ಬ್ರೇಕಿಂಗ್ ನ್ಯೂಸ್
16-10-22 10:54 pm HK News Desk ಕರ್ನಾಟಕ
ಬಳ್ಳಾರಿ, ಅ.16 : ಎಐಸಿಸಿ ಮುಖಂಡ ರಾಹುಲ್ ಗಾಂಧಿ ಗಣಿನಾಡು ಕರ್ನಾಟಕದಲ್ಲಿ 17 ದಿನಗಳಿಂದ ಕೈಗೊಂಡಿದ್ದ ಭಾರತ್ ಜೋಡೋ ಯಾತ್ರೆ ಭಾನುವಾರ ಸಂಜೆ ಆಂಧ್ರಪ್ರದೇಶಕ್ಕೆ ಪ್ರವೇಶಿಸಿದ್ದು ಕರ್ನಾಟಕ ಯಾತ್ರೆ ಅಂತ್ಯಗೊಂಡಿದೆ.
ಬಳ್ಳಾರಿ ಜಿಲ್ಲೆಯ ಸಂಗನಕಲ್ಲು ಗ್ರಾಮದ ಹೊರವಲಯದಲ್ಲಿ ಶನಿವಾರ ರಾತ್ರಿ ತಂಗಿದ್ದ ರಾಹುಲ್ ಗಾಂಧಿ ಭಾನುವಾರ ಬೆಳಗ್ಗೆ 6.30ಕ್ಕೆ ಗ್ರಾಮದ ಕಾಳಿದಾಸ ವೃತ್ತದಿಂದ ಯಾತ್ರೆ ಆರಂಭಿಸಿದರು. ಆರಂಭದಲ್ಲಿ ಬಳ್ಳಾರಿ ಗ್ರಾಮಾಂತರ ಶಾಸಕ ಬಿ.ನಾಗೇಂದ್ರ, ವಿಧಾನ ಪರಿಷತ್ ವಿಪಕ್ಷ ನಾಯಕ ಬಿ.ಕೆ. ಹರಿಪ್ರಸಾದ್, ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ ಜೊತೆಗೆ ಹೆಜ್ಜೆ ಹಾಕಿದರು.

ಈ ನಡುವೆ, ಯಾತ್ರೆ ಮೋಕಾಕ್ಕೆ ತಲುಪಿದಾಗ ವಿದ್ಯುತ್ ಅವಘಡ ಸಂಭವಿಸಿದ್ದು ಯಾತ್ರೆಯಲ್ಲಿ ಪಾಲ್ಗೊಂಡಿದ್ದವರು ಗಲಿಬಿಲಿಗೆ ಒಳಗಾದರು. ವಿದ್ಯುತ್ ಶಾರ್ಟ್ ಸರ್ಕಿಟ್ ನಿಂದಾಗಿ ಯಾತ್ರೆಯಲ್ಲಿ ಪಾಲ್ಗೊಂಡಿದ್ದ ನಾಲ್ವರು ಗಾಯಗೊಂಡಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲಾಗಿದ್ದು ಅಪಾಯದಿಂದ ಪಾರಾಗಿದ್ದಾರೆ. ವಿದ್ಯುತ್ ಅವಘಡದ ಕಾರಣ ರಾಹುಲ್ ಜೊತೆಗಿದ್ದ ಎಸ್ಪಿಜಿ ಸಿಬಂದಿ ಕಟ್ಟುನಿಟ್ಟಿನ ಕ್ರಮ ವಹಿಸಲು ಮುಂದಾಗಿದೆ.



ಘಟನೆಯಲ್ಲಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಗಾಯಾಳುಗಳನ್ನು ಎಐಸಿಸಿ ಪ್ರಧಾನ ಕಾರ್ಯದರ್ಶಿ ಸುರ್ಜೇವಾಲ ಭೇಟಿಯಾಗಿ ಆರೋಗ್ಯ ವಿಚಾರಿಸಿದರು. ಎಸ್ಪಿಜಿ ಕ್ಲಿಯರೆನ್ಸ್ ಸಿಕ್ಕ ನಂತರ ರಾಹುಲ್ ಗಾಂಧಿ ಕೂಡ ಆಸ್ಪತ್ರೆಗೆ ಆಗಮಿಸಿ ಗಾಯಾಳುಗಳಿಗೆ ಸಾಂತ್ವನ ಹೇಳಿದರು. ಸಂಜೆ ನಿಗದಿಯಾದಂತೆ 4.30ಕ್ಕೆ ಯಾತ್ರೆ ಆರಂಭಗೊಂಡ ವೇಳೆ ಮಧ್ಯಪ್ರದೇಶ ಮಾಜಿ ಮುಖ್ಯಮಂತ್ರಿ ಕಮಲನಾಥ್, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ರಾಹುಲ್ ಗಾಂಧಿಗೆ ಸಾಥ್ ನೀಡಿದ್ದರು. ರಾಹುಲ್ ಗಾಂಧಿ ಜತೆ ಫೋಟೋ ಕ್ಲಿಕ್ಕಿಸಿಕೊಳ್ಳಲು ಕೆಲವರು ಮುಗಿಬಿದ್ದರಾದರೂ ಎಸ್ಪಿಜಿ ಅವಕಾಶ ಕೊಡಲಿಲ್ಲ.


)

ಅ.17ರಂದು ಎಐಸಿಸಿ ಚುನಾವಣೆ ನಿಮಿತ್ತ ಪಾದಯಾತ್ರೆ ಇರುವುದಿಲ್ಲ. ಅ.19ರಿಂದ ಆಂಧ್ರಪ್ರದೇಶದ ಛತ್ರಗುಡಿಯಿಂದ ಯಾತ್ರೆ ಪುನರಾರಂಭಗೊಳ್ಳಲಿದೆ ಎಂದು ಎಐಸಿಸಿ ಮೂಲಗಳು ತಿಳಿಸಿವೆ.
The miles, smiles and trials as Bharat Jodo completes 1,000 km
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm