ಬ್ರೇಕಿಂಗ್ ನ್ಯೂಸ್
17-10-22 10:22 pm Bangalore Correspondent ಕರ್ನಾಟಕ
ಬೆಂಗಳೂರು, ಅ.17: ಬೆಂಗಳೂರು ನಗರ ಪೊಲೀಸ್ ಆಡಳಿತ ವಿಭಾಗದಲ್ಲಿ ಡಿಸಿಪಿ ಆಗಿರುವ ನಿಶಾ ಜೇಮ್ಸ್ ಪರವಾಗಿ ಸಾಮಾಜಿಕ ಜಾಲತಾಣದಲ್ಲಿ ಅಭಿಯಾನ ನಡೆದಿದೆ. 'ವಿ ಸಪೋರ್ಟ್ ಯೂ' ಎಂದು ಜನರು ಬೆಂಬಲಕ್ಕೆ ನಿಂತಿದ್ದಾರೆ. ಪೊಲೀಸ್ ಆಯುಕ್ತರ ಕಚೇರಿಯ ಸಿಬಂದಿ ಆಡಳಿತ ವಿಭಾಗದ ಎಡಿಜಿಪಿಗೆ ನಿಶಾ ಜೇಮ್ಸ್ ವಿರುದ್ಧವೇ ದೂರು ನೀಡಿದ್ದಾರೆ ಎನ್ನುವ ಸುದ್ದಿ ಬೆನ್ನಲ್ಲೇ ಕೆಲವರು ನಿಶಾ ಪರವಾಗಿ ನಿಂತಿದ್ದಾರೆ.
ಕೆಲವರ ಪ್ರಕಾರ, ನಿಶಾ ಜೇಮ್ಸ್ ಬೆಂಗಳೂರು ಆಡಳಿತ ವಿಭಾಗದಲ್ಲಿ ಡಿಸಿಪಿಯಾಗಿದ್ದು ಎರಡು ವರ್ಷದಲ್ಲಿ ನಗರ ಪೊಲೀಸ್ ವ್ಯವಸ್ಥೆ ಸರಿಪಡಿಸುವ ನಿಟ್ಟಿನಲ್ಲಿ ಕೆಲಸ ಮಾಡಿದ್ದಾರೆ. ವರ್ಗಾವಣೆಯಲ್ಲಿ ಪಾರದರ್ಶಕ ನಿಲುವು ಹೊಂದಿದ್ದ ನಿಶಾ ಜೇಮ್ಸ್ ಐದು ವರ್ಷ ಒಂದೇ ಠಾಣೆಯಲ್ಲಿ ಠಿಕಾಣಿ ಹೂಡಿದ್ದ ಪೊಲೀಸರ ಬುಡ ಅಲ್ಲಾಡಿಸಿದ್ದರು. ಜೊತೆಗೆ ಗನ್ ಲೈಸೆನ್ಸ್ ಪರವಾನಗಿ ಹಾಗೂ ನವಿಕರಣದಲ್ಲಿದ್ದ ಲಂಚಗುಳಿತನಕ್ಕೆ ಬ್ರೇಕ್ ಹಾಕಿದ್ದರು. ಇದಕ್ಕಾಗಿ ನಿಶಾ ಜೇಮ್ಸ್ ವಿರುದ್ಧ ಕೆಲವು ವಿಕೃತ ಮನಸ್ಥಿತಿಯ ಎಸ್ ಡಿಎ ಹಾಗೂ ಎಫ್ಡಿಎ ಸಿಬ್ಬಂದಿ ಷಡ್ಯಂತ್ರ ನಡೆಸಿದ್ದಾರೆ ಎಂದು ಜಾಲತಾಣದಲ್ಲಿ ಬರೆದಿದ್ದಾರೆ.

ಡಿಸಿಪಿ ಆಡಳಿತ ವಿಭಾಗದಿಂದ ನಿಶಾ ಜೇಮ್ಸ್ ಅವರನ್ನು ಎತ್ತಂಗಡಿ ಮಾಡಿಸಲು ಇಲ್ಲಸಲ್ಲದ ಆರೋಪ ಮಾಡಲಾಗುತ್ತಿದೆ. ನಿಶಾ ಜೇಮ್ಸ್ ಒಬ್ಬ ಮಹಿಳಾ ಅಧಿಕಾರಿ ಅನ್ನುವುದನ್ನೂ ನೋಡದೆ ಚಾರಿತ್ರ್ಯ ಹರಣವನ್ನೂ ಮಾಡುತ್ತಿದ್ದಾರೆ. ನಿಶಾ ಜೇಮ್ಸ್ ಗೆ ಮತ್ತೊಬ್ಬ ಐಪಿಎಸ್ ಅಧಿಕಾರಿ ಜೊತೆ ಸಂಬಂಧ ಕಟ್ಟಿ ಕೆಟ್ಟದಾಗಿ ಬರೆದು ಹಿರಿಯ ಅಧಿಕಾರಿಗಳಿಗೆ ದೂರು ನೀಡಿದ್ದಾರೆ ಎನ್ನಲಾದ ದೂರಿನ ಪ್ರತಿಯನ್ನೂ ಜಾಲತಾಣದಲ್ಲಿ ಹಂಚಿಕೊಳ್ಳಲಾಗಿದೆ.
ಜೊತೆಗೆ ನಿಶಾ ಜೇಮ್ಸ್ ಪತಿಯ ಹೆಸರನ್ನ ಉಲ್ಲೇಖಿಸಿ ಸಂಸಾರದಲ್ಲಿ ಹುಳಿ ಹಿಂಡುವ ಕೆಲಸವನ್ನೂ ಕೆಲವರು ಮಾಡುತ್ತಿದ್ದಾರಂತೆ. ಹೀಗಾಗಿ ಪೊಲೀಸ್ ಇಲಾಖೆಯ ಒಳಗಿದ್ದವರೂ ಸೇರಿ ಸಾಮಾಜಿಕ ಜಾಲತಾಣದಲ್ಲಿ ನಿಶಾ ಜೇಮ್ಸ್ ಫೋಟೋ ಹಾಕಿ we support you madam ಎಂದು ಅಭಿಯಾನ ಶುರು ಮಾಡಿದ್ದಾರೆ.
We support IPS Nisha James campaign starts on social media after she was falsely alleged of giving mental torture to police staffs after a complaint was filed at the commissioners office in Bengaluru.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm