ಬ್ರೇಕಿಂಗ್ ನ್ಯೂಸ್
17-10-22 01:23 pm Bangalore Correspondent ಕರ್ನಾಟಕ
ಬೆಂಗಳೂರು, ಅ.17 : ಬೆಂಗಳೂರು ಡಿಸಿಪಿ ನಿಶಾ ಜೇಮ್ಸ್ ತಮಗೆ ಮಾನಸಿಕ ಕಿರುಕುಳ ನೀಡುತ್ತಿದ್ದಾರೆಂದು ಬೆಂಗಳೂರು ಪೊಲೀಸ್ ಆಯುಕ್ತರ ಕಚೇರಿ ಸಿಬಂದಿ ಪೊಲೀಸ್ ಇಲಾಖೆಯ ಆಡಳಿತ ವಿಭಾಗದ ಎಡಿಜಿಪಿ ಡಾ.ಎಂ.ಎ.ಸಲೀಂಗೆ ದೂರು ಸಲ್ಲಿಸಿದ್ದಾರೆ.
ಕಚೇರಿಯ 25ಕ್ಕೂ ಹೆಚ್ಚು ಎಫ್ ಡಿಎ, ಎಸ್ಡಿಎಗಳಿಂದ ಎಡಿಜಿಪಿಗೆ ದೂರು ನೀಡಲಾಗಿದೆ. ಸೆಪ್ಟೆಂಬರ್ 3ರಂದು ಈ ಬಗ್ಗೆ ಎಡಿಜಿಪಿಗೆ ನೀಡಿದ್ದ ದೂರಿನ ಪ್ರತಿ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಸಾಮಾನ್ಯ ವಿಷಯಗಳನ್ನ ದೊಡ್ಡದು ಮಾಡಿ ಶಿಸ್ತುಕ್ರಮಕ್ಕೆ ಮುಂದಾಗುತ್ತಾರೆ. ಉದ್ದೇಶಪೂರ್ವಕ ಸಿಬ್ಬಂದಿಗಳನ್ನ ತಡರಾತ್ರಿ ವರೆಗೂ ಕಚೇರಿಯಲ್ಲಿ ಉಳಿಸಿಕೊಳ್ಳುತ್ತಾರೆ. ನಿಶಾ ಜೇಮ್ಸ್ ಸಂಜೆ 6ರ ನಂತರ ಕೆಲಸ ಶುರುಮಾಡಿ ರಾತ್ರಿ 3ಕ್ಕೆ ಮುಗಿಸ್ತಾರೆ. ಇದರಿಂದ ಪತ್ನಿ ಮಕ್ಕಳು ಪೋಷಕರ ಜೊತೆ ಸಮಯ ಕಳೆಯಲು ಆಗ್ತಿಲ್ಲ. ನಿಶಾ ಜೇಮ್ಸ್ ಕಿರುಕುಳದಿಂದಾಗಿ ನಮಗೆ ನಿದ್ದೆ ಮಾಡಲು ಆಗುತ್ತಿಲ್ಲ. ನಿದ್ರಾಹೀನತೆಯಿಂದ ಕಾಯಿಲೆ ಎದುರಾಗುತ್ತಿವೆ ಎಂದು ಸಿಬ್ಬಂದಿ ನೀಡಿದ್ದ ದೂರಿನ ಪ್ರತಿ ಜಾಲತಾಣದಲ್ಲಿ ವೈರಲ್ ಆಗಿದೆ.
ಸಿಬ್ಬಂದಿಯನ್ನು ತುಚ್ಛವಾಗಿ ಕಾಣ್ತಾರೆ ನಿಶಾ ಜೇಮ್ಸ್ !
ನಿಶಾ ಜೇಮ್ಸ್ ಅವರ ನಡೆಯಿಂದ ಕಿರುಕುಳಕ್ಕೊಳಗಾದ 25 ಸಿಬ್ಬಂದಿಗೆ ವೇತನ ಬಡ್ತಿಯನ್ನ ತಡೆ ಹಿಡಿಯಲಾಗಿದೆ. ನಿಶಾ ಅವರು ಕಡತಗಳನ್ನ ಸಮಯಕ್ಕೆ ಸರಿಯಾಗಿ ನೋಡದೆ, ತಿಂಗಳ ಕಾಲ ಸಹಿ ಮಾಡದೇ ಪೆಂಡಿಂಗ್ ಇಡ್ತಾರೆ. ಇದರಿಂದ ಕಡತ ವಿಲೇವಾರಿ ತಡವಾಗ್ತಿದೆ. ನಿಶಾ ಜೇಮ್ಸ್ ಕಚೇರಿಯಲ್ಲಿ ಹಿಂದೂ ದೇವರ ಫೋಟೋ ಇಡಲಿಕ್ಕೆ ಅವಕಾಶ ನೀಡುವುದಿಲ್ಲ. ಕನ್ನಡದಲ್ಲಿ ವ್ಯವಹರಿಸುವುದಿಲ್ಲ, ಕನ್ನಡ ಮಾತಾಡುವ ಸಿಬ್ಬಂದಿಯನ್ನ ತುಚ್ಛವಾಗಿ ಕಾಣ್ತಾರೆ. ಕಚೇರಿಯಲ್ಲಿ ತೊಂದರೆ ಕಷ್ಟಗಳನ್ನ ಹೇಳಲಿಕ್ಕೆ ಸಿಬ್ಬಂದಿ ಬಂದ್ರೆ ಭಿಕ್ಷುಕರಂತೆ ಕಾಣ್ತಾರೆ. ಮಹಿಳಾ ಟೈಪಿಸ್ಟ್ ತಾನು ಗರ್ಭಿಣಿ ಎಂದು ತಿಳಿಸಿದ್ರು ಕಚೇರಿಯಲ್ಲಿ 9 ಗಂಟೆಗೂ ಹೆಚ್ಚು ಕಾಲ ಕಾಯುವಂತೆ ಮಾಡಿದ್ದರು. ಇದರಿಂದ ಗರ್ಭಿಣಿ ಟೈಪಿಸ್ಟ್ ಸಿಬ್ಬಂದಿಗೆ ಮಾನಸಿಕ ಹಿಂಸೆಯಾಗಿ ಗರ್ಭಪಾತವಾಗಿದೆ ಎಂದು ಬೆಂಗಳೂರು ಪೊಲೀಸ್ ಆಯುಕ್ತರ ಕಚೇರಿ ಸಿಬ್ಬಂದಿ ದೂರಿನಲ್ಲಿ ತಿಳಿಸಿದ್ದಾರೆ.
Bangalore DCP Nisha James is alleged of giving Mental torture to police staffs, a complaint has been filed to the Bangalore Commissioner of Police.
14-08-25 03:51 pm
Bangalore Correspondent
DK Shivakumar, Dharmasthala, Virendra Heggade...
14-08-25 03:49 pm
IPS Alok Kumar, News: ಪೊಲೀಸ್ ಶಾಲೆಗಳಲ್ಲೇ ಲಂಚ,...
14-08-25 01:48 pm
Dharmasthala Case, Dinesh Gundu Rao: ಮತ್ತೆ ಗು...
13-08-25 07:03 pm
ವಜಾ ಹಿಂದೆ ದೊಡ್ಡ ಷಡ್ಯಂತ್ರ ಆಗಿದೆ, ರಾಹುಲ್ ಗಾಂಧಿ...
12-08-25 10:39 pm
14-08-25 07:02 pm
HK News Desk
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮೋಡಿ ಮಾಡಲಿದ್ದಾರ...
14-08-25 11:26 am
ತಾಯಿ ಜೊತೆ ಅಂಡಮಾನ್ ಹೋಗ್ತೀನಿ ಎಂದಿದ್ದ ಮಗಳು ; ಬೇಡ...
13-08-25 11:56 am
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
'ದೇಶ ಸುರಕ್ಷಿತ ಕೈಯಲ್ಲಿದೆ' ; ನರೇಂದ್ರ ಮೋದಿ ಸರ್ಕ...
12-08-25 02:49 pm
14-08-25 01:12 pm
Mangaluru Staff
Bantwal Deputy Tahsildar, Lokayukta: 20 ಸಾವಿರ...
13-08-25 10:22 pm
Dharmasthala News Today, Point No 13: ಕಡೆಗೂ ಪ...
13-08-25 10:01 pm
The Ocean Pearl Brings “Flavors of India” to...
13-08-25 08:23 pm
ಹಠಾತ್ ಕುಸಿದು ಬಿದ್ದು ಕಾಲೇಜು ಬಸ್ ನಿರ್ವಾಹಕ ಸಾವು...
13-08-25 01:49 pm
14-08-25 05:31 pm
Bangalore Correspondent
Supreme Court, Actor Darshan Jail Order: ಸುಪ್...
14-08-25 11:51 am
Fake Stock Market Scam, Fraud: 10 ಲಕ್ಷ ಹೂಡಿಕೆ...
13-08-25 05:40 pm
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm