ಬ್ರೇಕಿಂಗ್ ನ್ಯೂಸ್
20-10-22 09:07 pm HK News Desk ಕರ್ನಾಟಕ
ಮೈಸೂರು, ಅ.20 : ಕಾಂಗ್ರೆಸ್ ಸೇರುತ್ತಾರೆ ಎನ್ನಲಾಗಿದ್ದ ಜಿಟಿ ದೇವೇಗೌಡ ವರಸೆ ಬದಲಿಸಿದ್ದಾರೆ. ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಅವರು ಗುರುವಾರ ತಮ್ಮ ಮನೆಗೆ ಬರುತ್ತಲೇ ಜೆಡಿಎಸ್ ಶಾಸಕ ಜಿಟಿ ದೇವೇಗೌಡ ವಿರಸ ಮರೆತು ಪಕ್ಷದಲ್ಲಿ ಮುಂದುವರಿಯುವ ಸೂಚನೆ ನೀಡಿದ್ದಾರೆ.
ಕುಮಾರಸ್ವಾಮಿ ಅವರ ಬಗ್ಗೆ ಮುನಿಸಿಕೊಂಡು ಪಕ್ಷದ ಚಟುವಟಿಕೆಗಳಿಂದ ದೂರ ಉಳಿದಿದ್ದ ಮತ್ತು ಪಕ್ಷದಿಂದ ಒಂದು ಕಾಲು ಆಚೆ ಇಟ್ಟಿದ್ದ ಜಿಟಿ ದೇವೇಗೌಡ ಅವರು ಗುರುವಾರ ದಯವಿಟ್ಟು ಕ್ಷಮಿಸಿ, ನಾನು ಜೆಡಿಎಸ್ ಬಿಡಲ್ಲ ಎಂದು ಹೇಳುವ ಮೂಲಕ ತಾವು ಕಾಂಗ್ರೆಸ್ ಅಥವಾ ಬಿಜೆಪಿ ಸೇರುತ್ತಾರೆ ಎಂಬ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ. ಜೆಡಿಎಸ್ ಆಯೋಜಿಸಿದ್ದ ಪಂಚರತ್ನ ಕಾರ್ಯಾಗಾರದಲ್ಲಿ ಭಾಗವಹಿಸಲು ಮೈಸೂರಿಗೆ ಆಗಮಿಸಿದ್ದ ಮಾಜಿ ಪ್ರಧಾನಿ ದೇವೇಗೌಡ ಅವರು ನಗರದ ವಿವಿ ಮೊಹಲ್ಲಾದಲ್ಲಿರುವ ಜಿ.ಟಿ.ದೇವೇಗೌಡ ಅವರ ನಿವಾಸಕ್ಕೆ ಅಚ್ಚರಿ ಭೇಟಿ ನೀಡಿದರು. ಈ ಮೂಲಕ ಜಿಟಿಡಿಯನ್ನು ಪಕ್ಷದಲ್ಲಿ ಉಳಿಸಿಕೊಳ್ಳುವ ಪ್ರಯತ್ನ ಮಾಡಿದ್ದಾರೆ.
ದೇವೇಗೌಡರು ತಮ್ಮ ಮನೆಗೆ ಆಗಮಿಸಿ ಮಾತುಕತೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಜಿಟಿ ದೇವೇಗೌಡ ಅವರು, ದಯವಿಟ್ಟು ನನ್ನ ಕ್ಷಮಿಸಿ. ಜೆಡಿಎಸ್ ಬಿಟ್ಟು ಹೋಗಲ್ಲ. ಎಲ್ಲ ಪಕ್ಷದವರೂ ನನ್ನನ್ನ ಕರೆದಿದ್ದಾರೆ, ಕಾಂಗ್ರೆಸ್ನಿಂದ ಸಿದ್ದರಾಮಯ್ಯನವರೂ ನನ್ನನ್ನು ಕರೆದಿದ್ದಾರೆ. ಬಿಜೆಪಿಯವರೂ ನನಗೆ ಬಂದು ಬಿಡಿ ಎಂದು ಹೇಳಿದ್ದಾರೆ. ಆದರೆ ನಾವು ಜೆಡಿಎಸ್ ಪಕ್ಷದಿಂದ ಬೆಳೆದಿದ್ದೇವೆ. ಜೆಡಿಎಸ್ ಪಕ್ಷವನ್ನ ಕಟ್ಟುವುದೇ ನಮ್ಮ ಗುರಿ ಎಂದ ಸ್ಪಷ್ಟಪಡಿಸಿದರು.
ಈ ಮೂಲಕ ಕಾಂಗ್ರೆಸ್, ಬಿಜೆಪಿ ಸೇರುವ ವದಂತಿಗಳಿಗೆ ತೆರೆ ಎಳೆದಿದ್ದಾರೆ. ತಮ್ಮ ಪಕ್ಷಕ್ಕೆ ಬರ್ತಾರೆ ಎಂದು ಭಾರೀ ನಿರೀಕ್ಷೆಯಲ್ಲಿದ್ದ ಕಾಂಗ್ರೆಸ್ ಹಾಗೂ ಬಿಜೆಪಿಗೆ ನಿರಾಸೆಯಾಗಿದೆ. ಮೈಸೂರಿನಲ್ಲಿ ಜಿಟಿ ದೇವೇಗೌಡ ಮತ್ತು ಅವರ ಪುತ್ರ ಪ್ರಭಾವ ಹೊಂದಿದ್ದು ಅವರನ್ನು ತಮ್ಮ ಪಕ್ಷಕ್ಕೆ ಸೆಳೆದಲ್ಲಿ ಅನುಕೂಲ ಎಂದು ಬಿಜೆಪಿ ಮತ್ತು ಕಾಂಗ್ರೆಸ್ ನಾಯಕರು ತುದಿಗಾಲಲ್ಲಿ ನಿಂತಿದ್ದರು. ಕುಮಾರಸ್ವಾಮಿ ಜೊತೆಗೆ ಮುನಿಸು ಹೊಂದಿದ್ದ ಜಿಟಿಡಿ ಮೈಸೂರಿನಲ್ಲಿ ಪಕ್ಷದ ಚಟುವಟಿಕೆಯಿಂದ ದೂರ ಉಳಿದಿದ್ದರು.
It was a matter of rejoice for JD-S leaders as Party Supremo and former Prime Minister H.D. Deve Gowda took part on the second and concluding day of the two-day Consultation Meet organised for the party’s probable candidates for next year’s Assembly elections, at Silent Shores Resort, near Hootagalli here this morning. He was given a rousing welcome with thunderous applause from JD(S) leaders. Only the party Supremo Deve Gowda, JD(S) Legislature party leader H.D. Kumaraswamy and State JD(S) President C.M. Ibrahim were on the dais.
14-08-25 03:51 pm
Bangalore Correspondent
DK Shivakumar, Dharmasthala, Virendra Heggade...
14-08-25 03:49 pm
IPS Alok Kumar, News: ಪೊಲೀಸ್ ಶಾಲೆಗಳಲ್ಲೇ ಲಂಚ,...
14-08-25 01:48 pm
Dharmasthala Case, Dinesh Gundu Rao: ಮತ್ತೆ ಗು...
13-08-25 07:03 pm
ವಜಾ ಹಿಂದೆ ದೊಡ್ಡ ಷಡ್ಯಂತ್ರ ಆಗಿದೆ, ರಾಹುಲ್ ಗಾಂಧಿ...
12-08-25 10:39 pm
14-08-25 07:02 pm
HK News Desk
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮೋಡಿ ಮಾಡಲಿದ್ದಾರ...
14-08-25 11:26 am
ತಾಯಿ ಜೊತೆ ಅಂಡಮಾನ್ ಹೋಗ್ತೀನಿ ಎಂದಿದ್ದ ಮಗಳು ; ಬೇಡ...
13-08-25 11:56 am
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
'ದೇಶ ಸುರಕ್ಷಿತ ಕೈಯಲ್ಲಿದೆ' ; ನರೇಂದ್ರ ಮೋದಿ ಸರ್ಕ...
12-08-25 02:49 pm
14-08-25 01:12 pm
Mangaluru Staff
Bantwal Deputy Tahsildar, Lokayukta: 20 ಸಾವಿರ...
13-08-25 10:22 pm
Dharmasthala News Today, Point No 13: ಕಡೆಗೂ ಪ...
13-08-25 10:01 pm
The Ocean Pearl Brings “Flavors of India” to...
13-08-25 08:23 pm
ಹಠಾತ್ ಕುಸಿದು ಬಿದ್ದು ಕಾಲೇಜು ಬಸ್ ನಿರ್ವಾಹಕ ಸಾವು...
13-08-25 01:49 pm
14-08-25 05:31 pm
Bangalore Correspondent
Supreme Court, Actor Darshan Jail Order: ಸುಪ್...
14-08-25 11:51 am
Fake Stock Market Scam, Fraud: 10 ಲಕ್ಷ ಹೂಡಿಕೆ...
13-08-25 05:40 pm
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm