ಬ್ರೇಕಿಂಗ್ ನ್ಯೂಸ್
26-10-22 05:18 pm Bangalore Correspondent ಕರ್ನಾಟಕ
ಬೆಂಗಳೂರು, ಅ.26 : ರಾಮನಗರ ಜಿಲ್ಲೆಯ ಮಾಗಡಿಯ ಕಂಚುಗಲ್ ಬಂಡೇಮಠದ ಪೀಠಾಧ್ಯಕ್ಷ ಶ್ರೀ ಬಸವಲಿಂಗ ಸ್ವಾಮೀಜಿ (45) ಆತ್ಮಹತ್ಯೆ ಪ್ರಕರಣ ಮಹತ್ವದ ತಿರುವು ಪಡೆದಿದ್ದು ಸ್ವಾಮೀಜಿಯನ್ನು ಹನಿಟ್ರ್ಯಾಪ್ ಒಳಪಡಿಸಿ ಬ್ಲಾಕ್ಮೇಲ್ ಮಾಡಲಾಗಿತ್ತು ಎನ್ನುವ ಅಂಶ ತನಿಖೆಯಲ್ಲಿ ತಿಳಿದುಬಂದಿದೆ.
ಶ್ರೀಗಳನ್ನು ಪೀಠತ್ಯಾಗ ಮಾಡಿಸುವ ನಿಟ್ಟಿನಲ್ಲಿ ಹನಿಟ್ರ್ಯಾಪ್ ಬಲೆಗೆ ಬೀಳಿಸಲು ಏಳು ತಿಂಗಳಿನಿಂದ ಕೆಲವರು ಪ್ರಯತ್ನ ಮಾಡಿದ್ದಾರೆ. ಇದಕ್ಕಾಗಿ ಅನಾಮಧೇಯ ಮಹಿಳೆಯೊಬ್ಬಳು ಶ್ರೀಗಳ ಮೊಬೈಲ್ಗೆ ವಿಡಿಯೋ ಕಾಲ್ ಮಾಡಿರುವುದು ಕಂಡುಬಂದಿದೆ. ವಂಚಕರ ಬಲೆಗೆ ಬಿದ್ದ ಶ್ರೀಗಳು ಹನಿಟ್ರ್ಯಾಪ್ ಒಳಗಾಗಿದ್ದು ಆತ್ಮಹತ್ಯೆ ಮಾಡಿಕೊಳ್ಳಲು ವಾಟ್ಸಪ್ ವಿಡಿಯೋ ಕರೆಯೇ ಕಾರಣ ಎಂದು ತಿಳಿದುಬಂದಿದೆ. ಮಹಿಳೆಯ ಜೊತೆ ಮಾತನಾಡಿರುವ ವಿಡಿಯೋ ಕರೆ ರೆಕಾರ್ಡ್ ಆಗಿದ್ದು ಅದನ್ನು ಮುಂದಿಟ್ಟು ಬ್ಲಾಕ್ಮೇಲ್ ಮಾಡಲಾಗಿತ್ತು. ವಿಡಿಯೋ ಹೊರ ಬಂದರೆ ಮಾನ, ಮರ್ಯಾದೆ ಹಾಳಾಗುತ್ತದೆ ಎಂದು ಹೆದರಿ ಶ್ರೀಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ಅಲ್ಲದೆ, ಸ್ವಾಮೀಜಿ ಸಾವನ್ನಪ್ಪಿದ ದಿನವೇ ಇಬ್ಬರು ಪ್ರಭಾವಿಗಳು ಅವರನ್ನು ಭೇಟಿಯಾಗಿದ್ದರು. ಅರ್ಧ ಗಂಟೆ ಕಾಲ ಗೌಪ್ಯ ಮಾತುಕತೆ ನಡೆಸಿದ್ದರು. ಸ್ವಾಮೀಜಿ ಭೇಟಿ ಆಗಿದ್ದವರು ಹಾಲಿ ಸಚಿವರೊಬ್ಬರ ಆಪ್ತರು ಎಂದು ಹೇಳಲಾಗುತ್ತಿದೆ. ಭೇಟಿಯ ಬಳಿಕ ತನ್ನ ಕೊಠಡಿ ಹೋಗಿದ್ದ ಸ್ವಾಮೀಜಿ ಅಲ್ಲಿಂದ ಹೊರ ಬಂದಿರಲಿಲ್ಲ. ಮಠದ ಸಿಬಂದಿ ಬಳಿಕ ಬಾಗಿಲು ಒಡೆದು ನೋಡಿದಾಗ ಆತ್ಮಹತ್ಯೆ ಮಾಡಿರುವುದು ಪತ್ತೆಯಾಗಿತ್ತು. ಹೀಗಾಗಿ ಶ್ರೀಗಳ ವಿರುದ್ಧ ಸಂಚು ರೂಪಿಸಿ ಖೆಡ್ಡಾಕ್ಕೆ ಕೆಡವಿದ ಪ್ರಭಾವಿಗಳು ಯಾರು ಎಂಬ ಪ್ರಶ್ನೆ ಮೂಡಿದೆ. ಮಠದ ಪೀಠಾಧ್ಯಕ್ಷ ಸ್ಥಾನ ಹಿಡಿಯಲು ಮತ್ತೊಬ್ಬ ಸ್ವಾಮೀಜಿ ಸಂಚು ರೂಪಿಸಿರುವ ಶಂಕೆಯೂ ಪೊಲೀಸರಲ್ಲಿದೆ. ಮಠದ ಆಸ್ತಿಯ ಮೇಲೆ ಕಣ್ಣಿಟ್ಟಿದ್ದ ಕೆಲವರು ಶ್ರೀಗಳನ್ನು ಪೀಠಾಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲು ಹನಿಟ್ರ್ಯಾಪ್ ಸಂಚು ರೂಪಿಸಿದ್ದರು ಎಂಬ ಅಂಶ ತನಿಖೆಯಲ್ಲಿ ಬಯಲಾಗಿದೆ.
ಡೆತ್ ನೋಟ್ ನಲ್ಲಿ ಹಲವರ ಹೆಸರು, ಎಫ್ಐಆರ್ ನಲ್ಲಿ ಇಲ್ಲ !
ಸ್ವಾಮೀಜಿ ಆತ್ಮಹತ್ಯೆ ಪ್ರಕರಣ ಸಂಬಂಧಿಸಿ ಎಫ್ಐಆರ್ ದಾಖಲಾಗಿದ್ದು ಪೊಲೀಸರು ಯಾವುದೇ ಆರೋಪಿಗಳ ಹೆಸರು ಉಲ್ಲೇಖಿಸಿಲ್ಲ. ಹೀಗಾಗಿ ಇಡೀ ಪ್ರಕರಣ ಮುಚ್ಚಿಹಾಕಲು ಪ್ರಯತ್ನ ನಡೆಯುತ್ತಿದೆಯಾ ಎಂಬ ಅನುಮಾನ ಮೂಡಿದೆ. ಪ್ರಕರಣದಲ್ಲಿ ಪ್ರಭಾವಿ ಹಾಲಿ ಸಚಿವರ ಕೈವಾಡದ ಶಂಕೆ ವ್ಯಕ್ತವಾಗಿದೆ. ಡೆತ್ನೋಟ್ನಲ್ಲಿ ಹಲವರ ಹೆಸರು ಇದೆ ಎನ್ನಲಾಗುತ್ತಿದ್ದರೂ ಎಫ್ಐಆರ್ ನಲ್ಲಿ ಮಾತ್ರ ಅನಾಮಧೇಯ ವ್ಯಕ್ತಿಯೆಂದು ಉಲ್ಲೇಖಿಸಿರುವುದು ಅನುಮಾನಕ್ಕೆ ಕಾರಣವಾಗಿದೆ. ಮಾಗಡಿ ತಾಲೂಕಿನ ಕುದೂರು ಠಾಣೆಯಲ್ಲಿ ಈ ಬಗ್ಗೆ ಎಫ್ಐಆರ್ ದಾಖಲಾಗಿದೆ.
The seer of Sri Kanchugal Bande Mutt, Basavalinga Swami was found dead in a room of the mutt in Ramnagara district, police have informed.
19-06-26 04:18 pm
HK News Staffer
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 09:05 pm
HK News Staffer
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
Mangalore police suspend, Bajpe: ಅಸ್ಸಾಂ ಕಾರ್ಮ...
19-06-26 12:24 pm
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
19-06-26 09:07 pm
HK News Staffer
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm
Bhatkal News: ಭಟ್ಕಳದಲ್ಲಿ ಮತ್ತೆ ಕೋಮು ಸಂಘರ್ಷ ;...
18-06-26 01:20 pm
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm