ಬ್ರೇಕಿಂಗ್ ನ್ಯೂಸ್
18-10-22 07:05 pm HK News Desk ಕರ್ನಾಟಕ
ಬೀದರ್, ಅ.18 : ಸರ್ಕಾರಿ ನೌಕರಿಗೆ ಕರ್ನಾಟಕದಲ್ಲಿ ಕಾಸು ಕೊಡಲೇಬೇಕು ಎಂಬ ರಾಹುಲ್ ಗಾಂಧಿ ಟೀಕೆಗೆ ಸಿಎಂ ಬಸವರಾಜ ಬೊಮ್ಮಾಯಿ ಕಿಡಿಕಾರಿದ್ದಾರೆ. ಸಿದ್ಧರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಆಗಿರುವ ಹಗರಣ ಮತ್ತು ಅವ್ಯವಹಾರ ಸಂಬಂಧ ಎಲ್ಲ ಮಾಹಿತಿ, ದಾಖಲೆಗಳನ್ನು ರಾಹುಲ್ ಗಾಂಧಿಯವರಿಗೆ ಮುಟ್ಟಿಸುತ್ತೇನೆ. ಅವರು ಏನು ಶಿಕ್ಷೆ ಕೊಡುತ್ತಾರೆ ಕಾದು ನೋಡೋಣ ಎಂದು ಸವಾಲು ಹಾಕಿದ್ದಾರೆ.
ಔರಾದ್ ಪಟ್ಟಣದಲ್ಲಿ ಮಂಗಳವಾರ 'ಜನಸಂಕಲ್ಪ ಯಾತ್ರೆ'ಗೆ ಚಾಲನೆ ನೀಡಿ ಮಾತನಾಡಿದ ಅವರು, 2016ರ ಶಿಕ್ಷಕರ ನೇಮಕಾತಿ ಹಗರಣ, ಪ್ರಾಸಿಕ್ಯೂಟರ್ ಮತ್ತು ಪೊಲೀಸ್ ನೇಮಕಾತಿಯಲ್ಲಿನ ಹಗರಣ ಸೇರಿ ಎಲ್ಲ ದಾಖಲೆಗಳನ್ನು ರಾಹುಲ್ ಗಾಂಧಿಗೆ ತಲುಪಿಸಲಿದ್ದೇನೆ. ಅರ್ಜಿ ಹಾಕದೇ ಶಿಕ್ಷಕರ ನೇಮಕಾತಿ ನಡೆದಿದ್ದು, ಇದರಲ್ಲಿ ಎಷ್ಟು ಪರ್ಸಂಟೇಜ್ ಹೊಡೆದಿರಬಹುದು? ಇದು ಕಾಂಗ್ರೆಸ್ ಸರ್ಕಾರದ ಆಡಳಿತ. ಆದರೆ, ನಾವು ಪಿಎಸ್ಐ ನೇಮಕಾತಿ ಹಗರಣದಲ್ಲಿ ಉನ್ನತ ಅಧಿಕಾರಿಗಳು ಸೇರಿ ತಪ್ಪು ಮಾಡಿದ್ದವರನ್ನು ಯಾರಿಗೂ ಬಿಡಲಿಲ್ಲ ಎಂದರು.
ಪರಿಶಿಷ್ಟ ಜಾತಿ ಮತ್ತು ಪಂಗಡದ ಮೀಸಲಾತಿ ಹೆಚ್ಚಳ ಕಾಂಗ್ರೆಸ್ ಪಕ್ಷದ ಕೊಡುಗೆ ಎಂದು ಹೇಳಲು ರಾಹುಲ್ ಗಾಂಧಿಗೆ ಆತ್ಮಸಾಕ್ಷಿ ಬೇಕಲ್ಲವೇ ಎಂದು ಪ್ರಶ್ನಿಸಿದ ಸಿಎಂ ಬೊಮ್ಮಾಯಿ, ಮೀಸಲು ಹೆಚ್ಚಿಸಿ ಹಿಂದುಳಿದ ವರ್ಗಗಳಿಗೆ ಅನ್ಯಾಯ ಮಾಡಿದ್ದಾಗ ರಾಜ್ಯದಲ್ಲಿ ಯಾರ ಸರ್ಕಾರ ಇತ್ತು, ನಿರ್ಣಯ ತೆಗೆದುಕೊಂಡವರು ಯಾರು ಎನ್ನುವುದನ್ನೂ ರಾಹುಲ್ ಅರಿಯಬೇಕು. ದಶಕಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ದೀನ ದಲಿತರಿಗೆ ಶೂನ್ಯ ಕೊಡುಗೆ ನೀಡಿದೆ ಎಂದು ಹೇಳಿದರು.
ಸಮಾವೇಶದಲ್ಲಿ ಕೇಂದ್ರ ಸಚಿವ ಭಗವಂತ ಖೂಬಾ, ರಾಜ್ಯದ ಸಚಿವರಾದ ಗೋವಿಂದ ಕಾರಜೋಳ, ಪ್ರಭು ಚವ್ಹಾಣ, ಬಿ. ಶ್ರೀರಾಮಲು, ಭೈರತಿ ಬಸವರಾಜ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್. ರವಿಕುಮಾರ್ ಸೇರಿದಂತೆ ಶಾಸಕರು, ಪ್ರಮುಖರು ಪಾಲ್ಗೊಂಡಿದ್ದರು.
CM Bommai at Bidar meeting, slams rahul and Siddaramaiah.
16-09-25 11:00 pm
Bangalore Correspondent
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
16-09-25 07:48 pm
Mangalore Correspondent
Ex IPS Kempaiah, Professor Umeshchandra, Mang...
16-09-25 07:02 pm
Mangalore BJP Protest, UT khader, Red Stone:...
16-09-25 06:51 pm
UT Khader, Mangalore, Ullal: ಉಳ್ಳಾಲ ಕ್ಷೇತ್ರದಲ...
16-09-25 06:06 pm
ಕೆಂಪು ಕಲ್ಲು ನಿಯಮ ಸರಳೀಕರಣಕ್ಕೆ ಸಂಪುಟದಲ್ಲಿ ಒಪ್ಪಿ...
16-09-25 05:12 pm
17-09-25 12:25 pm
Bangalore Correspondent
Vijayapura Bank Robbery: ಮಹಾರಾಷ್ಟ್ರ ಗಡಿಭಾಗದ ವ...
16-09-25 10:40 pm
Bidar crime: ಏಳು ವರ್ಷದ ಬಾಲಕಿಯನ್ನ ಮೂರನೇ ಮಹಡಿಯಿ...
16-09-25 07:12 pm
Bangalore Police, Inspector Suspend, Crime, D...
15-09-25 10:47 pm
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm