ಬ್ರೇಕಿಂಗ್ ನ್ಯೂಸ್
23-10-22 10:49 pm HK News Desk ಕರ್ನಾಟಕ
ಹಾಸನ, ಅ.23 : ಹಾಸನಾಂಬೆ ದರ್ಶನಕ್ಕೆ ಬಂದ ಮೈಸೂರು ಜಿಲ್ಲೆಯ ಚಾಮರಾಜನಗರ ಕ್ಷೇತ್ರದ ಶಾಸಕ ನಾಗೇಂದ್ರ, ಭಕ್ತರ ದಟ್ಟಣೆಯಿಂದಾಗಿ ಒಂದು ಗಂಟೆ ಕಾದರೂ ದರ್ಶನ ಸಾಧ್ಯವಾಗದೆ, ವಾಪಸ್ ಹೋದ ಘಟನೆ ನಡೆದಿದ್ದು ಈ ವೇಳೆ ಸ್ಥಳೀಯ ಶಾಸಕ ಪ್ರೀತಂ ಗೌಡ ಫೋನೆತ್ತದ ಕಾರಣ ಅವರ ಆಕ್ರೋಶ ತೋರಿದ ಪ್ರಸಂಗವೂ ನಡೆಯಿತು.
ನಾಗೇಂದ್ರ ಭಾನುವಾರ ಮಧ್ಯಾಹ್ನ ದೇಗುಲಕ್ಕೆ ಬಂದಿದ್ದು ಕಾದು ಕಾದು ಸುಸ್ತಾಗಿ ವಾಪಾಸ್ ಹೋಗಿದ್ದಾರೆ. ವಾಪಸ್ ತೆರಳುವ ವೇಳೆ ಬಿಜೆಪಿ ಕಾರ್ಯಕರ್ತರ ಎದುರೇ ಶಾಸಕ ಪ್ರೀತಂಗೌಡ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಿಮ್ಮ ಎಂ.ಎಲ್.ಎ ಈ ಮಟ್ಟಕ್ಕೆ ನಡೆದುಕೊಳ್ತಾನಲ್ಲಾ.. ಒಂದು ಫೋನ್ ತೆಗೆಯೋ ಸೌಜನ್ಯ ಇಲ್ಲಾ.. ಅವನ ನಿಧಿ ಕೇಳ್ತಾ ಇದೀವಾ, ಆಸ್ರಿ ಕೇಳ್ತಾ ಇದೀವಾ.. ಒಬ್ಬ ಶಾಸಕ ಬಂದ್ರೆ ಇನ್ನೊಬ್ಬ ಶಾಸಕ ಒಂದು ಫೋನ್ ತೆಗೆಯೋ ಸೌಜನ್ಯ ಇಲ್ವಾ ಅವನಿಗೆ ಎಂದು ಏಕ ವಚನದಲ್ಲಿ ತೀವ್ರ ಆಕ್ರೋಶ ತೋರಿದ್ದಾರೆ.

ಈ ದೌಲತ್ತು ಹೆಚ್ಚು ದಿನ ನಡೆಯೋದಿಲ್ಲ ಬಿಡಿ. ನನಗೆ ಗೊತ್ತಿದೆ, ನಾಳೆ ಜಿಲ್ಲಾಡಳಿತದ ಕಡೆಯಿಂದ ಬರ್ತೀನಿ ಬಿಡಿ ಎಂದು ಬೇಸರದಿಂದ ವಾಪಸ್ ಹೋಗಿದ್ದಾರೆ. ಇಷ್ಟೆಲ್ಲಾ ವ್ಯವಸ್ಥೆ ಮಾಡಿ ನಾವು ಬಂದ್ರೆ ಪೊಲೀಸರು ದರ್ಶನಕ್ಕೆ ಅವಕಾಶ ಕೊಡಲ್ಲ. ಶಾಸಕನೊಬ್ಬ ಫೋನ್ ರಿಸೀವ್ ಕೂಡ ಮಾಡಲ್ಲ ಎಂದು ಕಿಡಿ ಕಿಡಿಯಾದರು.

ಇದಕ್ಕೂ ಮುನ್ನ ಹಾಸನ ಹೆಚ್ಛುವರಿ ಎಸ್ಪಿ ವರ್ತನೆಗೆ ಶಾಸಕ ನಾಗೇಂದ್ರ ಕಿಡಿ ಕಾರಿದ್ದಾರೆ. ಶಾಸಕರು ತಮ್ಮ ಬೆಂಬಲಿಗರ ಜೊತೆ ಹಾಸನಾಂಬೆ ದರ್ಶನಕ್ಕೆ ಬಂದಿದ್ದರು. ಈ ವೇಳೆ ಶಾಸಕರು ಹಾಗು ನಿಮ್ಮ ಜೊತೆ ನಾಲ್ಕು ಜನ ಮಾತ್ರ ಬನ್ನಿ ಎಂದು ಎಎಸ್ಪಿ ಎಂ.ಕೆ.ತಮ್ಮಯ್ಯ ಹೇಳಿದ್ದರು. ತಮ್ಮಯ್ಯ ವರ್ತನೆಗೆ ಶಾಸಕ ನಾಗೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದು ಕೂಡಲೇ ಗೃಹ ಇಲಾಖೆಗೆ ಫೋನ್ ಮಾಡಿ ಅಸಮಾಧಾನ ಹೊರ ಹಾಕಿದ್ದಾರೆ.

ನೋಡಿ ನಾನೊಬ್ಬ ಶಾಸಕ ಬಂದಿದೀನಿ, ನನ್ನ ಜೊತೆ ಒಳ ಹೋಗೋವಾಗ 25 ಜನ ನಿಂತಿದಾರೆ. ಇವನು ಬಂದು ಶಾಸಕರೆಂದು ಹೇಳಿದ್ರೂ ನೀವೊಬ್ಬರೇ ಬರೋದಾದ್ರೆ ಬನ್ನಿ ಅಂತಾನೆ. ನೋಡಿ ಅವನಿಗೆ ಡೈರೆಕ್ಷನ್ ಕೊಡಿ. ಅವನು ಈ ರೀತಿ ರೂಡಾಗಿ ನಡೆದುಕೊಳ್ತಾನೆ, ಡಿಪಾರ್ಟ್ಮೆಂಟ್ ಗೆ ಅವನು ನಾಲಾಯಕ್ ಎಂದು ಗೃಹ ಸಚಿವರಲ್ಲಿ ಕಿಡಿ ಕಾರಿದ್ದಾರೆ. ಇದೇ ಕಾರಣಕ್ಕೆ ಶಾಸಕ ಪ್ರೀತಂ ಗೌಡ ಫೋನ್ ಎತ್ತದೆ ನಿರ್ಲಕ್ಷ್ಯ ವಹಿಸಿದ್ದೋ ಗೊತ್ತಿಲ್ಲ.
Mysuru MLA Nagendra goes angry after he wasn't allowed for darshan at Hasanamba Temple.
28-05-26 10:56 am
HK News Staffer
ನಾಳೆ ರಾಜೀನಾಮೆ ಕೊಡ್ತೀನಿ ಎಂದೇ ಬಂದಿದ್ದಾರೆ..! ಸಿದ...
27-05-26 06:26 pm
ನಾಗಲಕ್ಷ್ಮಿಗೆ ಸುತ್ತಿಕೊಂಡ ಮತ್ತೊಂದು ವಿವಾದ ; ಉಡುಪ...
27-05-26 04:58 pm
ಡಿಕೆಗೆ ಪಟ್ಟ ; ಬಹುತೇಕ ಸಚಿವರಿಗೆ ಕೊಕ್- ಹೊಸಬರಿಗೆ...
27-05-26 01:41 pm
ರಾಜ್ಯ ರಾಜಕೀಯದಲ್ಲಿ ಭಾರೀ ಕ್ಲೈಮ್ಯಾಕ್ಸ್ ; ಸಿಎಂ ಸಿ...
26-05-26 11:03 pm
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
27-05-26 12:29 pm
HK News Desk
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
28-05-26 10:43 am
HK News Staffer
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm