ಬ್ರೇಕಿಂಗ್ ನ್ಯೂಸ್
16-10-22 11:24 pm HK News Desk ಕರ್ನಾಟಕ
ಬೆಂಗಳೂರು, ಅಕ್ಟೋಬರ್ 16: ಕರ್ನಾಟಕ ಹೈಕೋರ್ಟ್ ಆದೇಶದ ಬೆನ್ನಲ್ಲೇ ಊಬರ್ ಕಂಪನಿ ಆಟೋ ಪ್ರಯಾಣದ ದರ ಇಳಿಸುವ ಮೂಲಕ ಪ್ರಯಾಣಿಕರಿಗೆ ಸಿಹಿ ಸುದ್ದಿ ನೀಡಿದೆ.
ಮೊಬೈಲ್ ಅಪ್ಲಿಕೇಷನ್ ಆಧಾರಿತ ಓಲಾ, ಊಬರ್ ಕಂಪನಿಗಳು ಆಟೋಗಳ ಪ್ರಯಾಣಿಕರಿಂದ ಹೆಚ್ಚುವರಿ ಹಣ ಪಡೆಯುತ್ತಿವೆ ಎಂಬ ದೂರುಗಳು ಕೇಳಿ ಬಂದಿದ್ದವು. ಈ ಸಂಬಂಧ ಪ್ರಕರಣ ಹೈಕೋರ್ಟ್ ಮೆಟ್ಟಿಲೇರಿತ್ತು. ಇದೀಗ ಹೈಕೋರ್ಟ್ ಆದೇಶದ ಬೆನ್ನಲ್ಲೇ ಶನಿವಾರದಿಂದ ಅನ್ವಯವಾಗುವಂತೆ ಊಬರ್ ಕಂಪನಿ ಮಾತ್ರ ಆಟೋರಿಕ್ಷಾಗಳ ಪ್ರಯಾಣ ದರ ಇಳಿಕೆ ಮಾಡಿದೆ.
ಭಾರೀ ಮಳೆಯಿಂದ ದೂಧ್ ಸಾಗರ್ ಜಲಪಾತದ ಸೇತುವೆ ಕುಸಿತ: ಪ್ರವಾಹದಲ್ಲಿ ಸಿಲುಕಿದ 40 ಪ್ರವಾಸಿಗರು
ಊಬರ್ ಕಂಪನಿಯು ಎರಡು ಕಿಲೋ ಮೀಟರ್ ಪ್ರಯಾಣಕ್ಕೆ 40ರಿಂದ 45 ರೂಪಾಯಿ ನಿಗದಿಪಡಿಸಿದೆ. ಇದರಿಂದ ಆಟೋ ಪ್ರಯಾಣದ ದರ ಮೊದಲಿಗಿಂತ ಶೇ.25ರಿಂದ 30ರಷ್ಟು ದರದಲ್ಲಿ ಇಳಿಕೆ ಆಗಿದೆ. ಊಬರ್ ಹೊರತು ಓಲಾ ಕಂಪನಿ ಎರಡು ಕಿಲೋ ಮೀಟರ್ಗೆ 75ರಿಂದ 80ರೂ.ವರೆಗೆ ಹೆಚ್ಚುವರಿ ಹಣ ಪಡೆಯುವುದನ್ನು ಮುಂದುವರಿಸಿವೆ ಎಂದು ತಿಳಿದು ಬಂದಿದೆ.
ಓಲಾದಿಂದ ಅಧಿಕ ಹಣ ವಸೂಲಿ; ಆಟೋರಿಕ್ಷಾ ಅನುಮತಿ ಹಾಗೂ ಹೆಚ್ಚು ದರ ವಿಧಿಸುವ ಪ್ರಕರಣ ವಿಚಾರವಾಗಿ ರಾಜ್ಯ ಹೈಕೋರ್ಟ್ ಶುಕ್ರವಾರ ಆದೇಶ ಹೊರಡಿಸಿದೆ. ಆದೇಶದನ್ವಯ ರಾಜ್ಯ ಸರ್ಕಾರ ಮುಂದಿನ 15ದಿನದಲ್ಲಿ ಆಟೋ ರಿಕ್ಷಾಗಳ ಪ್ರಯಾಣದ ದರವನ್ನು ಹೊಸದಾಗಿ ನಿಗದಿಪಡಿಸಬೇಕು. ಈ ಸಂಬಂಧ ಕಂಪನಿಗಳ ಜತೆ ಚರ್ಚಿಸಿ ಎಂದಿರುವ ಹೈಕೋರ್ಟ್ ಸರ್ಕಾರದ ದರ ನಿಗದಿವರೆಗೆ ಓಲಾ, ಊಬರ್ ಕಂಪನಿಗಳು ನಿಗದಿತ ದರ ಮತ್ತು ಹೆಚ್ಚುವರಿ ಶೇ. 10ರಷ್ಟು ಹಣ, ಸೇವಾ ತೆರಿಗೆ ಮಾತ್ರ ಪಡೆಯಬೇಕು ಎಂದು ತಿಳಿಸಿದೆ. ಇದರಿಂದ ಕೂಡಲೇ ಎಚ್ಚೆತ್ತಿರುವ ಊಬರ್ ಪ್ರಯಾಣದ ದರ ಇಳಿಕೆ ಮಾಡಿದೆ.
ಮೆಜೆಸ್ಟಿಕ್ ಮತ್ತು ಶಿವಾನಂದ ವೃತ್ತದಿಂದ ನಡುವೆ ಎರಡು ಕಿಲೋ ಮೀಟರ್ಗಿಂತಲೂ ಕಡಿಮೆ ದೂರ ಇದೆ. ಇಷ್ಟು ದೂರದ ಪ್ರಯಾಣಕ್ಕೆ ಶನಿವಾರ ಉಬರ್ ಆಪ್ನಲ್ಲಿ 36ರೂ. ದರ ತೋರಿಸಿದರೆ, ಓಲಾ ಆಪ್ ನಲ್ಲಿ 64ರೂ. ದರ ನಿಗದಿ ಇರುವುದನ್ನು ಕಾಣಬಹುದು.
ಹೈಕೋರ್ಟ್ಗೆ ಪ್ರತ್ಯೇಕ 2 ಪಿಐಎಲ್ ಸಲ್ಲಿಕೆ: ವಿಚಾರಣೆ
ಆ್ಯಪ್ ಆಧಾರಿತ ಓಲಾ ಹಾಗೂ ಉಬರ್ ಆಟೋರಿಕ್ಷಾಗಳ ಸೇವೆ ನಿಷೇಧಿಸಬೇಕು ಎಂದು ರಾಜ್ಯ ಸರ್ಕಾರ ಇತ್ತೀಚೆಗೆ ಹೊರಡಿಸಿದ ಆದೇಶವನ್ನು ರದ್ದು ಮಾಡುವಂತೆ ಕೋರಿ ಎಎನ್ಐ ಟೆಕ್ನಾಲಜೀಸ್ ಕಂಪನಿಯೊಂದು ಮತ್ತು ಉಬರ್ ಇಂಡಿಯಾ ಟೆಕ್ನಾಲಜೀಸ್ ಪ್ರೈವೇಟ್ ಲಿಮಿಟೆಡ್ ಈ ಎರಡು ಕಂಪನಿಗಳು ಹೈಕೋರ್ಟ್ಗೆ ಪ್ರತ್ಯೇಕವಾಗಿ ಅರ್ಜಿ ಸಲ್ಲಿಸಿದ್ದವು. ಈ ಅರ್ಜಿಗಳನ್ನು ಈ ಹಿಂದೆಯೆ ವಿಚಾರಣೆ ನಡೆಸಿದ್ದ ಹೈಕೋರ್ಟ್ ನ್ಯಾಯಮೂರ್ತಿ ಎಂಜಿಎಸ್ ಕಮಲ್ ಅವರ ಪೀಠ ನ್ಯಾಯ ಸಮ್ಮತವಾಗಿ ದರ ನಿಗದಿಪಡಿಸಬೇಕು. ಅದಕ್ಕಾಗಿ ಓಲಾ ಮತ್ತು ಉಬರ್ ಕಂಪನಿಗಳ ಜತೆ ಚರ್ಚೆ ನಡೆಸಿ ಎಂದು ಸೂಚಿಸಿತ್ತು.
ನಂತರ ಗುರುವಾರ ವಿಚಾರ ನಡೆಸಿದ ಹೈಕೋರ್ಟ್ ಓಲಾ ಮತ್ತು ಉಬರ್ ಆಟೋರಿಕ್ಷಾಗಳ ಸಂಬಂಧಿಸಿದಂತೆ ಎದ್ದಿರುವ ಸಮಸ್ಯೆಗಳನ್ನು ಜನರಿಗೆ ತೊಂದರೆ ಆಗದಂತೆ ಪರಿಹರಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ತಿಳಿಸಿ ಶುಕ್ರವಾರಕ್ಕೆ ವಿಚಾರಣೆ ಮುಂದೂಡಿತ್ತು. ಅದರಂತೆ ಶುಕ್ರವಾರ ವಿಚಾರಣೆ ಕೈಗೆತ್ತಿಕೊಂಡ ನ್ಯಾಯಪೀಠವು ಮುಂದಿನ 15ದಿನದಲ್ಲಿ ರಾಜ್ಯ ಸರ್ಕಾರ ಕಂಪನಿಗಳ ಜತೆ ಚರ್ಚಿಸಿ ಹೊಸ ದರ ನಿಗದಿ ಮಾಡಿ ಎಂದು ಹೇಳಿತು. ಜತೆಗೆ ಕಂಪನಿಗಳಿಗೆ ಕೆಲವು ಸಲಹೆಗಳನ್ನು ನೀಡಿತು. ಇದರ ಬೆನ್ನಲ್ಲೆ ಉಬರ್ ಕಂಪನಿ ಮಾತ್ರ ಆಟೋ ರಿಕ್ಷಾಗಳ ಪ್ರಯಾಣದ ದರವನ್ನು ಶನಿವಾರದಿಂದಲೇ ಜಾರಿಗೆ ಬರುವಂತೆ ಇಳಿಕೆ ಮಾಡಿದೆ.
After karnataka high court orderu ber cuts auto travel price.
16-09-25 11:00 pm
Bangalore Correspondent
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
17-09-25 01:34 pm
Mangalore Correspondent
Dharmasthala, Lakshmish Tolpadi, Mangalore: ಧ...
16-09-25 07:48 pm
Ex IPS Kempaiah, Professor Umeshchandra, Mang...
16-09-25 07:02 pm
Mangalore BJP Protest, UT khader, Red Stone:...
16-09-25 06:51 pm
UT Khader, Mangalore, Ullal: ಉಳ್ಳಾಲ ಕ್ಷೇತ್ರದಲ...
16-09-25 06:06 pm
17-09-25 12:25 pm
Bangalore Correspondent
Vijayapura Bank Robbery: ಮಹಾರಾಷ್ಟ್ರ ಗಡಿಭಾಗದ ವ...
16-09-25 10:40 pm
Bidar crime: ಏಳು ವರ್ಷದ ಬಾಲಕಿಯನ್ನ ಮೂರನೇ ಮಹಡಿಯಿ...
16-09-25 07:12 pm
Bangalore Police, Inspector Suspend, Crime, D...
15-09-25 10:47 pm
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm