ಬ್ರೇಕಿಂಗ್ ನ್ಯೂಸ್
19-10-22 08:34 pm HK News Desk ಕರ್ನಾಟಕ
ಮೈಸೂರು, ಅ.19 : ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರದ ಬಗ್ಗೆ ರಾಹುಲ್ ಗಾಂಧಿಗೆ ದಾಖಲೆ ಕಳಿಸಿಕೊಡುತ್ತೇನೆಂಬ ಸಿಎಂ ಬೊಮ್ಮಾಯಿ ಹೇಳಿಕೆಗೆ ಮಾಜಿ ಸಿಎಂ ಎಚ್ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ. ನಿಮಗೆ ಧಮ್ ಇದ್ದರೆ ಕಾಂಗ್ರೆಸ್ ಸರಕಾರದ ಅವಧಿಯಲ್ಲಿ ನಡೆದಿರುವ ಭ್ರಷ್ಟಾಚಾರದ ಬಗ್ಗೆ ತನಿಖೆ ಮಾಡಿ, ಶಿಕ್ಷೆ ಕೊಡಿಸಿ. ಭ್ರಷ್ಟಾಚಾರದ ಬಗ್ಗೆ ರಾಹುಲ್ ಗಾಂಧಿಗೆ ಏಕೆ ಕಳುಹಿಸುತ್ತೀರಾ ಎಂದು ಪ್ರಶ್ನೆ ಮಾಡಿದ್ದಾರೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೀದರಿನಲ್ಲಿ ಜನಸಂಕಲ್ಪ ಯಾತ್ರೆ ಸಮಾವೇಶದಲ್ಲಿ ಕಾಂಗ್ರೆಸ್ ಸರ್ಕಾರದ ಹಗರಣದ ಬಗ್ಗೆ ರಾಹುಲ್ ಗಾಂಧಿಗೆ ದಾಖಲೆ ಕಳಿಸಿಕೊಡುತ್ತೇನೆ ಎಂದಿದ್ದರು. ಮೈಸೂರಿನಲ್ಲಿ ಸುದ್ದಿಗೋಷ್ಟಿ ನಡೆಸಿದ ಕುಮಾರಸ್ವಾಮಿ, ಜೆಡಿಎಸ್ ಪಕ್ಷ ಯಾವುದೇ ಪಕ್ಷದ ಜೊತೆ ಮೈತ್ರಿ ಮಾಡಿಕೊಳ್ಳುವುದಿಲ್ಲ. ಜೆಡಿಎಸ್ ಮಿಷನ್ 123 ಗುರಿ ದಾಟಿ, ಅಧಿಕಾರ ಹಿಡಿಯಲಿದೆ. ಕಾಂಗ್ರೆಸ್ ನವರು 150 ಸ್ಥಾನ ಗೆಲ್ಲುತ್ತೇವೆ ಎನ್ನುತ್ತಾರೆ. ಅವರಿಗೆ ಎಲ್ಲಿ ಅಭ್ಯರ್ಥಿಗಳು ಇದ್ದಾರೆ. ಇನ್ನೂ ಕೂಡ ಸಿದ್ದರಾಮಯ್ಯ ಅವರಿಗೆ ಕ್ಷೇತ್ರ ಸಿಕ್ಕಿಲ್ಲ ಎಂದು ಟೀಕಿಸಿದರು.
ನಮ್ಮ ಪಂಚರತ್ನ ಕಾರ್ಯಕ್ರಮಕ್ಕೆ ಸಿಗುತ್ತಿರುವ ಉತ್ತಮ ಬೆಂಬಲ ನೋಡಿ ಹಲವರು ನಮ್ಮ ಪಕ್ಷದ ಬಾಗಿಲು ತಟ್ಟುತ್ತಿದ್ದಾರೆ. ನವೆಂಬರ್ 1ರ ಪಂಚರತ್ನ ಯಾತ್ರೆ ವೇಳೆ 126 ಸಂಭವನೀಯ ಅಭ್ಯರ್ಥಿ ಪಟ್ಟಿ ಬಿಡುಗಡೆ ಮಾಡಲಾಗುವುದು.ಶಾಸಕ ಜಿ.ಟಿ.ದೇವೇಗೌಡರು ನನ್ನ ಅನುಮತಿ ಪಡೆದು ಇಲ್ಲಿ ಗೈರು ಹಾಜರಾಗಿದ್ದಾರೆ. ಮೈಸೂರು ಸೇರಿದಂತೆ ಇಡೀ ರಾಜ್ಯದಲ್ಲಿ ಯಾವುದೇ ಕ್ಷೇತ್ರದಲ್ಲೂ ಭಿನ್ನಾಭಿಪ್ರಾಯ ಇಲ್ಲ.
ತೆಲಂಗಾಣದಲ್ಲಿ ಪ್ರತಿ ದಲಿತ ಕುಟುಂಬಕ್ಕೆ 10 ಲಕ್ಷ ನೀಡಲಾಗುತ್ತಿದೆ. ದಲಿತರ ಕಲ್ಯಾಣ ಕಾರ್ಯಕ್ರಮ ರೂಪಿಸಲಾಗಿದೆ. ಅದೇ ರೀತಿ ಹಲವು ವಿಶೇಷ ಕಾರ್ಯಕ್ರಮಗಳನ್ನು ಜೆಡಿಎಸ್ ಕಡೆಯಿಂದ ರಾಜ್ಯದಲ್ಲಿಯೂ ರೂಪಿಸಲಾಗುವುದು ಎಂದು ಹೇಳಿದರು.
HD Kumaraswamy slams CM Bommai over sending corrpurtiom of congress leaders to Rahul Gandhi. He has asked CM to show the documents with proof and share it before the media.
14-08-25 03:51 pm
Bangalore Correspondent
DK Shivakumar, Dharmasthala, Virendra Heggade...
14-08-25 03:49 pm
IPS Alok Kumar, News: ಪೊಲೀಸ್ ಶಾಲೆಗಳಲ್ಲೇ ಲಂಚ,...
14-08-25 01:48 pm
Dharmasthala Case, Dinesh Gundu Rao: ಮತ್ತೆ ಗು...
13-08-25 07:03 pm
ವಜಾ ಹಿಂದೆ ದೊಡ್ಡ ಷಡ್ಯಂತ್ರ ಆಗಿದೆ, ರಾಹುಲ್ ಗಾಂಧಿ...
12-08-25 10:39 pm
14-08-25 11:26 am
HK News Desk
ತಾಯಿ ಜೊತೆ ಅಂಡಮಾನ್ ಹೋಗ್ತೀನಿ ಎಂದಿದ್ದ ಮಗಳು ; ಬೇಡ...
13-08-25 11:56 am
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
'ದೇಶ ಸುರಕ್ಷಿತ ಕೈಯಲ್ಲಿದೆ' ; ನರೇಂದ್ರ ಮೋದಿ ಸರ್ಕ...
12-08-25 02:49 pm
ಕಾಶ್ಮೀರಿ ಪಂಡಿತರ ಗುರಿಯಾಗಿಸಿ ಮಾರಣಹೋಮ ; 35 ವರ್ಷಗ...
12-08-25 11:42 am
14-08-25 01:12 pm
Mangaluru Staff
Bantwal Deputy Tahsildar, Lokayukta: 20 ಸಾವಿರ...
13-08-25 10:22 pm
Dharmasthala News Today, Point No 13: ಕಡೆಗೂ ಪ...
13-08-25 10:01 pm
The Ocean Pearl Brings “Flavors of India” to...
13-08-25 08:23 pm
ಹಠಾತ್ ಕುಸಿದು ಬಿದ್ದು ಕಾಲೇಜು ಬಸ್ ನಿರ್ವಾಹಕ ಸಾವು...
13-08-25 01:49 pm
14-08-25 05:31 pm
Bangalore Correspondent
Supreme Court, Actor Darshan Jail Order: ಸುಪ್...
14-08-25 11:51 am
Fake Stock Market Scam, Fraud: 10 ಲಕ್ಷ ಹೂಡಿಕೆ...
13-08-25 05:40 pm
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm