ಬ್ರೇಕಿಂಗ್ ನ್ಯೂಸ್
17-10-22 01:23 pm Bangalore Correspondent ಕರ್ನಾಟಕ
ಬೆಂಗಳೂರು, ಅ.17 : ಬೆಂಗಳೂರು ಡಿಸಿಪಿ ನಿಶಾ ಜೇಮ್ಸ್ ತಮಗೆ ಮಾನಸಿಕ ಕಿರುಕುಳ ನೀಡುತ್ತಿದ್ದಾರೆಂದು ಬೆಂಗಳೂರು ಪೊಲೀಸ್ ಆಯುಕ್ತರ ಕಚೇರಿ ಸಿಬಂದಿ ಪೊಲೀಸ್ ಇಲಾಖೆಯ ಆಡಳಿತ ವಿಭಾಗದ ಎಡಿಜಿಪಿ ಡಾ.ಎಂ.ಎ.ಸಲೀಂಗೆ ದೂರು ಸಲ್ಲಿಸಿದ್ದಾರೆ.
ಕಚೇರಿಯ 25ಕ್ಕೂ ಹೆಚ್ಚು ಎಫ್ ಡಿಎ, ಎಸ್ಡಿಎಗಳಿಂದ ಎಡಿಜಿಪಿಗೆ ದೂರು ನೀಡಲಾಗಿದೆ. ಸೆಪ್ಟೆಂಬರ್ 3ರಂದು ಈ ಬಗ್ಗೆ ಎಡಿಜಿಪಿಗೆ ನೀಡಿದ್ದ ದೂರಿನ ಪ್ರತಿ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಸಾಮಾನ್ಯ ವಿಷಯಗಳನ್ನ ದೊಡ್ಡದು ಮಾಡಿ ಶಿಸ್ತುಕ್ರಮಕ್ಕೆ ಮುಂದಾಗುತ್ತಾರೆ. ಉದ್ದೇಶಪೂರ್ವಕ ಸಿಬ್ಬಂದಿಗಳನ್ನ ತಡರಾತ್ರಿ ವರೆಗೂ ಕಚೇರಿಯಲ್ಲಿ ಉಳಿಸಿಕೊಳ್ಳುತ್ತಾರೆ. ನಿಶಾ ಜೇಮ್ಸ್ ಸಂಜೆ 6ರ ನಂತರ ಕೆಲಸ ಶುರುಮಾಡಿ ರಾತ್ರಿ 3ಕ್ಕೆ ಮುಗಿಸ್ತಾರೆ. ಇದರಿಂದ ಪತ್ನಿ ಮಕ್ಕಳು ಪೋಷಕರ ಜೊತೆ ಸಮಯ ಕಳೆಯಲು ಆಗ್ತಿಲ್ಲ. ನಿಶಾ ಜೇಮ್ಸ್ ಕಿರುಕುಳದಿಂದಾಗಿ ನಮಗೆ ನಿದ್ದೆ ಮಾಡಲು ಆಗುತ್ತಿಲ್ಲ. ನಿದ್ರಾಹೀನತೆಯಿಂದ ಕಾಯಿಲೆ ಎದುರಾಗುತ್ತಿವೆ ಎಂದು ಸಿಬ್ಬಂದಿ ನೀಡಿದ್ದ ದೂರಿನ ಪ್ರತಿ ಜಾಲತಾಣದಲ್ಲಿ ವೈರಲ್ ಆಗಿದೆ.
ಸಿಬ್ಬಂದಿಯನ್ನು ತುಚ್ಛವಾಗಿ ಕಾಣ್ತಾರೆ ನಿಶಾ ಜೇಮ್ಸ್ !
ನಿಶಾ ಜೇಮ್ಸ್ ಅವರ ನಡೆಯಿಂದ ಕಿರುಕುಳಕ್ಕೊಳಗಾದ 25 ಸಿಬ್ಬಂದಿಗೆ ವೇತನ ಬಡ್ತಿಯನ್ನ ತಡೆ ಹಿಡಿಯಲಾಗಿದೆ. ನಿಶಾ ಅವರು ಕಡತಗಳನ್ನ ಸಮಯಕ್ಕೆ ಸರಿಯಾಗಿ ನೋಡದೆ, ತಿಂಗಳ ಕಾಲ ಸಹಿ ಮಾಡದೇ ಪೆಂಡಿಂಗ್ ಇಡ್ತಾರೆ. ಇದರಿಂದ ಕಡತ ವಿಲೇವಾರಿ ತಡವಾಗ್ತಿದೆ. ನಿಶಾ ಜೇಮ್ಸ್ ಕಚೇರಿಯಲ್ಲಿ ಹಿಂದೂ ದೇವರ ಫೋಟೋ ಇಡಲಿಕ್ಕೆ ಅವಕಾಶ ನೀಡುವುದಿಲ್ಲ. ಕನ್ನಡದಲ್ಲಿ ವ್ಯವಹರಿಸುವುದಿಲ್ಲ, ಕನ್ನಡ ಮಾತಾಡುವ ಸಿಬ್ಬಂದಿಯನ್ನ ತುಚ್ಛವಾಗಿ ಕಾಣ್ತಾರೆ. ಕಚೇರಿಯಲ್ಲಿ ತೊಂದರೆ ಕಷ್ಟಗಳನ್ನ ಹೇಳಲಿಕ್ಕೆ ಸಿಬ್ಬಂದಿ ಬಂದ್ರೆ ಭಿಕ್ಷುಕರಂತೆ ಕಾಣ್ತಾರೆ. ಮಹಿಳಾ ಟೈಪಿಸ್ಟ್ ತಾನು ಗರ್ಭಿಣಿ ಎಂದು ತಿಳಿಸಿದ್ರು ಕಚೇರಿಯಲ್ಲಿ 9 ಗಂಟೆಗೂ ಹೆಚ್ಚು ಕಾಲ ಕಾಯುವಂತೆ ಮಾಡಿದ್ದರು. ಇದರಿಂದ ಗರ್ಭಿಣಿ ಟೈಪಿಸ್ಟ್ ಸಿಬ್ಬಂದಿಗೆ ಮಾನಸಿಕ ಹಿಂಸೆಯಾಗಿ ಗರ್ಭಪಾತವಾಗಿದೆ ಎಂದು ಬೆಂಗಳೂರು ಪೊಲೀಸ್ ಆಯುಕ್ತರ ಕಚೇರಿ ಸಿಬ್ಬಂದಿ ದೂರಿನಲ್ಲಿ ತಿಳಿಸಿದ್ದಾರೆ.
Bangalore DCP Nisha James is alleged of giving Mental torture to police staffs, a complaint has been filed to the Bangalore Commissioner of Police.
11-03-26 11:48 am
HK News Staffer
LPG ಸಿಲಿಂಡರ್ ಪೂರೈಕೆ ಸ್ಥಗಿತ ; ಬೆಂಗಳೂರಿನಲ್ಲಿ ಹಲ...
10-03-26 01:47 pm
ಗುರುಗ್ರಾಮ್ನಲ್ಲಿ ನಿರ್ಮಾಣ ಹಂತದ ಗೋಡೆ ಕುಸಿತ ; 7...
10-03-26 11:04 am
ಸ್ತ್ರೀ–ಪುರುಷರ ನಗ್ನ ಫೋಟೋಗಳು, ಕೊಳೆತ ಟೊಮೆಟೋ ; ಬೆ...
10-03-26 10:49 am
ಕಲಬುರಗಿ ಜಾತ್ರೆಯಲ್ಲಿ ಭೀಕರ ದುರಂತ; ರಥದ ಚಕ್ರಕ್ಕೆ...
09-03-26 09:51 pm
10-03-26 09:46 pm
HK News Desk
ಹರ್ಮುಜ್ ಜಲಸಂಧಿಯಲ್ಲಿ ತೈಲ ಹಡಗು ಬಂಧಿ ; ಜಗತ್ತಿಗೆ...
10-03-26 04:30 pm
ಕಚ್ಚಾ ತೈಲ ದರ ಏರಿಕೆ ; ಪಾಕಿಸ್ತಾನದಲ್ಲಿ ಅಲ್ಲೋಲಕಲ್...
10-03-26 01:31 pm
ಇರಾನ್ ನೂತನ ಸರ್ವೋಚ್ಚ ನಾಯಕನಾಗಿ ಆಯತುಲ್ಲಾ ಮೊಜ್ತಬ...
09-03-26 01:44 pm
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
11-03-26 11:54 am
HK News Staffer
ಬಂಟ್ವಾಳದ ಬಸ್ಸಿನಲ್ಲಿದ್ದಾಗ ಬ್ಯಾಗಿನಿಂದ 180 ಗ್ರಾಂ...
10-03-26 05:00 pm
ಬಿಸಿಲಿಗೆ ತತ್ತರಿಸಿದ ಅಳಿಲಿನ ದಣಿವು ನೀಗಿಸಿದ ಟ್ರಾಫ...
09-03-26 09:52 pm
ಗಲ್ಫ್ ಯುದ್ಧ ; ಮಂಗಳೂರಿನಿಂದ ದುಬೈ, ಜೆದ್ದಾ ಸೇರಿ ಹ...
09-03-26 07:29 pm
ತಲಪಾಡಿಯ ಯುವಕ ಬೆಂಗಳೂರಿನಲ್ಲಿ ಕಟ್ಟಡದಿಂದ ಬಿದ್ದು ಸ...
09-03-26 02:53 pm
11-03-26 10:58 am
HK News Staffer
ಕೇರಳ ಚುನಾವಣೆ ಹಿನ್ನೆಲೆ ; ರೈಲಿನಲ್ಲಿ ತಪಾಸಣೆ ಬಿಗಿ...
10-03-26 08:32 pm
ಉಪ್ಪಿನಂಗಡಿ ; ಖಾಸಗಿ ವ್ಯಕ್ತಿ ಮನೆಯಲ್ಲಿ ಅಕ್ರಮ ಶೇಖ...
10-03-26 07:01 pm
ಬಾಗಲಕೋಟೆಯಲ್ಲಿ ಹೋಳಿ ಆಚರಣೆ ವೇಳೆ ಕಿರಿಕ್ ; 19 ವರ...
10-03-26 01:49 pm
Vexon fraud Company, FIR: ಬ್ಲೇಡ್ ಕಂಪನಿ ವೆಕ್ಸನ...
28-02-26 11:12 am