ಬ್ರೇಕಿಂಗ್ ನ್ಯೂಸ್
17-10-22 01:23 pm Bangalore Correspondent ಕರ್ನಾಟಕ
ಬೆಂಗಳೂರು, ಅ.17 : ಬೆಂಗಳೂರು ಡಿಸಿಪಿ ನಿಶಾ ಜೇಮ್ಸ್ ತಮಗೆ ಮಾನಸಿಕ ಕಿರುಕುಳ ನೀಡುತ್ತಿದ್ದಾರೆಂದು ಬೆಂಗಳೂರು ಪೊಲೀಸ್ ಆಯುಕ್ತರ ಕಚೇರಿ ಸಿಬಂದಿ ಪೊಲೀಸ್ ಇಲಾಖೆಯ ಆಡಳಿತ ವಿಭಾಗದ ಎಡಿಜಿಪಿ ಡಾ.ಎಂ.ಎ.ಸಲೀಂಗೆ ದೂರು ಸಲ್ಲಿಸಿದ್ದಾರೆ.
ಕಚೇರಿಯ 25ಕ್ಕೂ ಹೆಚ್ಚು ಎಫ್ ಡಿಎ, ಎಸ್ಡಿಎಗಳಿಂದ ಎಡಿಜಿಪಿಗೆ ದೂರು ನೀಡಲಾಗಿದೆ. ಸೆಪ್ಟೆಂಬರ್ 3ರಂದು ಈ ಬಗ್ಗೆ ಎಡಿಜಿಪಿಗೆ ನೀಡಿದ್ದ ದೂರಿನ ಪ್ರತಿ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಸಾಮಾನ್ಯ ವಿಷಯಗಳನ್ನ ದೊಡ್ಡದು ಮಾಡಿ ಶಿಸ್ತುಕ್ರಮಕ್ಕೆ ಮುಂದಾಗುತ್ತಾರೆ. ಉದ್ದೇಶಪೂರ್ವಕ ಸಿಬ್ಬಂದಿಗಳನ್ನ ತಡರಾತ್ರಿ ವರೆಗೂ ಕಚೇರಿಯಲ್ಲಿ ಉಳಿಸಿಕೊಳ್ಳುತ್ತಾರೆ. ನಿಶಾ ಜೇಮ್ಸ್ ಸಂಜೆ 6ರ ನಂತರ ಕೆಲಸ ಶುರುಮಾಡಿ ರಾತ್ರಿ 3ಕ್ಕೆ ಮುಗಿಸ್ತಾರೆ. ಇದರಿಂದ ಪತ್ನಿ ಮಕ್ಕಳು ಪೋಷಕರ ಜೊತೆ ಸಮಯ ಕಳೆಯಲು ಆಗ್ತಿಲ್ಲ. ನಿಶಾ ಜೇಮ್ಸ್ ಕಿರುಕುಳದಿಂದಾಗಿ ನಮಗೆ ನಿದ್ದೆ ಮಾಡಲು ಆಗುತ್ತಿಲ್ಲ. ನಿದ್ರಾಹೀನತೆಯಿಂದ ಕಾಯಿಲೆ ಎದುರಾಗುತ್ತಿವೆ ಎಂದು ಸಿಬ್ಬಂದಿ ನೀಡಿದ್ದ ದೂರಿನ ಪ್ರತಿ ಜಾಲತಾಣದಲ್ಲಿ ವೈರಲ್ ಆಗಿದೆ.
ಸಿಬ್ಬಂದಿಯನ್ನು ತುಚ್ಛವಾಗಿ ಕಾಣ್ತಾರೆ ನಿಶಾ ಜೇಮ್ಸ್ !
ನಿಶಾ ಜೇಮ್ಸ್ ಅವರ ನಡೆಯಿಂದ ಕಿರುಕುಳಕ್ಕೊಳಗಾದ 25 ಸಿಬ್ಬಂದಿಗೆ ವೇತನ ಬಡ್ತಿಯನ್ನ ತಡೆ ಹಿಡಿಯಲಾಗಿದೆ. ನಿಶಾ ಅವರು ಕಡತಗಳನ್ನ ಸಮಯಕ್ಕೆ ಸರಿಯಾಗಿ ನೋಡದೆ, ತಿಂಗಳ ಕಾಲ ಸಹಿ ಮಾಡದೇ ಪೆಂಡಿಂಗ್ ಇಡ್ತಾರೆ. ಇದರಿಂದ ಕಡತ ವಿಲೇವಾರಿ ತಡವಾಗ್ತಿದೆ. ನಿಶಾ ಜೇಮ್ಸ್ ಕಚೇರಿಯಲ್ಲಿ ಹಿಂದೂ ದೇವರ ಫೋಟೋ ಇಡಲಿಕ್ಕೆ ಅವಕಾಶ ನೀಡುವುದಿಲ್ಲ. ಕನ್ನಡದಲ್ಲಿ ವ್ಯವಹರಿಸುವುದಿಲ್ಲ, ಕನ್ನಡ ಮಾತಾಡುವ ಸಿಬ್ಬಂದಿಯನ್ನ ತುಚ್ಛವಾಗಿ ಕಾಣ್ತಾರೆ. ಕಚೇರಿಯಲ್ಲಿ ತೊಂದರೆ ಕಷ್ಟಗಳನ್ನ ಹೇಳಲಿಕ್ಕೆ ಸಿಬ್ಬಂದಿ ಬಂದ್ರೆ ಭಿಕ್ಷುಕರಂತೆ ಕಾಣ್ತಾರೆ. ಮಹಿಳಾ ಟೈಪಿಸ್ಟ್ ತಾನು ಗರ್ಭಿಣಿ ಎಂದು ತಿಳಿಸಿದ್ರು ಕಚೇರಿಯಲ್ಲಿ 9 ಗಂಟೆಗೂ ಹೆಚ್ಚು ಕಾಲ ಕಾಯುವಂತೆ ಮಾಡಿದ್ದರು. ಇದರಿಂದ ಗರ್ಭಿಣಿ ಟೈಪಿಸ್ಟ್ ಸಿಬ್ಬಂದಿಗೆ ಮಾನಸಿಕ ಹಿಂಸೆಯಾಗಿ ಗರ್ಭಪಾತವಾಗಿದೆ ಎಂದು ಬೆಂಗಳೂರು ಪೊಲೀಸ್ ಆಯುಕ್ತರ ಕಚೇರಿ ಸಿಬ್ಬಂದಿ ದೂರಿನಲ್ಲಿ ತಿಳಿಸಿದ್ದಾರೆ.
Bangalore DCP Nisha James is alleged of giving Mental torture to police staffs, a complaint has been filed to the Bangalore Commissioner of Police.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm