ಬ್ರೇಕಿಂಗ್ ನ್ಯೂಸ್
18-10-22 07:05 pm HK News Desk ಕರ್ನಾಟಕ
ಬೀದರ್, ಅ.18 : ಸರ್ಕಾರಿ ನೌಕರಿಗೆ ಕರ್ನಾಟಕದಲ್ಲಿ ಕಾಸು ಕೊಡಲೇಬೇಕು ಎಂಬ ರಾಹುಲ್ ಗಾಂಧಿ ಟೀಕೆಗೆ ಸಿಎಂ ಬಸವರಾಜ ಬೊಮ್ಮಾಯಿ ಕಿಡಿಕಾರಿದ್ದಾರೆ. ಸಿದ್ಧರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಆಗಿರುವ ಹಗರಣ ಮತ್ತು ಅವ್ಯವಹಾರ ಸಂಬಂಧ ಎಲ್ಲ ಮಾಹಿತಿ, ದಾಖಲೆಗಳನ್ನು ರಾಹುಲ್ ಗಾಂಧಿಯವರಿಗೆ ಮುಟ್ಟಿಸುತ್ತೇನೆ. ಅವರು ಏನು ಶಿಕ್ಷೆ ಕೊಡುತ್ತಾರೆ ಕಾದು ನೋಡೋಣ ಎಂದು ಸವಾಲು ಹಾಕಿದ್ದಾರೆ.
ಔರಾದ್ ಪಟ್ಟಣದಲ್ಲಿ ಮಂಗಳವಾರ 'ಜನಸಂಕಲ್ಪ ಯಾತ್ರೆ'ಗೆ ಚಾಲನೆ ನೀಡಿ ಮಾತನಾಡಿದ ಅವರು, 2016ರ ಶಿಕ್ಷಕರ ನೇಮಕಾತಿ ಹಗರಣ, ಪ್ರಾಸಿಕ್ಯೂಟರ್ ಮತ್ತು ಪೊಲೀಸ್ ನೇಮಕಾತಿಯಲ್ಲಿನ ಹಗರಣ ಸೇರಿ ಎಲ್ಲ ದಾಖಲೆಗಳನ್ನು ರಾಹುಲ್ ಗಾಂಧಿಗೆ ತಲುಪಿಸಲಿದ್ದೇನೆ. ಅರ್ಜಿ ಹಾಕದೇ ಶಿಕ್ಷಕರ ನೇಮಕಾತಿ ನಡೆದಿದ್ದು, ಇದರಲ್ಲಿ ಎಷ್ಟು ಪರ್ಸಂಟೇಜ್ ಹೊಡೆದಿರಬಹುದು? ಇದು ಕಾಂಗ್ರೆಸ್ ಸರ್ಕಾರದ ಆಡಳಿತ. ಆದರೆ, ನಾವು ಪಿಎಸ್ಐ ನೇಮಕಾತಿ ಹಗರಣದಲ್ಲಿ ಉನ್ನತ ಅಧಿಕಾರಿಗಳು ಸೇರಿ ತಪ್ಪು ಮಾಡಿದ್ದವರನ್ನು ಯಾರಿಗೂ ಬಿಡಲಿಲ್ಲ ಎಂದರು.

ಪರಿಶಿಷ್ಟ ಜಾತಿ ಮತ್ತು ಪಂಗಡದ ಮೀಸಲಾತಿ ಹೆಚ್ಚಳ ಕಾಂಗ್ರೆಸ್ ಪಕ್ಷದ ಕೊಡುಗೆ ಎಂದು ಹೇಳಲು ರಾಹುಲ್ ಗಾಂಧಿಗೆ ಆತ್ಮಸಾಕ್ಷಿ ಬೇಕಲ್ಲವೇ ಎಂದು ಪ್ರಶ್ನಿಸಿದ ಸಿಎಂ ಬೊಮ್ಮಾಯಿ, ಮೀಸಲು ಹೆಚ್ಚಿಸಿ ಹಿಂದುಳಿದ ವರ್ಗಗಳಿಗೆ ಅನ್ಯಾಯ ಮಾಡಿದ್ದಾಗ ರಾಜ್ಯದಲ್ಲಿ ಯಾರ ಸರ್ಕಾರ ಇತ್ತು, ನಿರ್ಣಯ ತೆಗೆದುಕೊಂಡವರು ಯಾರು ಎನ್ನುವುದನ್ನೂ ರಾಹುಲ್ ಅರಿಯಬೇಕು. ದಶಕಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ದೀನ ದಲಿತರಿಗೆ ಶೂನ್ಯ ಕೊಡುಗೆ ನೀಡಿದೆ ಎಂದು ಹೇಳಿದರು.
ಸಮಾವೇಶದಲ್ಲಿ ಕೇಂದ್ರ ಸಚಿವ ಭಗವಂತ ಖೂಬಾ, ರಾಜ್ಯದ ಸಚಿವರಾದ ಗೋವಿಂದ ಕಾರಜೋಳ, ಪ್ರಭು ಚವ್ಹಾಣ, ಬಿ. ಶ್ರೀರಾಮಲು, ಭೈರತಿ ಬಸವರಾಜ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್. ರವಿಕುಮಾರ್ ಸೇರಿದಂತೆ ಶಾಸಕರು, ಪ್ರಮುಖರು ಪಾಲ್ಗೊಂಡಿದ್ದರು.
CM Bommai at Bidar meeting, slams rahul and Siddaramaiah.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm