ಬ್ರೇಕಿಂಗ್ ನ್ಯೂಸ್
21-10-22 05:37 pm HK News Desk ಕರ್ನಾಟಕ
ಮೈಸೂರು, ಅ.21 : ವಿಧಾನಸಭೆ ಚುನಾವಣೆಗೆ ಆರು ತಿಂಗಳು ಇರುವಾಗಲೇ ದೇವೇಗೌಡರು ತೊಡೆ ತಟ್ಟಿದ್ದಾರೆ. ಪಕ್ಷದ ಪಾಲಿಗೆ ಪ್ರಬಲ ಕೋಟೆ ಎಂದೇ ಪರಿಗಣಿಸಲ್ಪಟ್ಟ ಮೈಸೂರಿನಲ್ಲಿ ಚುನಾವಣೆಗೆ ತಯಾರಿ ನಡೆಸಿದ್ದು ಅಭ್ಯರ್ಥಿಗಳ ಪಟ್ಟಿಯನ್ನೂ ಘೋಷಣೆ ಮಾಡಲಾಗಿದೆ.
ಮೈಸೂರು ಭಾಗದ ಹಿರಿಯ ನಾಯಕ ಜಿಟಿ ದೇವೇಗೌಡರ ಜೊತೆ ಚಾಮುಂಡೇಶ್ವರಿ ಸನ್ನಿಧಿಗೆ ಆಗಮಿಸಿದ ಗೌಡರು, ಅಲ್ಲಿಂದಲೇ ಮೈಸೂರು ಜಿಲ್ಲೆಯ ಎಲ್ಲ ಹೊಣೆಯನ್ನೂ ಜಿಟಿಡಿಗೆ ಎಂದು ಘೋಷಿಸಿದ್ದಾರೆ. ಅಲ್ಲದೆ, ಜಿಟಿಡಿ ಅವರ ನಾಯಕತ್ವದ ಬಗ್ಗೆ ಏನೇ ಅಪಸ್ವರ ಕೇಳಿದರೂ ನಾನು ಸಹಿಸುವುದಿಲ್ಲ. ಅಪಸ್ವರ ಎತ್ತುವವರು ಹೊರಗೆ ಹೋಗಬಹುದು. ಮೈಸೂರು ಭಾಗದಲ್ಲಿ ಅವರ ನೇತೃತ್ವದಲ್ಲಿಯೇ ಚುನಾವಣೆ ನಡೆಯಲಿದೆ, ಅವರ ತೀರ್ಮಾನವೇ ಅಂತಿಮ ಎಂದು ಹೇಳಿದ್ದಾರೆ.
ಇದೇ ವೇಳೆ, ಚಾಮುಂಡಿ ಸನ್ನಿಧಿಯಲ್ಲಿಯೇ ಮೈಸೂರು ಭಾಗದ ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿಯನ್ನು ಜಿ.ಟಿ ದೇವೇಗೌಡ ಘೋಷಣೆ ಮಾಡಿದ್ದಾರೆ. ಚಾಮುಂಡೇಶ್ವರಿಗೆ ಜಿ.ಟಿ. ದೇವೇಗೌಡ, ಹುಣಸೂರಿಗೆ ಜಿ.ಟಿ.ಡಿ ಮಗ ಹರೀಶ್ ಗೌಡ, ಕೆ.ಆರ್. ನಗರಕ್ಕೆ ಸಾ.ರಾ. ಮಹೇಶ್, ಪಿರಿಯಾಪಟ್ಟಣಕ್ಕೆ ಕೆ.ಮಹದೇವ್, ತಿ.ನರಸೀಪುರಕ್ಕೆ ಅಶ್ವಿನ್ ಕುಮಾರ್, ಎಚ್.ಡಿ. ಕೋಟೆಗೆ ಮಾಜಿ ಶಾಸಕ ಚಿಕ್ಕಣ್ಣ ಪುತ್ರ ಜಯಪ್ರಕಾಶ್ಗೆ ಟಿಕೆಟ್ ಬಹುತೇಕ ಅಂತಿಮ ಎಂದು ಪ್ರಕಟಿಸಿದ್ದಾರೆ.
ನಾನು ನಿನ್ನೆಯಿಂದಲೇ ಪಕ್ಷ ಸಂಘಟನೆಯಲ್ಲಿ ತೊಡಗಿದ್ದೇನೆ. ಮನಸ್ಸು ಮೂರು ವರ್ಷಗಳ ನಂತರ ಸಮಾಧಾನದಲ್ಲಿದೆ. ನಾನು ನನ್ನ ಮನೆಯವರು ಹೆಚ್ಚು ಖುಷಿಯಲ್ಲಿದ್ದೇವೆ. ಇನ್ನು ಯಾವ ಗೊಂದಲಗಳು ಉಳಿದಿಲ್ಲ. ಚಾಮುಂಡಿ ತಾಯಿಗೆ ಎಚ್.ಡಿ. ದೇವೇಗೌಡರು ವಿಶೇಷ ಪೂಜೆ ಸಲ್ಲಿಸಿದ್ದಾರೆ. ಇನ್ನೊಂದು ತಿಂಗಳನಲ್ಲಿ ನಾನು ವಾಕ್ ಮಾಡುವ ಶಕ್ತಿಕೊಡು ಎಂದು ತಾಯಿ ಮುಂದೆ ಬೇಡಿದ್ದಾರೆ. ಜನವರಿ ತಿಂಗಳಲ್ಲಿ ಎಚ್.ಡಿ. ದೇವೇಗೌಡರು ಚಂಡಿಕಾ ಹೋಮ ನಡೆಸಲಿದ್ದಾರೆ. ಎಚ್.ಡಿ. ದೇವೇಗೌಡರ ಉತ್ಸಾಹ ನೋಡಿ ನಾವೇ ಅಚ್ಚರಿಗೆ ಒಳಗಾಗಿದ್ದೇವೆ. ಅವರೇ ನಮಗೆ ಪ್ರೇರಣೆ.ಅವರನ್ನು ಸಂತೋಷವಾಗಿಡುವುದೇ ನಮ್ಮ ಸಂತೋಷ ಎಂದು ಹೇಳಿದ್ದಾರೆ.
Chamundeshwari MLA G.T. Deve Gowda, who was estranged from the Janata Dal (Secular) and flip-flopped between the BJP and the Congress, announced here on Thursday that he would work ‘’to bring the JD(.S) to power’’.
13-05-25 09:50 pm
HK News Desk
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
13-05-25 08:47 pm
HK News Desk
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
13-05-25 10:33 pm
Mangalore Correspondent
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಿ...
13-05-25 07:33 pm
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm