ಬ್ರೇಕಿಂಗ್ ನ್ಯೂಸ್
16-10-22 10:54 pm HK News Desk ಕರ್ನಾಟಕ
ಬಳ್ಳಾರಿ, ಅ.16 : ಎಐಸಿಸಿ ಮುಖಂಡ ರಾಹುಲ್ ಗಾಂಧಿ ಗಣಿನಾಡು ಕರ್ನಾಟಕದಲ್ಲಿ 17 ದಿನಗಳಿಂದ ಕೈಗೊಂಡಿದ್ದ ಭಾರತ್ ಜೋಡೋ ಯಾತ್ರೆ ಭಾನುವಾರ ಸಂಜೆ ಆಂಧ್ರಪ್ರದೇಶಕ್ಕೆ ಪ್ರವೇಶಿಸಿದ್ದು ಕರ್ನಾಟಕ ಯಾತ್ರೆ ಅಂತ್ಯಗೊಂಡಿದೆ.
ಬಳ್ಳಾರಿ ಜಿಲ್ಲೆಯ ಸಂಗನಕಲ್ಲು ಗ್ರಾಮದ ಹೊರವಲಯದಲ್ಲಿ ಶನಿವಾರ ರಾತ್ರಿ ತಂಗಿದ್ದ ರಾಹುಲ್ ಗಾಂಧಿ ಭಾನುವಾರ ಬೆಳಗ್ಗೆ 6.30ಕ್ಕೆ ಗ್ರಾಮದ ಕಾಳಿದಾಸ ವೃತ್ತದಿಂದ ಯಾತ್ರೆ ಆರಂಭಿಸಿದರು. ಆರಂಭದಲ್ಲಿ ಬಳ್ಳಾರಿ ಗ್ರಾಮಾಂತರ ಶಾಸಕ ಬಿ.ನಾಗೇಂದ್ರ, ವಿಧಾನ ಪರಿಷತ್ ವಿಪಕ್ಷ ನಾಯಕ ಬಿ.ಕೆ. ಹರಿಪ್ರಸಾದ್, ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ ಜೊತೆಗೆ ಹೆಜ್ಜೆ ಹಾಕಿದರು.

ಈ ನಡುವೆ, ಯಾತ್ರೆ ಮೋಕಾಕ್ಕೆ ತಲುಪಿದಾಗ ವಿದ್ಯುತ್ ಅವಘಡ ಸಂಭವಿಸಿದ್ದು ಯಾತ್ರೆಯಲ್ಲಿ ಪಾಲ್ಗೊಂಡಿದ್ದವರು ಗಲಿಬಿಲಿಗೆ ಒಳಗಾದರು. ವಿದ್ಯುತ್ ಶಾರ್ಟ್ ಸರ್ಕಿಟ್ ನಿಂದಾಗಿ ಯಾತ್ರೆಯಲ್ಲಿ ಪಾಲ್ಗೊಂಡಿದ್ದ ನಾಲ್ವರು ಗಾಯಗೊಂಡಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲಾಗಿದ್ದು ಅಪಾಯದಿಂದ ಪಾರಾಗಿದ್ದಾರೆ. ವಿದ್ಯುತ್ ಅವಘಡದ ಕಾರಣ ರಾಹುಲ್ ಜೊತೆಗಿದ್ದ ಎಸ್ಪಿಜಿ ಸಿಬಂದಿ ಕಟ್ಟುನಿಟ್ಟಿನ ಕ್ರಮ ವಹಿಸಲು ಮುಂದಾಗಿದೆ.



ಘಟನೆಯಲ್ಲಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಗಾಯಾಳುಗಳನ್ನು ಎಐಸಿಸಿ ಪ್ರಧಾನ ಕಾರ್ಯದರ್ಶಿ ಸುರ್ಜೇವಾಲ ಭೇಟಿಯಾಗಿ ಆರೋಗ್ಯ ವಿಚಾರಿಸಿದರು. ಎಸ್ಪಿಜಿ ಕ್ಲಿಯರೆನ್ಸ್ ಸಿಕ್ಕ ನಂತರ ರಾಹುಲ್ ಗಾಂಧಿ ಕೂಡ ಆಸ್ಪತ್ರೆಗೆ ಆಗಮಿಸಿ ಗಾಯಾಳುಗಳಿಗೆ ಸಾಂತ್ವನ ಹೇಳಿದರು. ಸಂಜೆ ನಿಗದಿಯಾದಂತೆ 4.30ಕ್ಕೆ ಯಾತ್ರೆ ಆರಂಭಗೊಂಡ ವೇಳೆ ಮಧ್ಯಪ್ರದೇಶ ಮಾಜಿ ಮುಖ್ಯಮಂತ್ರಿ ಕಮಲನಾಥ್, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ರಾಹುಲ್ ಗಾಂಧಿಗೆ ಸಾಥ್ ನೀಡಿದ್ದರು. ರಾಹುಲ್ ಗಾಂಧಿ ಜತೆ ಫೋಟೋ ಕ್ಲಿಕ್ಕಿಸಿಕೊಳ್ಳಲು ಕೆಲವರು ಮುಗಿಬಿದ್ದರಾದರೂ ಎಸ್ಪಿಜಿ ಅವಕಾಶ ಕೊಡಲಿಲ್ಲ.


)

ಅ.17ರಂದು ಎಐಸಿಸಿ ಚುನಾವಣೆ ನಿಮಿತ್ತ ಪಾದಯಾತ್ರೆ ಇರುವುದಿಲ್ಲ. ಅ.19ರಿಂದ ಆಂಧ್ರಪ್ರದೇಶದ ಛತ್ರಗುಡಿಯಿಂದ ಯಾತ್ರೆ ಪುನರಾರಂಭಗೊಳ್ಳಲಿದೆ ಎಂದು ಎಐಸಿಸಿ ಮೂಲಗಳು ತಿಳಿಸಿವೆ.
The miles, smiles and trials as Bharat Jodo completes 1,000 km
24-12-25 11:20 pm
Bangalore Correspondent
ಶಿವಮೊಗ್ಗ ; ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದ...
24-12-25 10:26 pm
MLA Byrathi Basavaraj, Bikklu Shiva Murder Ca...
24-12-25 04:07 pm
ಗಾಳಿಯಲ್ಲಿ ಗುಂಡು ಹಾರಿಸಿ ಉಡಚಣ ಸ್ವಾಮೀಜಿ ರಂಪಾಟ ;...
22-12-25 11:09 pm
ಕ್ರಿಮಿನಲ್ ಹಿನ್ನೆಲೆಯ ವ್ಯಕ್ತಿಯ ಹುಟ್ಟುಹಬ್ಬದಲ್ಲಿ...
22-12-25 10:30 pm
24-12-25 11:13 pm
HK News Desk
ಅಯೋಧ್ಯೆ ಮಂದಿರಕ್ಕೆ ಚಿನ್ನ, ವಜ್ರ, ಪಚ್ಚೆ ಕಲ್ಲುಗಳಿ...
24-12-25 07:38 pm
ಹಿಂಸೆಗೆ ನಲುಗಿದ ಬಾಂಗ್ಲಾ ; ಹಿಂದುಗಳನ್ನು ಗುರಿಯಾಗಿ...
23-12-25 03:28 pm
ಭಾರತ ಹಿಂದೂ ರಾಷ್ಟ್ರ ಎನ್ನಲು ಸಾಂವಿಧಾನಿಕ ಅನುಮೋದನೆ...
22-12-25 06:32 pm
ಶಬರಿಮಲೆ ಚಿನ್ನ ಕಳವು ; ಬೆಂಗಳೂರಿನ ಜುವೆಲ್ಲರಿ ಮಾಲೀ...
20-12-25 01:51 pm
24-12-25 10:30 pm
Mangalore Correspondent
ಬಜಪೆಯಲ್ಲಿ ಕಾಂಗ್ರೆಸ್ ಓಟಕ್ಕೆ ಎಸ್ಡಿಪಿಐ ಅಡ್ಡಗಾಲು...
24-12-25 06:07 pm
ವಿದ್ಯಾರ್ಥಿಗಳ ಕುಸಿತ, ಅಸ್ತಿತ್ವ ಕಳಕೊಂಡ ಸಣ್ಣ ಕಾಲೇ...
24-12-25 12:23 pm
ಬಜಪೆ ಪಟ್ಟಣ ಪಂಚಾಯತ್ ಚುನಾವಣೆ ; ಬಿಜೆಪಿಗೆ ಸ್ಪಷ್ಟ...
24-12-25 12:02 pm
MLA Vedavyas Kamath: ಮಹಾನಗರ ಪಾಲಿಕೆ ಕಾಂಗ್ರೆಸ್...
23-12-25 10:51 pm
23-12-25 01:41 pm
Mangalore Correspondent
ನೀವು 24 ಸಾವಿರ ಕಟ್ಟಿದರೆ ತಿಂಗಳಿಗೆ 20 ಲಕ್ಷ, ಕೇಂದ...
22-12-25 04:00 pm
ಹುಬ್ಬಳ್ಳಿಯಲ್ಲಿ ಮರ್ಯಾದಾ ಹತ್ಯೆ ; 19 ವರ್ಷದ ಗರ್ಭಿ...
22-12-25 02:18 pm
Udupi Arrest, Pakistan: ಕೊಚ್ಚಿನ್ ಶಿಪ್ ಯಾರ್ಡ್...
22-12-25 01:06 pm
ಟ್ರಾಫಿಕ್ ದಂಡದ ಹೆಸರಲ್ಲಿ ಎಪಿಕೆ ಫೈಲ್ ಲಿಂಕ್ ; ಮೋಸ...
21-12-25 09:36 pm