ಬ್ರೇಕಿಂಗ್ ನ್ಯೂಸ್
24-10-22 01:07 pm HK News Desk ಕರ್ನಾಟಕ
ರಾಮನಗರ, ಅ.24: ಮಾಗಡಿ ತಾಲೂಕಿನ ಕಂಚುಗಲ್ ಬಂಡೆಮಠದ ಬಸವಲಿಂಗ ಸ್ವಾಮೀಜಿ(45) ಆತ್ಮಹತ್ಯೆ ಮಾಡಿಕೊಂಡಿದ್ದು ಮರ್ಯಾದೆಗೆ ಅಂಜಿ ಸಾವಿಗೆ ಶರಣಾಗಿದ್ದಾರೆ ಎನ್ನಲಾಗುತ್ತಿದೆ. ಮೂರು ಪುಟಗಳ ಡೆತ್ ನೋಟ್ ಬರೆದಿಟ್ಟು ಮಠದಲ್ಲಿಯೇ ಕಿಟಕಿಗೆ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾರೆ.
ಡೆತ್ ನೋಟ್ನಲ್ಲಿ ಕೆಲವರು ನನ್ನ ಬಗ್ಗೆ ಅಪಪ್ರಚಾರ ಮಾಡುತ್ತಿದ್ದಾರೆ. ನನಗೆ ಯಾರ ಸಹಾಯವೂ ಇರಲಿಲ್ಲ. ಕೆಲವರಿಂದ ಬೆದರಿಕೆ ಕರೆಗಳು ಸಹ ಬಂದಿವೆ ಎಂದು ಉಲ್ಲೇಖಿಸಿದ್ದಾರೆ. ಮಾಗಡಿ ತಾಲೂಕಿನಲ್ಲೇ ಲಿಂಗಾಯತರ ಪಾಲಿಗೆ ಅತ್ಯಂತ ದೊಡ್ಡ ಮಠ ಎಂಬ ಪ್ರಖ್ಯಾತಿ ಪಡೆದಿರುವ ಕಂಚುಗಲ್ ಬಂಡೆಮಠದ ಆವರಣದಲ್ಲಿ ಶಾಲಾ ಕಾಲೇಜುಗಳಿವೆ. 50 ಕೋಟಿಗೂ ಹೆಚ್ಚು ಮೌಲ್ಯ ಹೊಂದಿರುವ ಆಸ್ತಿಗಳಿವೆ. ಆದ್ರೆ ಕೆಲ ದಿನಗಳಿಂದ ಸ್ವಾಮೀಜಿಗಳ ವಿರುದ್ಧ ಕೇಳಿಬಂದಿದ್ದ ಆರೋಪಕ್ಕೆ ಅಂಜಿ ಸ್ವಾಮೀಜಿ ಪ್ರಾಣ ತ್ಯಾಗ ಮಾಡಿದ್ದಾರೆ.
ಸ್ವಾಮೀಜಿಗಳ ಹೆಸರಲ್ಲಿ 80 ಎಕರೆ ಜಮೀನು ಇದೆ. 25 ವರ್ಷಗಳ ಹಿಂದೆ ಬಂಡೆಮಠದಲ್ಲಿ ಪೀಠ ಅಲಂಕರಿಸಿದ್ದರು. ಇತ್ತೀಚೆಗೆ ಬೆಳ್ಳಿ ಮಹೋತ್ಸವ ಆಚರಣೆ ಮಾಡಿಕೊಂಡಿದ್ದರು. ಶ್ರೀಗಳು ಬಂಡೇಮಠದಲ್ಲಿ ಶಿಕ್ಷಣ ಸಂಸ್ಥೆಗಳನ್ನು ನಡೆಸುತ್ತಿದ್ದರು. ಚಿಲುಮೆ ಮಠದ ಬಸವಲಿಂಗ ಸ್ವಾಮೀಜಿಯವರು ಇದೇ ರೀತಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿ ಒಂದು ವರ್ಷವೂ ಆಗಿಲ್ಲ. ಆಗ ಇದೇ ರೀತಿ ಮತ್ತೊಂದು ಘಟನೆ ನಡೆದಿದೆ.
ಶ್ರೀಗಳು ಮಠದಲ್ಲಿ ನೂತನ ಕಟ್ಟಡದ ಗುದ್ದಲಿ ಪೂಜೆಗೆ ಪ್ಲಾನ್ ಮಾಡಿಕೊಂಡಿದ್ದರು. ಮಠದ ಕಟ್ಟಡಕ್ಕೆ ಸರ್ಕಾರದಿಂದ ಹಣ ಸಹ ಮಂಜೂರಾತಿಯೂ ಆಗಿತ್ತು. ಇದೇ ಬುಧವಾರ 26 ರಂದು ಮಾಜಿ ಸಿಎಂ ಯಡಿಯೂರಪ್ಪನವರು ಗುದ್ದಲಿ ಪೂಜೆ ಮಾಡಬೇಕಿತ್ತು. ನೂತನ ಕಟ್ಟಡದ ಗುದ್ದಲಿ ಪೂಜೆಗೆ ಎಲ್ಲಾ ಸಿದ್ದತೆ ಮಾಡಿಕೊಳ್ಳಲಾಗಿತ್ತು. ಅಷ್ಟರಲ್ಲಿ ಸ್ವಾಮೀಜಿ ಸಾವು ಕಂಡಿದ್ದಾರೆ.
Shri Kanchugal Bande Math Basavalinga Swamiji (45) of Kanchugal Bandemath ended his life in the math itself by hanging. The incident occurred at the Bandemath situated at Magadi taluk of the district. The exact reason for the extreme step taken by the seer is not known.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm