ಬ್ರೇಕಿಂಗ್ ನ್ಯೂಸ್
19-10-22 11:34 am HK News Desk ಕರ್ನಾಟಕ
ಚಿಕ್ಕಮಗಳೂರು, ಅ.19: ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನಲ್ಲಿ ಜಾನುವಾರುಗಳಿಗೆ ಚರ್ಮಗಂಟು ರೋಗ ವ್ಯಾಪಕವಾಗಿ ಹರಡುತ್ತಿರುವುದು ಪತ್ತೆಯಾಗಿದೆ. ತಾಲೂಕಿನ ಹಲವು ಗ್ರಾಮಗಳಲ್ಲಿ 900ಕ್ಕೂ ಹೆಚ್ಚು ಪ್ರಕರಣ ಪತ್ತೆಯಾಗಿರುವ ಬಗ್ಗೆ ಅಧಿಕಾರಿಗಳು ದೃಢಪಡಿಸಿದ್ದು ಆತಂಕ ಮೂಡಿಸಿದೆ.
ಮೂಡಿಗೆರೆ, ಕಡೂರು, ಬೇಲೂರು ವ್ಯಾಪ್ತಿಯಲ್ಲಿ ದೊಡ್ಡ ಪ್ರಮಾಣದಲ್ಲಿ ರೈತರು ಹೈನುಗಾರಿಕೆಯನ್ನು ಅವಲಂಬಿಸಿದ್ದಾರೆ. ರೋಗದಿಂದಾಗಿ ಹಾಲು ಉತ್ಪಾದನೆಯ ಮೇಲೆ ಪರಿಣಾಮ ಎದುರಾಗಲಿದೆ. ಕಳೆದ ಜುಲೈ ತಿಂಗಳಲ್ಲಿಯೇ ದೇವನೂರು, ಬಿಸಿಲೇಹಳ್ಳಿ ಭಾಗದ ಕೆಲವೆಡೆ ರೋಗ ಕಾಣಿಸಿಕೊಂಡಿತ್ತು. ನಿಧಾನವಾಗಿ ವ್ಯಾಪಿಸಿದ ರೋಗ, ತಾಲ್ಲೂಕಿನಲ್ಲಿ 900ಕ್ಕೂ ಹೆಚ್ಚು ರಾಸುಗಳಿಗೆ ಹಬ್ಬಿದೆ. ಆದರೆ ಈವರೆಗೂ ತಾಲೂಕು ವ್ಯಾಪ್ತಿಯಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳು ಮುಂಜಾಗ್ರತೆ ಕ್ರಮ ಕೈಗೊಂಡಿಲ್ಲ.
ಪ್ರಕರಣ ಹೆಚ್ಚುತ್ತಿದ್ದರೂ ರಾಜ್ಯ ಸರಕಾರದಿಂದ ಸೂಕ್ತ ಲಸಿಕೆ ಸರಬರಾಜಾಗಿಲ್ಲ. ಹೀಗಾಗಿ ಮೊದಲ ಹಂತದಲ್ಲಿ ತಾಲ್ಲೂಕು ಆಡಳಿತದಿಂದಲೇ 10,300 ಡೋಸ್ ಲಸಿಕೆಯನ್ನು ಖರೀದಿಸಲಾಗಿದೆ. ರೋಗ ಕಾಣಿಸಿಕೊಂಡ ಸ್ಥಳದಿಂದ ಸುತ್ತ ಮುತ್ತ ನಾಲ್ಕು ಕಿ.ಮೀ. ವ್ಯಾಪ್ತಿಯಲ್ಲಿ ಆರೋಗ್ಯವಂತ ಹಸುಗಳಿಗೂ ಲಸಿಕೆ ನೀಡಲು ಕ್ರಮ ಕೈಗೊಳ್ಳಲಾಗಿದೆ. ರೋಗ ಪೀಡಿತ ದನಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಕಡೂರು ತಾಲೂಕು ವ್ಯಾಪ್ತಿಯ 32 ಹಳ್ಳಿಗಳಲ್ಲಿ 982 ಪ್ರಕರಣ ಪತ್ತೆಯಾಗಿದೆ. ಸದ್ಯ ರೋಗ ಪೀಡಿತ ರಾಸುಗಳು ಚಿಕಿತ್ಸೆಗೆ ಸ್ಪಂದಿಸುತ್ತಿವೆ ಎನ್ನುವ ಮಾಹಿತಿಯನ್ನು ಅಧಿಕಾರಿಗಳು ನೀಡಿದ್ದಾರೆ.
ರೋಗದಿಂದಾಗಿ ಎರಡು ಹಸುಗಳು ಮರಣ ಹೊಂದಿವೆ. ಎರಡನೇ ಹಂತದಲ್ಲಿ 20 ಸಾವಿರ ಡೋಸ್ ಲಸಿಕೆ ತರಿಸಲು ಸಿದ್ಧತೆ ನಡೆಸಲಾಗಿದೆ. ರೋಗ ಪೀಡಿತ ಹಸುಗಳ ಹಾಲು ಕುಡಿಯುವುದರಿಂದ ರೋಗ ಮಾನವನಿಗೆ ಹರಡುವುದಿಲ್ಲ. ರೋಗದ ಕಾರಣಕ್ಕೆ ಜನರು ಆತಂಕ ಪಡಬೇಕಾಗಿಲ್ಲ ಎಂದು ಪಶು ವೈದ್ಯಾಧಿಕಾರಿಗಳು ತಿಳಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕೆಲವೆಡೆ ರೋಗ ಕಾಣಿಸಿಕೊಂಡಿರುವ ಮಾಹಿತಿಯಿದ್ದು ಜಿಲ್ಲಾಡಳಿತ 20 ಸಾವಿರ ಡೋಸ್ ಲಸಿಕೆ ತರಿಸಿಕೊಂಡಿದೆ. ಈಗಾಗಲೇ ಲಸಿಕೆ ನೀಡಲಾಗುತ್ತಿದೆ ಎನ್ನುವ ಮಾಹಿತಿಯನ್ನು ಮಂಗಳೂರಿನ ಪಶು ಇಲಾಖೆ ಅಧಿಕಾರಿಗಳು ನೀಡಿದ್ದಾರೆ.
Lumpy skin disease in cattle found in Chikkamagaluru, more than 900 cases found.
01-01-26 06:21 pm
Bangalore Correspondent
ಜನವರಿ 15ರ ನಂತರ ಸಂಪುಟ ವಿಸ್ತರಣೆ ಆಗಲಿದೆ, ನನಗೂ ಮಂ...
01-01-26 05:18 pm
ಬೆಂಗಳೂರಿನಿಂದ ಕನ್ಯಾಕುಮಾರಿಗೆ ಸೈಕಲ್ ಸವಾರಿ ; 70ರ...
01-01-26 03:05 pm
ಕೋಗಿಲು ಬಡಾವಣೆ ವಿವಾದ ; ಬಿಜೆಪಿಯಿಂದ ಸತ್ಯಶೋಧನಾ ಸಮ...
31-12-25 10:57 pm
ಕೋಗಿಲು ಬಡಾವಣೆ ವಿವಾದ ನಡುವೆಯೇ ಕೇರಳ ಸಿಎಂ ಪಿಣರಾಯಿ...
31-12-25 02:35 pm
01-01-26 09:34 pm
HK News Desk
ಸ್ವಿಟ್ಜರ್ಲ್ಯಾಂಡ್ ನಲ್ಲಿ ಶೋಕವಾಗಿ ಮಾರ್ಪಟ್ಟ ಹೊಸ...
01-01-26 09:30 pm
ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದು ಯುವಕನ ಹತ್ಯೆ ;...
30-12-25 06:48 pm
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
01-01-26 09:43 am
Mangalore Correspondent
ಧರ್ಮಸ್ಥಳ ಪ್ರಕರಣದಲ್ಲಿ ಕ್ಷೇತ್ರದ ಪರ ಬೆಳ್ತಂಗಡಿ ಕೋ...
31-12-25 10:57 pm
ಕೋಗಿಲು ಬಡಾವಣೆಯ ಅಕ್ರಮ ವಲಸಿಗರು ಎಲ್ಲಿಯವರು? ಇಲ್ಲಿ...
31-12-25 09:16 pm
ಕೋಟೆಕಾರು ಪ.ಪಂ ಸಭೆ ; ಸರ್ಕಾರಿ ಜಮೀನು ಅತಿಕ್ರಮಣ ಪರ...
31-12-25 03:35 pm
ಶೀಘ್ರದಲ್ಲೇ ಸ್ಕ್ಯಾನ್ ಜೆಟ್ ವಿಮಾನ ಸೇವೆ ; ವಿಜಯ್ ಮ...
31-12-25 11:47 am
01-01-26 08:25 pm
Mangalore Correspondent
ಕಾರು ಬಾಡಿಗೆ ನೆಪದಲ್ಲಿ ಸುಳ್ಯದಿಂದ ಯುವಕನ ಕರೆದೊಯ್ದ...
31-12-25 07:05 pm
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm
ಪುತ್ತೂರಿನ ನಿವೃತ್ತ ಪ್ರಾಂಶುಪಾಲರ ಮನೆಗೆ ನುಗ್ಗಿ ಕಳ...
31-12-25 05:48 pm
ಸ್ಟಾಕ್ ಮಾರ್ಕೆಟ್ ಹೆಸ್ರಲ್ಲಿ ವಂಚಕರಿಂದ ಪಂಗನಾಮ ; 5...
30-12-25 10:40 pm