ಬ್ರೇಕಿಂಗ್ ನ್ಯೂಸ್
26-10-22 10:15 pm HK News Desk ಕರ್ನಾಟಕ
ಮೂಡುಬಿದ್ರೆ, ಅ.26 : ಹುಟ್ಟೂರಿಗೆ ಆಗಮಿಸಿದ್ದ ಸುಪ್ರೀಂ ಕೋರ್ಟ್ ನ್ಯಾಯಾಧೀಶ ನ್ಯಾಯಮೂರ್ತಿ ಅಬ್ದುಲ್ ನಝೀರ್ ಬುಧವಾರ ಮೂಡುಬಿದ್ರೆಯ ವಕೀಲರ ಭವನದ ಕಾಮಗಾರಿ ವೀಕ್ಷಣೆ ಮಾಡಿದ್ದು ಕಾಮಗಾರಿಯಲ್ಲಿ ಆಗಿರುವ ಲೋಪಗಳನ್ನು ತೋರಿಸಿ ಗುತ್ತಿಗೆದಾರ ಮತ್ತು ಲೋಕೋಪಯೋಗಿ ಇಲಾಖೆಯ ಮುಖ್ಯ ಇಂಜಿನಿಯರ್ ಅವರನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.
ಮೂಡುಬಿದ್ರೆ ನ್ಯಾಯಾಲಯದ ಆವರಣದಲ್ಲಿ ನಿರ್ಮಾಣ ಹಂತದ ವಕೀಲರ ಭವನದ ಕಾಮಗಾರಿಯ ವೀಕ್ಷಣೆಗೆ ನ್ಯಾಯಮೂರ್ತಿ ಅಬ್ದುಲ್ ನಝೀರ್ ಬುಧವಾರ ದಿಢೀರ್ ಭೇಟಿ ನೀಡಿದ್ದರು. ಈ ವೇಳೆ, ಕಳಪೆ ಮತ್ತು ಅಸಮರ್ಪಕ ಕಾಮಗಾರಿಯನ್ನು ಕಂಡು ನ್ಯಾಯಾಧೀಶರು ಗರಂ ಆದರು. ನ್ಯಾಯಾಧೀಶರ ಆಗಮನದ ಬಗ್ಗೆ ಗುತ್ತಿಗೆದಾರರಿಗೆ ಪೂರ್ವ ಮಾಹಿತಿ ಇದ್ದರೂ ಹಾಜರಿರಲಿಲ್ಲ ಎನ್ನಲಾಗಿದೆ. ಕಳಪೆ ಗುಣಮಟ್ಟದ ಟೈಲ್ಸ್, ಅವೈಜ್ಞಾನಿಕ ಕಾಮಗಾರಿಯನ್ನು ಒಡೆದು ಬೇರೆಯದ್ದೇ ಟೈಲ್ಸ್ ಬಳಸಿ ಸರಿಪಡಿಸುವಂತೆ ಇಂಜಿನಿಯರ್ಗೆ ತಾಕೀತು ಮಾಡಿದ್ದಾರೆ.


ದನದ ಕೊಟ್ಟಿಗೆಗೆ ಬಳಸುವ ರೀತಿ ಸಾಮಾಗ್ರಿಗಳನ್ನು ಉಪಯೋಗ ಮಾಡಲಾಗಿದೆ ಎಂದು ಅಸಮಾಧಾನ ಹೊರಹಾಕಿದ ನ್ಯಾಯಾಧೀಶ ಅಬ್ದುಲ್ ನಜೀರ್, ಗುತ್ತಿಗೆದಾರ ಬಿಮಲ್ ಪ್ರವೀಣ್ನನ್ನು ಕಪ್ಪು ಪಟ್ಟಿಗೆ ಸೇರಿಸಿ ಐದು ವರ್ಷ ಯಾವುದೇ ಗುತ್ತಿಗೆ ಕೊಡದಂತೆ ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ನ್ಯಾಯಾಧೀಶರಿಗೆ ಎಲ್ಲಾ ವಿಧದ ಪರಿಜ್ಞಾನವೂ ಇರುತ್ತದೆ. ನಮಗೆ ಸತ್ಯಾಂಶ ತಿಳಿಯಲು ಹೆಚ್ಚು ಸಮಯ ಬೇಕಾಗುವುದಿಲ್ಲ ಎಂದು ಪರೋಕ್ಷಾಗಿ ಕಿಡಿಕಾರಿದ್ದಾರೆ. ಕೊನೆ ಕ್ಷಣದಲ್ಲಿ ಗುತ್ತಿಗೆದಾರ ಆಗಮಿಸಿದ್ದು, ನನ್ನ ತವರೂರಿನಲ್ಲಿ ಈ ರೀತಿ ನಡೆದಿರುವುದರಿಂದ ನನ್ನ ಮನಸ್ಸಿಗೆ ಅತೀವ ನೋವಾಗಿದೆ ಎಂದ ಅವರು, ಗುತ್ತಿಗೆದಾರನ ಮುಖವನ್ನೂ ನೋಡದೆ ಹಿಂತಿರುಗಿದ್ದಾರೆ. ಜಿಲ್ಲಾ ಮುಖ್ಯ ನ್ಯಾಯಾಧೀಶರು, ವಕೀಲರ ಸಂಘದ ಸದಸ್ಯರು ಈ ಸಂದರ್ಭದಲ್ಲಿ ಹಾಜರಿದ್ದರು.
Supreme Court judge Abdul Nazeer surprise visit to Moodbidri Court, turns angry looking at improper work.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm