ಬ್ರೇಕಿಂಗ್ ನ್ಯೂಸ್
23-10-22 10:12 pm HK News Desk ಕರ್ನಾಟಕ
ರಾಯಚೂರು, ಅ.23 : ಭಾರತ್ ಜೋಡೋ ಯಾತ್ರೆ ಕರ್ನಾಟಕದಲ್ಲಿ ಕೊನೆಗೊಂಡು ತೆಲಂಗಾಣ ಪ್ರವೇಶ ಮಾಡುವ ಸಂದರ್ಭದಲ್ಲಿ ರಾಹುಲ್ ಗಾಂಧಿ ರಾಜ್ಯ ನಾಯಕರ ಜೊತೆಗೆ ಕಾರ್ನರ್ ಮೀಟಿಂಗ್ ನಡೆಸಿದ್ದರು. ಈ ಸಭೆಯಲ್ಲಿ ರಾಹುಲ್ ಆಪ್ತೆ ಎನ್ನಲಾಗುವ ನಟಿ ರಮ್ಯಾಗೆ ಮುಜುಗರದ ಪ್ರಸಂಗ ನಡೆದಿದೆ. ರಮ್ಯಾಗೆ ವೇದಿಕೆಗೆ ಪ್ರವೇಶಿಸಲು ನಿರಾಕರಿಸಿದ್ದಕ್ಕೆ ಆಕೆ ತೀವ್ರ ಬೇಸರಗೊಂಡು ವಾಪಸ್ ಹೋಗಿದ್ದಾರೆ ಎನ್ನುವ ವಿಚಾರ ತಡವಾಗಿ ಬೆಳಕಿಗೆ ಬಂದಿದೆ.
ರಾಯಚೂರು ನಗರದ ಬಸವೇಶ್ವರ ವೃತ್ತದ ಬಳಿಯ ಮೈದಾನದಲ್ಲಿ ನಿನ್ನೆ ಸಂಜೆ ಮೀಟಿಂಗ್ ನಡೆದಿದ್ದು ಕಾರ್ಯಕ್ರಮದಲ್ಲಿ ಮುಜುಗರದ ಪ್ರಸಂಗ ಉಂಟಾಗಿದೆ. ಸಂಜೆ ವೇಳೆಗೆ ರಾಹುಲ್ ಗಾಂಧಿ ಪಾದಯಾತ್ರೆಯಲ್ಲಿ ಏಕಾಏಕಿ ಕಾಣಿಸಿಕೊಂಡಿದ್ದ ರಮ್ಯಾ, ಬಳಿಕ ರಾಹುಲ್ ಜೊತೆಗಿನ ಕಾರ್ನರ್ ಮೀಟಿಂಗ್ ಸ್ಥಳಕ್ಕೂ ಆಗಮಿಸಿದ್ದರು.
ಈ ವೇಳೆ ವೇದಿಕೆ ಏರಿ ಕೂರಲು ಅವರಿಗೆ ಅವಕಾಶ ನಿರಾಕರಿಸಲಾಗಿತ್ತು. ಅತಿಥಿಗಳ ಪಟ್ಟಿಯಲ್ಲಿ ರಮ್ಯಾ ಹೆಸರು ಇರದ ಕಾರಣ ಭದ್ರತಾ ಸಿಬ್ಬಂದಿ ಈ ಕ್ರಮ ಕೈಗೊಂಡಿದ್ದರು. ಇದರಿಂದ ಸಿಟ್ಟಾದ ರಮ್ಯಾ, ಎಂಟ್ರಿ ಕೊಡದ ಭದ್ರತಾ ಸಿಬ್ಬಂದಿ ಹಾಗೂ ರಾಯಚೂರಿನ ಮುಖಂಡರನ್ನು ತರಾಟೆಗೆ ತೆಗೆದುಕೊಂಡರು. ಎಷ್ಟೇ ಮನವಿ ಮಾಡಿಕೊಂಡರೂ ಭದ್ರತಾ ಸಿಬ್ಬಂದಿ ಅವಕಾಶ ನೀಡದ್ದರಿಂದ ಆಕ್ರೋಶಗೊಂಡ ರಮ್ಯಾ, ಕೆಲಹೊತ್ತು ಅಲ್ಲಿಯೇ ವೇದಿಕೆ ಬಳಿ ವಾಗ್ವಾದ ನಡೆಸಿ ನಂತರ ಕೋಪಗೊಂಡು ಅಲ್ಲಿಂದ ವಾಪಸ್ ಹೋದರು. ಈ ಕುರಿತ ವಿಡಿಯೋ ತುಣುಕೊಂದು ಹರಿದಾಡುತ್ತಿದ್ದು ರಮ್ಯಾ - ರಾಹುಲ್ ನಡುವಿನ ಸಂಬಂಧ ಹಳಸಿರುವುದಕ್ಕೆ ಸಾಕ್ಷಿ ಎನ್ನಲಾಗುತ್ತಿದೆ.
Actor Politician Ramya given no entry on stage in Raichur for Rahul Gandhi meeting, goes out
11-03-26 11:48 am
HK News Staffer
LPG ಸಿಲಿಂಡರ್ ಪೂರೈಕೆ ಸ್ಥಗಿತ ; ಬೆಂಗಳೂರಿನಲ್ಲಿ ಹಲ...
10-03-26 01:47 pm
ಗುರುಗ್ರಾಮ್ನಲ್ಲಿ ನಿರ್ಮಾಣ ಹಂತದ ಗೋಡೆ ಕುಸಿತ ; 7...
10-03-26 11:04 am
ಸ್ತ್ರೀ–ಪುರುಷರ ನಗ್ನ ಫೋಟೋಗಳು, ಕೊಳೆತ ಟೊಮೆಟೋ ; ಬೆ...
10-03-26 10:49 am
ಕಲಬುರಗಿ ಜಾತ್ರೆಯಲ್ಲಿ ಭೀಕರ ದುರಂತ; ರಥದ ಚಕ್ರಕ್ಕೆ...
09-03-26 09:51 pm
10-03-26 09:46 pm
HK News Desk
ಹರ್ಮುಜ್ ಜಲಸಂಧಿಯಲ್ಲಿ ತೈಲ ಹಡಗು ಬಂಧಿ ; ಜಗತ್ತಿಗೆ...
10-03-26 04:30 pm
ಕಚ್ಚಾ ತೈಲ ದರ ಏರಿಕೆ ; ಪಾಕಿಸ್ತಾನದಲ್ಲಿ ಅಲ್ಲೋಲಕಲ್...
10-03-26 01:31 pm
ಇರಾನ್ ನೂತನ ಸರ್ವೋಚ್ಚ ನಾಯಕನಾಗಿ ಆಯತುಲ್ಲಾ ಮೊಜ್ತಬ...
09-03-26 01:44 pm
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
11-03-26 11:54 am
HK News Staffer
ಬಂಟ್ವಾಳದ ಬಸ್ಸಿನಲ್ಲಿದ್ದಾಗ ಬ್ಯಾಗಿನಿಂದ 180 ಗ್ರಾಂ...
10-03-26 05:00 pm
ಬಿಸಿಲಿಗೆ ತತ್ತರಿಸಿದ ಅಳಿಲಿನ ದಣಿವು ನೀಗಿಸಿದ ಟ್ರಾಫ...
09-03-26 09:52 pm
ಗಲ್ಫ್ ಯುದ್ಧ ; ಮಂಗಳೂರಿನಿಂದ ದುಬೈ, ಜೆದ್ದಾ ಸೇರಿ ಹ...
09-03-26 07:29 pm
ತಲಪಾಡಿಯ ಯುವಕ ಬೆಂಗಳೂರಿನಲ್ಲಿ ಕಟ್ಟಡದಿಂದ ಬಿದ್ದು ಸ...
09-03-26 02:53 pm
11-03-26 10:58 am
HK News Staffer
ಕೇರಳ ಚುನಾವಣೆ ಹಿನ್ನೆಲೆ ; ರೈಲಿನಲ್ಲಿ ತಪಾಸಣೆ ಬಿಗಿ...
10-03-26 08:32 pm
ಉಪ್ಪಿನಂಗಡಿ ; ಖಾಸಗಿ ವ್ಯಕ್ತಿ ಮನೆಯಲ್ಲಿ ಅಕ್ರಮ ಶೇಖ...
10-03-26 07:01 pm
ಬಾಗಲಕೋಟೆಯಲ್ಲಿ ಹೋಳಿ ಆಚರಣೆ ವೇಳೆ ಕಿರಿಕ್ ; 19 ವರ...
10-03-26 01:49 pm
Vexon fraud Company, FIR: ಬ್ಲೇಡ್ ಕಂಪನಿ ವೆಕ್ಸನ...
28-02-26 11:12 am