ಬ್ರೇಕಿಂಗ್ ನ್ಯೂಸ್
27-10-22 10:27 pm HK News Desk ಕರ್ನಾಟಕ
ಮಂಡ್ಯ, ಅ.27 : ಮಳವಳ್ಳಿಯ ಹತ್ತು ವರ್ಷದ ಬಾಲಕಿಯ ಅತ್ಯಾಚಾರ ಹಾಗೂ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಕಾಂತರಾಜು ವಿರುದ್ಧ ಪೊಲೀಸರು ನ್ಯಾಯಾಲಯಕ್ಕೆ 638 ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ.
ಪ್ರಕರಣದ ವಿಚಾರಣೆಯನ್ನು ಮಳವಳ್ಳಿ ಉಪ ವಿಭಾಗದ ಡಿವೈಎಸ್ಪಿ ನವೀನ್ಕುಮಾರ್ ನೇತೃತ್ವದ ತಂಡಕ್ಕೆ ಒಪ್ಪಿಸಲಾಗಿತ್ತು. ತುರ್ತಾಗಿ ವಿಚಾರಣೆ ನಡೆಸಿದ ಪೊಲೀಸರು ಕೇವಲ 15 ದಿನಗಳಲ್ಲೇ ಆರೋಪಿ ಕಾಂತರಾಜು ವಿರುದ್ಧ ನ್ಯಾಯಾಲಯಕ್ಕೆ 638 ಪುಟಗಳ ದೋಷಾರೋಪಣಾ ಪಟ್ಟಿಯನ್ನು ಸಲ್ಲಿಸಿದ್ದಾರೆ. ಕಳೆದ ಅಕ್ಟೋಬರ್ 11ರಂದು ಬೆಳಗ್ಗೆ 11 ಗಂಟೆ ಸಮಯದಲ್ಲಿ ಆರೋಪಿ ಕಾಂತರಾಜು ತಾನು ನಡೆಸುತ್ತಿದ್ದ ಟ್ಯೂಷನ್ ಸೆಂಟರಿಗೆ ಬಾಲಕಿಯನ್ನು ಬರುವಂತೆ ಹೇಳಿದ್ದ. ಆನಂತರ 4ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಬಾಲಕಿ ಮೇಲೆ ಅತ್ಯಾಚಾರ ನಡೆಸಿ ಆಕೆಯ ಕತ್ತು ಹಿಸುಕಿ ಹತ್ಯೆಗೈದಿದ್ದ. ಬಳಿಕ ನಿರ್ಮಾಣ ಹಂತದ ಕಟ್ಟಡದಲ್ಲಿದ್ದ ನೀರಿನ ಸಂಪಿಗೆ ಆಕೆಯ ಶವವನ್ನು ಎಸೆದು ಪರಾರಿಯಾಗಿದ್ದ.
ಈ ನಡುವೆ, ಬಾಲಕಿ ಶವ ಪತ್ತೆಯಾಗಿ ಪೊಲೀಸರು ತನಿಖೆ ಆರಂಭಿಸಿದ್ದರು. ಕಿರಾತಕ ಆರೋಪಿ ಪೊಲೀಸರ ವಿಚಾರಣೆ ವೇಳೆಯೂ ದಿಕ್ಕು ತಪ್ಪಿಸಲು ಯತ್ನಿಸಿದ್ದ. ಆದರೆ ಸೂಕ್ತ ದಾಖಲೆ ಮುಂದಿಟ್ಟು ತನಿಖೆ ನಡೆಸಿದಾಗ, ಆರೋಪಿ ಶಿಕ್ಷಕ ಸಿಕ್ಕಿಬಿದ್ದಿದ್ದ. ಡಿವೈಎಸ್ಪಿ ನವೀನ್ಕುಮಾರ್ ನೇತೃತ್ವದ ವಿಶೇಷ ಪೊಲೀಸರ ತಂಡ ಸಮಗ್ರ ತನಿಖೆ ನಡೆಸಿದ್ದು 15 ದಿನಗಳಲ್ಲೇ ನ್ಯಾಯಾಲಯಕ್ಕೆ ಆರೋಪಿ ವಿರುದ್ಧ 638 ಪುಟಗಳ ದೋಷಾರೋಪಣಾ ಪಟ್ಟಿ ಸಲ್ಲಿಸಿದೆ ಎಂದು ಜಿಲ್ಲಾ ಪೊಲೀಸ್ ಅಧೀಕ್ಷ ಎನ್. ಯತೀಶ್ ತಿಳಿಸಿದ್ದಾರೆ. ಪೊಲೀಸರ ಕಾರ್ಯವನ್ನು ಶ್ಲಾಘಿಸಿರುವ ಅಪರ ಪೊಲೀಸ್ ಮಹಾನಿರ್ದೇಶಕ ಅಲೋಕ್ ಕುಮಾರ್, ಮಂಡ್ಯ ಪೊಲೀಸ್ ಅಧಿಕಾರಿಗಳ ತಂಡಕ್ಕೆ ಒಂದು ಲಕ್ಷ ರೂಪಾಯಿ ಬಹುಮಾನ ಘೋಷಿಸಿದ್ದಾರೆ.
Mandya student rape case, 638 pages of charge sheet filed by police in 15 days.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm