ಬ್ರೇಕಿಂಗ್ ನ್ಯೂಸ್
18-10-22 07:05 pm HK News Desk ಕರ್ನಾಟಕ
ಬೀದರ್, ಅ.18 : ಸರ್ಕಾರಿ ನೌಕರಿಗೆ ಕರ್ನಾಟಕದಲ್ಲಿ ಕಾಸು ಕೊಡಲೇಬೇಕು ಎಂಬ ರಾಹುಲ್ ಗಾಂಧಿ ಟೀಕೆಗೆ ಸಿಎಂ ಬಸವರಾಜ ಬೊಮ್ಮಾಯಿ ಕಿಡಿಕಾರಿದ್ದಾರೆ. ಸಿದ್ಧರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಆಗಿರುವ ಹಗರಣ ಮತ್ತು ಅವ್ಯವಹಾರ ಸಂಬಂಧ ಎಲ್ಲ ಮಾಹಿತಿ, ದಾಖಲೆಗಳನ್ನು ರಾಹುಲ್ ಗಾಂಧಿಯವರಿಗೆ ಮುಟ್ಟಿಸುತ್ತೇನೆ. ಅವರು ಏನು ಶಿಕ್ಷೆ ಕೊಡುತ್ತಾರೆ ಕಾದು ನೋಡೋಣ ಎಂದು ಸವಾಲು ಹಾಕಿದ್ದಾರೆ.
ಔರಾದ್ ಪಟ್ಟಣದಲ್ಲಿ ಮಂಗಳವಾರ 'ಜನಸಂಕಲ್ಪ ಯಾತ್ರೆ'ಗೆ ಚಾಲನೆ ನೀಡಿ ಮಾತನಾಡಿದ ಅವರು, 2016ರ ಶಿಕ್ಷಕರ ನೇಮಕಾತಿ ಹಗರಣ, ಪ್ರಾಸಿಕ್ಯೂಟರ್ ಮತ್ತು ಪೊಲೀಸ್ ನೇಮಕಾತಿಯಲ್ಲಿನ ಹಗರಣ ಸೇರಿ ಎಲ್ಲ ದಾಖಲೆಗಳನ್ನು ರಾಹುಲ್ ಗಾಂಧಿಗೆ ತಲುಪಿಸಲಿದ್ದೇನೆ. ಅರ್ಜಿ ಹಾಕದೇ ಶಿಕ್ಷಕರ ನೇಮಕಾತಿ ನಡೆದಿದ್ದು, ಇದರಲ್ಲಿ ಎಷ್ಟು ಪರ್ಸಂಟೇಜ್ ಹೊಡೆದಿರಬಹುದು? ಇದು ಕಾಂಗ್ರೆಸ್ ಸರ್ಕಾರದ ಆಡಳಿತ. ಆದರೆ, ನಾವು ಪಿಎಸ್ಐ ನೇಮಕಾತಿ ಹಗರಣದಲ್ಲಿ ಉನ್ನತ ಅಧಿಕಾರಿಗಳು ಸೇರಿ ತಪ್ಪು ಮಾಡಿದ್ದವರನ್ನು ಯಾರಿಗೂ ಬಿಡಲಿಲ್ಲ ಎಂದರು.

ಪರಿಶಿಷ್ಟ ಜಾತಿ ಮತ್ತು ಪಂಗಡದ ಮೀಸಲಾತಿ ಹೆಚ್ಚಳ ಕಾಂಗ್ರೆಸ್ ಪಕ್ಷದ ಕೊಡುಗೆ ಎಂದು ಹೇಳಲು ರಾಹುಲ್ ಗಾಂಧಿಗೆ ಆತ್ಮಸಾಕ್ಷಿ ಬೇಕಲ್ಲವೇ ಎಂದು ಪ್ರಶ್ನಿಸಿದ ಸಿಎಂ ಬೊಮ್ಮಾಯಿ, ಮೀಸಲು ಹೆಚ್ಚಿಸಿ ಹಿಂದುಳಿದ ವರ್ಗಗಳಿಗೆ ಅನ್ಯಾಯ ಮಾಡಿದ್ದಾಗ ರಾಜ್ಯದಲ್ಲಿ ಯಾರ ಸರ್ಕಾರ ಇತ್ತು, ನಿರ್ಣಯ ತೆಗೆದುಕೊಂಡವರು ಯಾರು ಎನ್ನುವುದನ್ನೂ ರಾಹುಲ್ ಅರಿಯಬೇಕು. ದಶಕಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ದೀನ ದಲಿತರಿಗೆ ಶೂನ್ಯ ಕೊಡುಗೆ ನೀಡಿದೆ ಎಂದು ಹೇಳಿದರು.
ಸಮಾವೇಶದಲ್ಲಿ ಕೇಂದ್ರ ಸಚಿವ ಭಗವಂತ ಖೂಬಾ, ರಾಜ್ಯದ ಸಚಿವರಾದ ಗೋವಿಂದ ಕಾರಜೋಳ, ಪ್ರಭು ಚವ್ಹಾಣ, ಬಿ. ಶ್ರೀರಾಮಲು, ಭೈರತಿ ಬಸವರಾಜ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್. ರವಿಕುಮಾರ್ ಸೇರಿದಂತೆ ಶಾಸಕರು, ಪ್ರಮುಖರು ಪಾಲ್ಗೊಂಡಿದ್ದರು.
CM Bommai at Bidar meeting, slams rahul and Siddaramaiah.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm