ಬ್ರೇಕಿಂಗ್ ನ್ಯೂಸ್
19-10-22 08:34 pm HK News Desk ಕರ್ನಾಟಕ
ಮೈಸೂರು, ಅ.19 : ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರದ ಬಗ್ಗೆ ರಾಹುಲ್ ಗಾಂಧಿಗೆ ದಾಖಲೆ ಕಳಿಸಿಕೊಡುತ್ತೇನೆಂಬ ಸಿಎಂ ಬೊಮ್ಮಾಯಿ ಹೇಳಿಕೆಗೆ ಮಾಜಿ ಸಿಎಂ ಎಚ್ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ. ನಿಮಗೆ ಧಮ್ ಇದ್ದರೆ ಕಾಂಗ್ರೆಸ್ ಸರಕಾರದ ಅವಧಿಯಲ್ಲಿ ನಡೆದಿರುವ ಭ್ರಷ್ಟಾಚಾರದ ಬಗ್ಗೆ ತನಿಖೆ ಮಾಡಿ, ಶಿಕ್ಷೆ ಕೊಡಿಸಿ. ಭ್ರಷ್ಟಾಚಾರದ ಬಗ್ಗೆ ರಾಹುಲ್ ಗಾಂಧಿಗೆ ಏಕೆ ಕಳುಹಿಸುತ್ತೀರಾ ಎಂದು ಪ್ರಶ್ನೆ ಮಾಡಿದ್ದಾರೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೀದರಿನಲ್ಲಿ ಜನಸಂಕಲ್ಪ ಯಾತ್ರೆ ಸಮಾವೇಶದಲ್ಲಿ ಕಾಂಗ್ರೆಸ್ ಸರ್ಕಾರದ ಹಗರಣದ ಬಗ್ಗೆ ರಾಹುಲ್ ಗಾಂಧಿಗೆ ದಾಖಲೆ ಕಳಿಸಿಕೊಡುತ್ತೇನೆ ಎಂದಿದ್ದರು. ಮೈಸೂರಿನಲ್ಲಿ ಸುದ್ದಿಗೋಷ್ಟಿ ನಡೆಸಿದ ಕುಮಾರಸ್ವಾಮಿ, ಜೆಡಿಎಸ್ ಪಕ್ಷ ಯಾವುದೇ ಪಕ್ಷದ ಜೊತೆ ಮೈತ್ರಿ ಮಾಡಿಕೊಳ್ಳುವುದಿಲ್ಲ. ಜೆಡಿಎಸ್ ಮಿಷನ್ 123 ಗುರಿ ದಾಟಿ, ಅಧಿಕಾರ ಹಿಡಿಯಲಿದೆ. ಕಾಂಗ್ರೆಸ್ ನವರು 150 ಸ್ಥಾನ ಗೆಲ್ಲುತ್ತೇವೆ ಎನ್ನುತ್ತಾರೆ. ಅವರಿಗೆ ಎಲ್ಲಿ ಅಭ್ಯರ್ಥಿಗಳು ಇದ್ದಾರೆ. ಇನ್ನೂ ಕೂಡ ಸಿದ್ದರಾಮಯ್ಯ ಅವರಿಗೆ ಕ್ಷೇತ್ರ ಸಿಕ್ಕಿಲ್ಲ ಎಂದು ಟೀಕಿಸಿದರು.

ನಮ್ಮ ಪಂಚರತ್ನ ಕಾರ್ಯಕ್ರಮಕ್ಕೆ ಸಿಗುತ್ತಿರುವ ಉತ್ತಮ ಬೆಂಬಲ ನೋಡಿ ಹಲವರು ನಮ್ಮ ಪಕ್ಷದ ಬಾಗಿಲು ತಟ್ಟುತ್ತಿದ್ದಾರೆ. ನವೆಂಬರ್ 1ರ ಪಂಚರತ್ನ ಯಾತ್ರೆ ವೇಳೆ 126 ಸಂಭವನೀಯ ಅಭ್ಯರ್ಥಿ ಪಟ್ಟಿ ಬಿಡುಗಡೆ ಮಾಡಲಾಗುವುದು.ಶಾಸಕ ಜಿ.ಟಿ.ದೇವೇಗೌಡರು ನನ್ನ ಅನುಮತಿ ಪಡೆದು ಇಲ್ಲಿ ಗೈರು ಹಾಜರಾಗಿದ್ದಾರೆ. ಮೈಸೂರು ಸೇರಿದಂತೆ ಇಡೀ ರಾಜ್ಯದಲ್ಲಿ ಯಾವುದೇ ಕ್ಷೇತ್ರದಲ್ಲೂ ಭಿನ್ನಾಭಿಪ್ರಾಯ ಇಲ್ಲ.
ತೆಲಂಗಾಣದಲ್ಲಿ ಪ್ರತಿ ದಲಿತ ಕುಟುಂಬಕ್ಕೆ 10 ಲಕ್ಷ ನೀಡಲಾಗುತ್ತಿದೆ. ದಲಿತರ ಕಲ್ಯಾಣ ಕಾರ್ಯಕ್ರಮ ರೂಪಿಸಲಾಗಿದೆ. ಅದೇ ರೀತಿ ಹಲವು ವಿಶೇಷ ಕಾರ್ಯಕ್ರಮಗಳನ್ನು ಜೆಡಿಎಸ್ ಕಡೆಯಿಂದ ರಾಜ್ಯದಲ್ಲಿಯೂ ರೂಪಿಸಲಾಗುವುದು ಎಂದು ಹೇಳಿದರು.
HD Kumaraswamy slams CM Bommai over sending corrpurtiom of congress leaders to Rahul Gandhi. He has asked CM to show the documents with proof and share it before the media.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm