ಬ್ರೇಕಿಂಗ್ ನ್ಯೂಸ್
26-10-22 10:15 pm HK News Desk ಕರ್ನಾಟಕ
ಮೂಡುಬಿದ್ರೆ, ಅ.26 : ಹುಟ್ಟೂರಿಗೆ ಆಗಮಿಸಿದ್ದ ಸುಪ್ರೀಂ ಕೋರ್ಟ್ ನ್ಯಾಯಾಧೀಶ ನ್ಯಾಯಮೂರ್ತಿ ಅಬ್ದುಲ್ ನಝೀರ್ ಬುಧವಾರ ಮೂಡುಬಿದ್ರೆಯ ವಕೀಲರ ಭವನದ ಕಾಮಗಾರಿ ವೀಕ್ಷಣೆ ಮಾಡಿದ್ದು ಕಾಮಗಾರಿಯಲ್ಲಿ ಆಗಿರುವ ಲೋಪಗಳನ್ನು ತೋರಿಸಿ ಗುತ್ತಿಗೆದಾರ ಮತ್ತು ಲೋಕೋಪಯೋಗಿ ಇಲಾಖೆಯ ಮುಖ್ಯ ಇಂಜಿನಿಯರ್ ಅವರನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.
ಮೂಡುಬಿದ್ರೆ ನ್ಯಾಯಾಲಯದ ಆವರಣದಲ್ಲಿ ನಿರ್ಮಾಣ ಹಂತದ ವಕೀಲರ ಭವನದ ಕಾಮಗಾರಿಯ ವೀಕ್ಷಣೆಗೆ ನ್ಯಾಯಮೂರ್ತಿ ಅಬ್ದುಲ್ ನಝೀರ್ ಬುಧವಾರ ದಿಢೀರ್ ಭೇಟಿ ನೀಡಿದ್ದರು. ಈ ವೇಳೆ, ಕಳಪೆ ಮತ್ತು ಅಸಮರ್ಪಕ ಕಾಮಗಾರಿಯನ್ನು ಕಂಡು ನ್ಯಾಯಾಧೀಶರು ಗರಂ ಆದರು. ನ್ಯಾಯಾಧೀಶರ ಆಗಮನದ ಬಗ್ಗೆ ಗುತ್ತಿಗೆದಾರರಿಗೆ ಪೂರ್ವ ಮಾಹಿತಿ ಇದ್ದರೂ ಹಾಜರಿರಲಿಲ್ಲ ಎನ್ನಲಾಗಿದೆ. ಕಳಪೆ ಗುಣಮಟ್ಟದ ಟೈಲ್ಸ್, ಅವೈಜ್ಞಾನಿಕ ಕಾಮಗಾರಿಯನ್ನು ಒಡೆದು ಬೇರೆಯದ್ದೇ ಟೈಲ್ಸ್ ಬಳಸಿ ಸರಿಪಡಿಸುವಂತೆ ಇಂಜಿನಿಯರ್ಗೆ ತಾಕೀತು ಮಾಡಿದ್ದಾರೆ.


ದನದ ಕೊಟ್ಟಿಗೆಗೆ ಬಳಸುವ ರೀತಿ ಸಾಮಾಗ್ರಿಗಳನ್ನು ಉಪಯೋಗ ಮಾಡಲಾಗಿದೆ ಎಂದು ಅಸಮಾಧಾನ ಹೊರಹಾಕಿದ ನ್ಯಾಯಾಧೀಶ ಅಬ್ದುಲ್ ನಜೀರ್, ಗುತ್ತಿಗೆದಾರ ಬಿಮಲ್ ಪ್ರವೀಣ್ನನ್ನು ಕಪ್ಪು ಪಟ್ಟಿಗೆ ಸೇರಿಸಿ ಐದು ವರ್ಷ ಯಾವುದೇ ಗುತ್ತಿಗೆ ಕೊಡದಂತೆ ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ನ್ಯಾಯಾಧೀಶರಿಗೆ ಎಲ್ಲಾ ವಿಧದ ಪರಿಜ್ಞಾನವೂ ಇರುತ್ತದೆ. ನಮಗೆ ಸತ್ಯಾಂಶ ತಿಳಿಯಲು ಹೆಚ್ಚು ಸಮಯ ಬೇಕಾಗುವುದಿಲ್ಲ ಎಂದು ಪರೋಕ್ಷಾಗಿ ಕಿಡಿಕಾರಿದ್ದಾರೆ. ಕೊನೆ ಕ್ಷಣದಲ್ಲಿ ಗುತ್ತಿಗೆದಾರ ಆಗಮಿಸಿದ್ದು, ನನ್ನ ತವರೂರಿನಲ್ಲಿ ಈ ರೀತಿ ನಡೆದಿರುವುದರಿಂದ ನನ್ನ ಮನಸ್ಸಿಗೆ ಅತೀವ ನೋವಾಗಿದೆ ಎಂದ ಅವರು, ಗುತ್ತಿಗೆದಾರನ ಮುಖವನ್ನೂ ನೋಡದೆ ಹಿಂತಿರುಗಿದ್ದಾರೆ. ಜಿಲ್ಲಾ ಮುಖ್ಯ ನ್ಯಾಯಾಧೀಶರು, ವಕೀಲರ ಸಂಘದ ಸದಸ್ಯರು ಈ ಸಂದರ್ಭದಲ್ಲಿ ಹಾಜರಿದ್ದರು.
Supreme Court judge Abdul Nazeer surprise visit to Moodbidri Court, turns angry looking at improper work.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm