ಬ್ರೇಕಿಂಗ್ ನ್ಯೂಸ್
16-10-22 10:54 pm HK News Desk ಕರ್ನಾಟಕ
ಬಳ್ಳಾರಿ, ಅ.16 : ಎಐಸಿಸಿ ಮುಖಂಡ ರಾಹುಲ್ ಗಾಂಧಿ ಗಣಿನಾಡು ಕರ್ನಾಟಕದಲ್ಲಿ 17 ದಿನಗಳಿಂದ ಕೈಗೊಂಡಿದ್ದ ಭಾರತ್ ಜೋಡೋ ಯಾತ್ರೆ ಭಾನುವಾರ ಸಂಜೆ ಆಂಧ್ರಪ್ರದೇಶಕ್ಕೆ ಪ್ರವೇಶಿಸಿದ್ದು ಕರ್ನಾಟಕ ಯಾತ್ರೆ ಅಂತ್ಯಗೊಂಡಿದೆ.
ಬಳ್ಳಾರಿ ಜಿಲ್ಲೆಯ ಸಂಗನಕಲ್ಲು ಗ್ರಾಮದ ಹೊರವಲಯದಲ್ಲಿ ಶನಿವಾರ ರಾತ್ರಿ ತಂಗಿದ್ದ ರಾಹುಲ್ ಗಾಂಧಿ ಭಾನುವಾರ ಬೆಳಗ್ಗೆ 6.30ಕ್ಕೆ ಗ್ರಾಮದ ಕಾಳಿದಾಸ ವೃತ್ತದಿಂದ ಯಾತ್ರೆ ಆರಂಭಿಸಿದರು. ಆರಂಭದಲ್ಲಿ ಬಳ್ಳಾರಿ ಗ್ರಾಮಾಂತರ ಶಾಸಕ ಬಿ.ನಾಗೇಂದ್ರ, ವಿಧಾನ ಪರಿಷತ್ ವಿಪಕ್ಷ ನಾಯಕ ಬಿ.ಕೆ. ಹರಿಪ್ರಸಾದ್, ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ ಜೊತೆಗೆ ಹೆಜ್ಜೆ ಹಾಕಿದರು.

ಈ ನಡುವೆ, ಯಾತ್ರೆ ಮೋಕಾಕ್ಕೆ ತಲುಪಿದಾಗ ವಿದ್ಯುತ್ ಅವಘಡ ಸಂಭವಿಸಿದ್ದು ಯಾತ್ರೆಯಲ್ಲಿ ಪಾಲ್ಗೊಂಡಿದ್ದವರು ಗಲಿಬಿಲಿಗೆ ಒಳಗಾದರು. ವಿದ್ಯುತ್ ಶಾರ್ಟ್ ಸರ್ಕಿಟ್ ನಿಂದಾಗಿ ಯಾತ್ರೆಯಲ್ಲಿ ಪಾಲ್ಗೊಂಡಿದ್ದ ನಾಲ್ವರು ಗಾಯಗೊಂಡಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲಾಗಿದ್ದು ಅಪಾಯದಿಂದ ಪಾರಾಗಿದ್ದಾರೆ. ವಿದ್ಯುತ್ ಅವಘಡದ ಕಾರಣ ರಾಹುಲ್ ಜೊತೆಗಿದ್ದ ಎಸ್ಪಿಜಿ ಸಿಬಂದಿ ಕಟ್ಟುನಿಟ್ಟಿನ ಕ್ರಮ ವಹಿಸಲು ಮುಂದಾಗಿದೆ.



ಘಟನೆಯಲ್ಲಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಗಾಯಾಳುಗಳನ್ನು ಎಐಸಿಸಿ ಪ್ರಧಾನ ಕಾರ್ಯದರ್ಶಿ ಸುರ್ಜೇವಾಲ ಭೇಟಿಯಾಗಿ ಆರೋಗ್ಯ ವಿಚಾರಿಸಿದರು. ಎಸ್ಪಿಜಿ ಕ್ಲಿಯರೆನ್ಸ್ ಸಿಕ್ಕ ನಂತರ ರಾಹುಲ್ ಗಾಂಧಿ ಕೂಡ ಆಸ್ಪತ್ರೆಗೆ ಆಗಮಿಸಿ ಗಾಯಾಳುಗಳಿಗೆ ಸಾಂತ್ವನ ಹೇಳಿದರು. ಸಂಜೆ ನಿಗದಿಯಾದಂತೆ 4.30ಕ್ಕೆ ಯಾತ್ರೆ ಆರಂಭಗೊಂಡ ವೇಳೆ ಮಧ್ಯಪ್ರದೇಶ ಮಾಜಿ ಮುಖ್ಯಮಂತ್ರಿ ಕಮಲನಾಥ್, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ರಾಹುಲ್ ಗಾಂಧಿಗೆ ಸಾಥ್ ನೀಡಿದ್ದರು. ರಾಹುಲ್ ಗಾಂಧಿ ಜತೆ ಫೋಟೋ ಕ್ಲಿಕ್ಕಿಸಿಕೊಳ್ಳಲು ಕೆಲವರು ಮುಗಿಬಿದ್ದರಾದರೂ ಎಸ್ಪಿಜಿ ಅವಕಾಶ ಕೊಡಲಿಲ್ಲ.


)

ಅ.17ರಂದು ಎಐಸಿಸಿ ಚುನಾವಣೆ ನಿಮಿತ್ತ ಪಾದಯಾತ್ರೆ ಇರುವುದಿಲ್ಲ. ಅ.19ರಿಂದ ಆಂಧ್ರಪ್ರದೇಶದ ಛತ್ರಗುಡಿಯಿಂದ ಯಾತ್ರೆ ಪುನರಾರಂಭಗೊಳ್ಳಲಿದೆ ಎಂದು ಎಐಸಿಸಿ ಮೂಲಗಳು ತಿಳಿಸಿವೆ.
The miles, smiles and trials as Bharat Jodo completes 1,000 km
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm