ಬ್ರೇಕಿಂಗ್ ನ್ಯೂಸ್
23-10-22 10:12 pm HK News Desk ಕರ್ನಾಟಕ
ರಾಯಚೂರು, ಅ.23 : ಭಾರತ್ ಜೋಡೋ ಯಾತ್ರೆ ಕರ್ನಾಟಕದಲ್ಲಿ ಕೊನೆಗೊಂಡು ತೆಲಂಗಾಣ ಪ್ರವೇಶ ಮಾಡುವ ಸಂದರ್ಭದಲ್ಲಿ ರಾಹುಲ್ ಗಾಂಧಿ ರಾಜ್ಯ ನಾಯಕರ ಜೊತೆಗೆ ಕಾರ್ನರ್ ಮೀಟಿಂಗ್ ನಡೆಸಿದ್ದರು. ಈ ಸಭೆಯಲ್ಲಿ ರಾಹುಲ್ ಆಪ್ತೆ ಎನ್ನಲಾಗುವ ನಟಿ ರಮ್ಯಾಗೆ ಮುಜುಗರದ ಪ್ರಸಂಗ ನಡೆದಿದೆ. ರಮ್ಯಾಗೆ ವೇದಿಕೆಗೆ ಪ್ರವೇಶಿಸಲು ನಿರಾಕರಿಸಿದ್ದಕ್ಕೆ ಆಕೆ ತೀವ್ರ ಬೇಸರಗೊಂಡು ವಾಪಸ್ ಹೋಗಿದ್ದಾರೆ ಎನ್ನುವ ವಿಚಾರ ತಡವಾಗಿ ಬೆಳಕಿಗೆ ಬಂದಿದೆ.
ರಾಯಚೂರು ನಗರದ ಬಸವೇಶ್ವರ ವೃತ್ತದ ಬಳಿಯ ಮೈದಾನದಲ್ಲಿ ನಿನ್ನೆ ಸಂಜೆ ಮೀಟಿಂಗ್ ನಡೆದಿದ್ದು ಕಾರ್ಯಕ್ರಮದಲ್ಲಿ ಮುಜುಗರದ ಪ್ರಸಂಗ ಉಂಟಾಗಿದೆ. ಸಂಜೆ ವೇಳೆಗೆ ರಾಹುಲ್ ಗಾಂಧಿ ಪಾದಯಾತ್ರೆಯಲ್ಲಿ ಏಕಾಏಕಿ ಕಾಣಿಸಿಕೊಂಡಿದ್ದ ರಮ್ಯಾ, ಬಳಿಕ ರಾಹುಲ್ ಜೊತೆಗಿನ ಕಾರ್ನರ್ ಮೀಟಿಂಗ್ ಸ್ಥಳಕ್ಕೂ ಆಗಮಿಸಿದ್ದರು.
ಈ ವೇಳೆ ವೇದಿಕೆ ಏರಿ ಕೂರಲು ಅವರಿಗೆ ಅವಕಾಶ ನಿರಾಕರಿಸಲಾಗಿತ್ತು. ಅತಿಥಿಗಳ ಪಟ್ಟಿಯಲ್ಲಿ ರಮ್ಯಾ ಹೆಸರು ಇರದ ಕಾರಣ ಭದ್ರತಾ ಸಿಬ್ಬಂದಿ ಈ ಕ್ರಮ ಕೈಗೊಂಡಿದ್ದರು. ಇದರಿಂದ ಸಿಟ್ಟಾದ ರಮ್ಯಾ, ಎಂಟ್ರಿ ಕೊಡದ ಭದ್ರತಾ ಸಿಬ್ಬಂದಿ ಹಾಗೂ ರಾಯಚೂರಿನ ಮುಖಂಡರನ್ನು ತರಾಟೆಗೆ ತೆಗೆದುಕೊಂಡರು. ಎಷ್ಟೇ ಮನವಿ ಮಾಡಿಕೊಂಡರೂ ಭದ್ರತಾ ಸಿಬ್ಬಂದಿ ಅವಕಾಶ ನೀಡದ್ದರಿಂದ ಆಕ್ರೋಶಗೊಂಡ ರಮ್ಯಾ, ಕೆಲಹೊತ್ತು ಅಲ್ಲಿಯೇ ವೇದಿಕೆ ಬಳಿ ವಾಗ್ವಾದ ನಡೆಸಿ ನಂತರ ಕೋಪಗೊಂಡು ಅಲ್ಲಿಂದ ವಾಪಸ್ ಹೋದರು. ಈ ಕುರಿತ ವಿಡಿಯೋ ತುಣುಕೊಂದು ಹರಿದಾಡುತ್ತಿದ್ದು ರಮ್ಯಾ - ರಾಹುಲ್ ನಡುವಿನ ಸಂಬಂಧ ಹಳಸಿರುವುದಕ್ಕೆ ಸಾಕ್ಷಿ ಎನ್ನಲಾಗುತ್ತಿದೆ.
Actor Politician Ramya given no entry on stage in Raichur for Rahul Gandhi meeting, goes out
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm