ಬ್ರೇಕಿಂಗ್ ನ್ಯೂಸ್
23-10-22 10:49 pm HK News Desk ಕರ್ನಾಟಕ
ಹಾಸನ, ಅ.23 : ಹಾಸನಾಂಬೆ ದರ್ಶನಕ್ಕೆ ಬಂದ ಮೈಸೂರು ಜಿಲ್ಲೆಯ ಚಾಮರಾಜನಗರ ಕ್ಷೇತ್ರದ ಶಾಸಕ ನಾಗೇಂದ್ರ, ಭಕ್ತರ ದಟ್ಟಣೆಯಿಂದಾಗಿ ಒಂದು ಗಂಟೆ ಕಾದರೂ ದರ್ಶನ ಸಾಧ್ಯವಾಗದೆ, ವಾಪಸ್ ಹೋದ ಘಟನೆ ನಡೆದಿದ್ದು ಈ ವೇಳೆ ಸ್ಥಳೀಯ ಶಾಸಕ ಪ್ರೀತಂ ಗೌಡ ಫೋನೆತ್ತದ ಕಾರಣ ಅವರ ಆಕ್ರೋಶ ತೋರಿದ ಪ್ರಸಂಗವೂ ನಡೆಯಿತು.
ನಾಗೇಂದ್ರ ಭಾನುವಾರ ಮಧ್ಯಾಹ್ನ ದೇಗುಲಕ್ಕೆ ಬಂದಿದ್ದು ಕಾದು ಕಾದು ಸುಸ್ತಾಗಿ ವಾಪಾಸ್ ಹೋಗಿದ್ದಾರೆ. ವಾಪಸ್ ತೆರಳುವ ವೇಳೆ ಬಿಜೆಪಿ ಕಾರ್ಯಕರ್ತರ ಎದುರೇ ಶಾಸಕ ಪ್ರೀತಂಗೌಡ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಿಮ್ಮ ಎಂ.ಎಲ್.ಎ ಈ ಮಟ್ಟಕ್ಕೆ ನಡೆದುಕೊಳ್ತಾನಲ್ಲಾ.. ಒಂದು ಫೋನ್ ತೆಗೆಯೋ ಸೌಜನ್ಯ ಇಲ್ಲಾ.. ಅವನ ನಿಧಿ ಕೇಳ್ತಾ ಇದೀವಾ, ಆಸ್ರಿ ಕೇಳ್ತಾ ಇದೀವಾ.. ಒಬ್ಬ ಶಾಸಕ ಬಂದ್ರೆ ಇನ್ನೊಬ್ಬ ಶಾಸಕ ಒಂದು ಫೋನ್ ತೆಗೆಯೋ ಸೌಜನ್ಯ ಇಲ್ವಾ ಅವನಿಗೆ ಎಂದು ಏಕ ವಚನದಲ್ಲಿ ತೀವ್ರ ಆಕ್ರೋಶ ತೋರಿದ್ದಾರೆ.

ಈ ದೌಲತ್ತು ಹೆಚ್ಚು ದಿನ ನಡೆಯೋದಿಲ್ಲ ಬಿಡಿ. ನನಗೆ ಗೊತ್ತಿದೆ, ನಾಳೆ ಜಿಲ್ಲಾಡಳಿತದ ಕಡೆಯಿಂದ ಬರ್ತೀನಿ ಬಿಡಿ ಎಂದು ಬೇಸರದಿಂದ ವಾಪಸ್ ಹೋಗಿದ್ದಾರೆ. ಇಷ್ಟೆಲ್ಲಾ ವ್ಯವಸ್ಥೆ ಮಾಡಿ ನಾವು ಬಂದ್ರೆ ಪೊಲೀಸರು ದರ್ಶನಕ್ಕೆ ಅವಕಾಶ ಕೊಡಲ್ಲ. ಶಾಸಕನೊಬ್ಬ ಫೋನ್ ರಿಸೀವ್ ಕೂಡ ಮಾಡಲ್ಲ ಎಂದು ಕಿಡಿ ಕಿಡಿಯಾದರು.

ಇದಕ್ಕೂ ಮುನ್ನ ಹಾಸನ ಹೆಚ್ಛುವರಿ ಎಸ್ಪಿ ವರ್ತನೆಗೆ ಶಾಸಕ ನಾಗೇಂದ್ರ ಕಿಡಿ ಕಾರಿದ್ದಾರೆ. ಶಾಸಕರು ತಮ್ಮ ಬೆಂಬಲಿಗರ ಜೊತೆ ಹಾಸನಾಂಬೆ ದರ್ಶನಕ್ಕೆ ಬಂದಿದ್ದರು. ಈ ವೇಳೆ ಶಾಸಕರು ಹಾಗು ನಿಮ್ಮ ಜೊತೆ ನಾಲ್ಕು ಜನ ಮಾತ್ರ ಬನ್ನಿ ಎಂದು ಎಎಸ್ಪಿ ಎಂ.ಕೆ.ತಮ್ಮಯ್ಯ ಹೇಳಿದ್ದರು. ತಮ್ಮಯ್ಯ ವರ್ತನೆಗೆ ಶಾಸಕ ನಾಗೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದು ಕೂಡಲೇ ಗೃಹ ಇಲಾಖೆಗೆ ಫೋನ್ ಮಾಡಿ ಅಸಮಾಧಾನ ಹೊರ ಹಾಕಿದ್ದಾರೆ.

ನೋಡಿ ನಾನೊಬ್ಬ ಶಾಸಕ ಬಂದಿದೀನಿ, ನನ್ನ ಜೊತೆ ಒಳ ಹೋಗೋವಾಗ 25 ಜನ ನಿಂತಿದಾರೆ. ಇವನು ಬಂದು ಶಾಸಕರೆಂದು ಹೇಳಿದ್ರೂ ನೀವೊಬ್ಬರೇ ಬರೋದಾದ್ರೆ ಬನ್ನಿ ಅಂತಾನೆ. ನೋಡಿ ಅವನಿಗೆ ಡೈರೆಕ್ಷನ್ ಕೊಡಿ. ಅವನು ಈ ರೀತಿ ರೂಡಾಗಿ ನಡೆದುಕೊಳ್ತಾನೆ, ಡಿಪಾರ್ಟ್ಮೆಂಟ್ ಗೆ ಅವನು ನಾಲಾಯಕ್ ಎಂದು ಗೃಹ ಸಚಿವರಲ್ಲಿ ಕಿಡಿ ಕಾರಿದ್ದಾರೆ. ಇದೇ ಕಾರಣಕ್ಕೆ ಶಾಸಕ ಪ್ರೀತಂ ಗೌಡ ಫೋನ್ ಎತ್ತದೆ ನಿರ್ಲಕ್ಷ್ಯ ವಹಿಸಿದ್ದೋ ಗೊತ್ತಿಲ್ಲ.
Mysuru MLA Nagendra goes angry after he wasn't allowed for darshan at Hasanamba Temple.
11-03-26 11:48 am
HK News Staffer
LPG ಸಿಲಿಂಡರ್ ಪೂರೈಕೆ ಸ್ಥಗಿತ ; ಬೆಂಗಳೂರಿನಲ್ಲಿ ಹಲ...
10-03-26 01:47 pm
ಗುರುಗ್ರಾಮ್ನಲ್ಲಿ ನಿರ್ಮಾಣ ಹಂತದ ಗೋಡೆ ಕುಸಿತ ; 7...
10-03-26 11:04 am
ಸ್ತ್ರೀ–ಪುರುಷರ ನಗ್ನ ಫೋಟೋಗಳು, ಕೊಳೆತ ಟೊಮೆಟೋ ; ಬೆ...
10-03-26 10:49 am
ಕಲಬುರಗಿ ಜಾತ್ರೆಯಲ್ಲಿ ಭೀಕರ ದುರಂತ; ರಥದ ಚಕ್ರಕ್ಕೆ...
09-03-26 09:51 pm
10-03-26 09:46 pm
HK News Desk
ಹರ್ಮುಜ್ ಜಲಸಂಧಿಯಲ್ಲಿ ತೈಲ ಹಡಗು ಬಂಧಿ ; ಜಗತ್ತಿಗೆ...
10-03-26 04:30 pm
ಕಚ್ಚಾ ತೈಲ ದರ ಏರಿಕೆ ; ಪಾಕಿಸ್ತಾನದಲ್ಲಿ ಅಲ್ಲೋಲಕಲ್...
10-03-26 01:31 pm
ಇರಾನ್ ನೂತನ ಸರ್ವೋಚ್ಚ ನಾಯಕನಾಗಿ ಆಯತುಲ್ಲಾ ಮೊಜ್ತಬ...
09-03-26 01:44 pm
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
11-03-26 11:54 am
HK News Staffer
ಬಂಟ್ವಾಳದ ಬಸ್ಸಿನಲ್ಲಿದ್ದಾಗ ಬ್ಯಾಗಿನಿಂದ 180 ಗ್ರಾಂ...
10-03-26 05:00 pm
ಬಿಸಿಲಿಗೆ ತತ್ತರಿಸಿದ ಅಳಿಲಿನ ದಣಿವು ನೀಗಿಸಿದ ಟ್ರಾಫ...
09-03-26 09:52 pm
ಗಲ್ಫ್ ಯುದ್ಧ ; ಮಂಗಳೂರಿನಿಂದ ದುಬೈ, ಜೆದ್ದಾ ಸೇರಿ ಹ...
09-03-26 07:29 pm
ತಲಪಾಡಿಯ ಯುವಕ ಬೆಂಗಳೂರಿನಲ್ಲಿ ಕಟ್ಟಡದಿಂದ ಬಿದ್ದು ಸ...
09-03-26 02:53 pm
11-03-26 10:58 am
HK News Staffer
ಕೇರಳ ಚುನಾವಣೆ ಹಿನ್ನೆಲೆ ; ರೈಲಿನಲ್ಲಿ ತಪಾಸಣೆ ಬಿಗಿ...
10-03-26 08:32 pm
ಉಪ್ಪಿನಂಗಡಿ ; ಖಾಸಗಿ ವ್ಯಕ್ತಿ ಮನೆಯಲ್ಲಿ ಅಕ್ರಮ ಶೇಖ...
10-03-26 07:01 pm
ಬಾಗಲಕೋಟೆಯಲ್ಲಿ ಹೋಳಿ ಆಚರಣೆ ವೇಳೆ ಕಿರಿಕ್ ; 19 ವರ...
10-03-26 01:49 pm
Vexon fraud Company, FIR: ಬ್ಲೇಡ್ ಕಂಪನಿ ವೆಕ್ಸನ...
28-02-26 11:12 am