ಬ್ರೇಕಿಂಗ್ ನ್ಯೂಸ್
23-10-22 10:12 pm HK News Desk ಕರ್ನಾಟಕ
ರಾಯಚೂರು, ಅ.23 : ಭಾರತ್ ಜೋಡೋ ಯಾತ್ರೆ ಕರ್ನಾಟಕದಲ್ಲಿ ಕೊನೆಗೊಂಡು ತೆಲಂಗಾಣ ಪ್ರವೇಶ ಮಾಡುವ ಸಂದರ್ಭದಲ್ಲಿ ರಾಹುಲ್ ಗಾಂಧಿ ರಾಜ್ಯ ನಾಯಕರ ಜೊತೆಗೆ ಕಾರ್ನರ್ ಮೀಟಿಂಗ್ ನಡೆಸಿದ್ದರು. ಈ ಸಭೆಯಲ್ಲಿ ರಾಹುಲ್ ಆಪ್ತೆ ಎನ್ನಲಾಗುವ ನಟಿ ರಮ್ಯಾಗೆ ಮುಜುಗರದ ಪ್ರಸಂಗ ನಡೆದಿದೆ. ರಮ್ಯಾಗೆ ವೇದಿಕೆಗೆ ಪ್ರವೇಶಿಸಲು ನಿರಾಕರಿಸಿದ್ದಕ್ಕೆ ಆಕೆ ತೀವ್ರ ಬೇಸರಗೊಂಡು ವಾಪಸ್ ಹೋಗಿದ್ದಾರೆ ಎನ್ನುವ ವಿಚಾರ ತಡವಾಗಿ ಬೆಳಕಿಗೆ ಬಂದಿದೆ.
ರಾಯಚೂರು ನಗರದ ಬಸವೇಶ್ವರ ವೃತ್ತದ ಬಳಿಯ ಮೈದಾನದಲ್ಲಿ ನಿನ್ನೆ ಸಂಜೆ ಮೀಟಿಂಗ್ ನಡೆದಿದ್ದು ಕಾರ್ಯಕ್ರಮದಲ್ಲಿ ಮುಜುಗರದ ಪ್ರಸಂಗ ಉಂಟಾಗಿದೆ. ಸಂಜೆ ವೇಳೆಗೆ ರಾಹುಲ್ ಗಾಂಧಿ ಪಾದಯಾತ್ರೆಯಲ್ಲಿ ಏಕಾಏಕಿ ಕಾಣಿಸಿಕೊಂಡಿದ್ದ ರಮ್ಯಾ, ಬಳಿಕ ರಾಹುಲ್ ಜೊತೆಗಿನ ಕಾರ್ನರ್ ಮೀಟಿಂಗ್ ಸ್ಥಳಕ್ಕೂ ಆಗಮಿಸಿದ್ದರು.
ಈ ವೇಳೆ ವೇದಿಕೆ ಏರಿ ಕೂರಲು ಅವರಿಗೆ ಅವಕಾಶ ನಿರಾಕರಿಸಲಾಗಿತ್ತು. ಅತಿಥಿಗಳ ಪಟ್ಟಿಯಲ್ಲಿ ರಮ್ಯಾ ಹೆಸರು ಇರದ ಕಾರಣ ಭದ್ರತಾ ಸಿಬ್ಬಂದಿ ಈ ಕ್ರಮ ಕೈಗೊಂಡಿದ್ದರು. ಇದರಿಂದ ಸಿಟ್ಟಾದ ರಮ್ಯಾ, ಎಂಟ್ರಿ ಕೊಡದ ಭದ್ರತಾ ಸಿಬ್ಬಂದಿ ಹಾಗೂ ರಾಯಚೂರಿನ ಮುಖಂಡರನ್ನು ತರಾಟೆಗೆ ತೆಗೆದುಕೊಂಡರು. ಎಷ್ಟೇ ಮನವಿ ಮಾಡಿಕೊಂಡರೂ ಭದ್ರತಾ ಸಿಬ್ಬಂದಿ ಅವಕಾಶ ನೀಡದ್ದರಿಂದ ಆಕ್ರೋಶಗೊಂಡ ರಮ್ಯಾ, ಕೆಲಹೊತ್ತು ಅಲ್ಲಿಯೇ ವೇದಿಕೆ ಬಳಿ ವಾಗ್ವಾದ ನಡೆಸಿ ನಂತರ ಕೋಪಗೊಂಡು ಅಲ್ಲಿಂದ ವಾಪಸ್ ಹೋದರು. ಈ ಕುರಿತ ವಿಡಿಯೋ ತುಣುಕೊಂದು ಹರಿದಾಡುತ್ತಿದ್ದು ರಮ್ಯಾ - ರಾಹುಲ್ ನಡುವಿನ ಸಂಬಂಧ ಹಳಸಿರುವುದಕ್ಕೆ ಸಾಕ್ಷಿ ಎನ್ನಲಾಗುತ್ತಿದೆ.
Actor Politician Ramya given no entry on stage in Raichur for Rahul Gandhi meeting, goes out
09-11-25 06:53 pm
Bangalore Correspondent
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
09-11-25 07:49 pm
HK News Desk
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm