತ್ರೆಗೆ ಆಗಮಿಸಿ ಗಾಯಾಳುಗಳಿಗೆ ಸಾಂತ್ವನ ಹೇಳಿದರು. ಸಂಜೆ ನಿಗದಿಯಾದಂತೆ 4.30ಕ್ಕೆ ಯಾತ್ರೆ ಆರಂಭಗೊಂಡ ವೇಳೆ ಮಧ್ಯಪ್ರದೇಶ ಮಾಜಿ ಮುಖ್ಯಮಂತ್ರಿ ಕಮಲನಾಥ್, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ರಾಹುಲ್ ಗಾಂಧಿಗೆ ಸಾಥ್ ನೀಡಿದ್ದರು. ರಾಹುಲ್ ಗಾಂಧಿ ಜತೆ ಫೋಟೋ ಕ್ಲಿಕ್ಕಿಸಿಕೊಳ್ಳಲು ಕೆಲವರು ಮುಗಿಬಿದ್ದರಾದರೂ ಎಸ್ಪಿಜಿ ಅವಕಾಶ ಕೊಡಲಿಲ್ಲ.


)

ಅ.17ರಂದು ಎಐಸಿಸಿ ಚುನಾವಣೆ ನಿಮಿತ್ತ ಪಾದಯಾತ್ರೆ ಇರುವುದಿಲ್ಲ. ಅ.19ರಿಂದ ಆಂಧ್ರಪ್ರದೇಶದ ಛತ್ರಗುಡಿಯಿಂದ ಯಾತ್ರೆ ಪುನರಾರಂಭಗೊಳ್ಳಲಿದೆ ಎಂದು ಎಐಸಿಸಿ ಮೂಲಗಳು ತಿಳಿಸಿವೆ.
The miles, smiles and trials as Bharat Jodo completes 1,000 km
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 11:48 am
HK News Staffer
ಬಾಂಬ್ ಮಾದರಿಯ ವಸ್ತು ಸ್ಫೋಟಿಸಿ ರೀಲ್ಸ್ ಶೂಟಿಂಗ್ ;...
01-05-26 10:30 am
ಗುದದ್ವಾರದಲ್ಲಿ ಮೊಬೈಲ್ ಬಚ್ಚಿಟ್ಟು ಜೈಲು ಎಂಟ್ರಿಯಾದ...
01-05-26 09:39 am
ಸೌಜನ್ಯಾ ಪ್ರಕರಣ ಮರು ತನಿಖೆಗೆ ಸುಪ್ರೀಂ ಕೋರ್ಟಿಗೆ ಅ...
30-04-26 04:30 pm
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm