ಬ್ರೇಕಿಂಗ್ ನ್ಯೂಸ್
20-10-22 10:20 pm HK News Desk ಕರ್ನಾಟಕ
ಹಾಸನ, ಅ.20 : ಪಿಎಫ್ಐ ಸಂಘಟನೆ ನಿಷೇಧವಾಗಿದ್ದರೂ, ಸದ್ದಿಲ್ಲದೇ ಸಂಚು ರೂಪಿಸುತ್ತಿದ್ದ ಪಿಎಫ್ಐಗೆ ಸೇರಿದ ಇನ್ನೂ ಐವರನ್ನು ಮಂಗಳೂರಿನಲ್ಲಿ ದಸ್ತಗಿರಿ ಮಾಡಲಾಗಿದೆ ಎಂದು ಎಡಿಜಿಪಿ ಅಲೋಕ್ ಕುಮಾರ್ ಹೇಳಿದ್ದಾರೆ.
ಹಾಸನದಲ್ಲಿ ಹಾಸನಾಂಬೆ ದರ್ಶನ ಮತ್ತು ವ್ಯವಸ್ಥೆ ಬಗ್ಗೆ ಪರಿಶೀಲನೆಗೆ ಆಗಮಿಸಿದ್ದ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್, ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದರು. ಬಂಧಿತ ಐವರನ್ನು ವಿಚಾರಣೆ ನಡೆಸಲಾಗುತ್ತಿದೆ. ಪಿಎಫ್ಐ ಬ್ಯಾನ್ ಆದರೂ ಈ ಐದು ಜನ ಒಂದು ಕಡೆ ಕುಳಿತು ಸಂಚು ಮಾಡುತ್ತಿದ್ದರು. ವಿಶೇಷವಾಗಿ ಆರೋಪಿಗಳಿಗೆ ಯಾರ ಜೊತೆ ಲಿಂಕ್ ಇತ್ತು. ಎಲ್ಲೆಲ್ಲಿ ತರಬೇತಿ ನೀಡುತ್ತಿದ್ದರು. ಯಾವ ರೀತಿ ಸಂಚು ರೂಪಿಸಿದ್ದರು ಎಂಬಿತ್ಯಾದಿ ಆಯಾಮಗಳಲ್ಲಿ ವಿಚಾರಣೆ ನಡೆಸಿ ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ. ಇವರ ಜೊತೆ ಯಾರ್ಯಾರು ಇದ್ದಾರೆಂದು ಪತ್ತೆ ಹಚ್ಚಬೇಕಿದೆ ಎಂದರು.
ಕಾನೂನು ಇತಿಮಿತಿಯಲ್ಲಿ ಪ್ರತಿಭಟನೆ ಮಾಡಿದರೆ ನಮ್ಮ ಕಡೆಯಿಂದ ತಡೆ ಇರುವುದಿಲ್ಲ. ಕಾನೂನು ಮೀರಿ ಯಾರಾದರು ಪ್ರತಿಭಟನೆ ಮಾಡಿದರೆ ಕಾನೂನು ರೀತಿಯ ಕ್ರಮ ಕೈಗೊಳ್ಳಲಾಗುತ್ತದೆ ಎಂದರು

ಪಿಎಫ್ಐ ಸಂಘಟನೆ ಬ್ಯಾನ್ ಆಗಿದ್ದರೂ ಅವರ ಮೇಲೆ ನಾವು ನಿಗಾ ಇಟ್ಟಿದ್ದೇವೆ. ಕರಾವಳಿ ಭಾಗ, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಕೊಡಗು, ಮೈಸೂರು, ದಾವಣಗೆರೆ ಸೇರಿದಂತೆ ಇನ್ನಿತರ ಕಡೆಗಳಲ್ಲಿ ನಮ್ಮ ಅಧಿಕಾರಿಗಳು ಮಾಹಿತಿ ಸಂಗ್ರಹಿಸುತ್ತಿದ್ದಾರೆ. ಎಲ್ಲಾ ವಿಚಾರಗಳನ್ನು ತನಿಖಾಧಿಕಾರಿಗಳು ಕಲೆ ಹಾಕುತ್ತಿದ್ದಾರೆ.
ಪುತ್ತೂರಿನಲ್ಲಿ ನಡೆಯುತ್ತಿದ್ದ ತರಬೇತಿ ಬಿಟ್ಟು ಬೇರೆ ಬೇರೆ ಕಡೆ ಎಲ್ಲೆಲ್ಲಿ ತರಬೇತಿ ನಡೆಯುತ್ತಿದೆ ಎಂಬುದರ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದೇವೆ ಎಂದು ಅಲೋಕ್ ಕುಮಾರ್ ಹೇಳಿದರು. ಇದಕ್ಕೂ ಮುನ್ನ ಎಡಿಜಿಪಿ ಅಲೋಕ್ಕುಮಾರ್ ಅವರು ಹಾಸನಾಂಬೆ ದೇವಿ ದರ್ಶನ ಪಡೆದರು. ಅಲ್ಲಿ ದರ್ಶನಕ್ಕೆ ಕೈಗೊಂಡ ವ್ಯವಸ್ಥೆ ಬಗ್ಗೆ ಪರಿಶೀಲನೆ ನಡೆಸಿದರು. ಈ ವೇಳೆ ಹಾಸನ ಎಸ್ಪಿ ಹರಿರಾಂ ಶಂಕರ್, ಎಎಸ್ಪಿ ಮಿಥುನ್, ಡಿವೈಎಸ್ಪಿ ಉದಯ್ಭಾಸ್ಕರ್ ಇದ್ದರು.
Five PFI members of Mangalore have been arrested for plotting even after the ban of PFI in India, says ADGP Alok Kumar in Hassan.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm