ಬ್ರೇಕಿಂಗ್ ನ್ಯೂಸ್
27-10-22 10:27 pm HK News Desk ಕರ್ನಾಟಕ
ಮಂಡ್ಯ, ಅ.27 : ಮಳವಳ್ಳಿಯ ಹತ್ತು ವರ್ಷದ ಬಾಲಕಿಯ ಅತ್ಯಾಚಾರ ಹಾಗೂ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಕಾಂತರಾಜು ವಿರುದ್ಧ ಪೊಲೀಸರು ನ್ಯಾಯಾಲಯಕ್ಕೆ 638 ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ.
ಪ್ರಕರಣದ ವಿಚಾರಣೆಯನ್ನು ಮಳವಳ್ಳಿ ಉಪ ವಿಭಾಗದ ಡಿವೈಎಸ್ಪಿ ನವೀನ್ಕುಮಾರ್ ನೇತೃತ್ವದ ತಂಡಕ್ಕೆ ಒಪ್ಪಿಸಲಾಗಿತ್ತು. ತುರ್ತಾಗಿ ವಿಚಾರಣೆ ನಡೆಸಿದ ಪೊಲೀಸರು ಕೇವಲ 15 ದಿನಗಳಲ್ಲೇ ಆರೋಪಿ ಕಾಂತರಾಜು ವಿರುದ್ಧ ನ್ಯಾಯಾಲಯಕ್ಕೆ 638 ಪುಟಗಳ ದೋಷಾರೋಪಣಾ ಪಟ್ಟಿಯನ್ನು ಸಲ್ಲಿಸಿದ್ದಾರೆ. ಕಳೆದ ಅಕ್ಟೋಬರ್ 11ರಂದು ಬೆಳಗ್ಗೆ 11 ಗಂಟೆ ಸಮಯದಲ್ಲಿ ಆರೋಪಿ ಕಾಂತರಾಜು ತಾನು ನಡೆಸುತ್ತಿದ್ದ ಟ್ಯೂಷನ್ ಸೆಂಟರಿಗೆ ಬಾಲಕಿಯನ್ನು ಬರುವಂತೆ ಹೇಳಿದ್ದ. ಆನಂತರ 4ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಬಾಲಕಿ ಮೇಲೆ ಅತ್ಯಾಚಾರ ನಡೆಸಿ ಆಕೆಯ ಕತ್ತು ಹಿಸುಕಿ ಹತ್ಯೆಗೈದಿದ್ದ. ಬಳಿಕ ನಿರ್ಮಾಣ ಹಂತದ ಕಟ್ಟಡದಲ್ಲಿದ್ದ ನೀರಿನ ಸಂಪಿಗೆ ಆಕೆಯ ಶವವನ್ನು ಎಸೆದು ಪರಾರಿಯಾಗಿದ್ದ.
ಈ ನಡುವೆ, ಬಾಲಕಿ ಶವ ಪತ್ತೆಯಾಗಿ ಪೊಲೀಸರು ತನಿಖೆ ಆರಂಭಿಸಿದ್ದರು. ಕಿರಾತಕ ಆರೋಪಿ ಪೊಲೀಸರ ವಿಚಾರಣೆ ವೇಳೆಯೂ ದಿಕ್ಕು ತಪ್ಪಿಸಲು ಯತ್ನಿಸಿದ್ದ. ಆದರೆ ಸೂಕ್ತ ದಾಖಲೆ ಮುಂದಿಟ್ಟು ತನಿಖೆ ನಡೆಸಿದಾಗ, ಆರೋಪಿ ಶಿಕ್ಷಕ ಸಿಕ್ಕಿಬಿದ್ದಿದ್ದ. ಡಿವೈಎಸ್ಪಿ ನವೀನ್ಕುಮಾರ್ ನೇತೃತ್ವದ ವಿಶೇಷ ಪೊಲೀಸರ ತಂಡ ಸಮಗ್ರ ತನಿಖೆ ನಡೆಸಿದ್ದು 15 ದಿನಗಳಲ್ಲೇ ನ್ಯಾಯಾಲಯಕ್ಕೆ ಆರೋಪಿ ವಿರುದ್ಧ 638 ಪುಟಗಳ ದೋಷಾರೋಪಣಾ ಪಟ್ಟಿ ಸಲ್ಲಿಸಿದೆ ಎಂದು ಜಿಲ್ಲಾ ಪೊಲೀಸ್ ಅಧೀಕ್ಷ ಎನ್. ಯತೀಶ್ ತಿಳಿಸಿದ್ದಾರೆ. ಪೊಲೀಸರ ಕಾರ್ಯವನ್ನು ಶ್ಲಾಘಿಸಿರುವ ಅಪರ ಪೊಲೀಸ್ ಮಹಾನಿರ್ದೇಶಕ ಅಲೋಕ್ ಕುಮಾರ್, ಮಂಡ್ಯ ಪೊಲೀಸ್ ಅಧಿಕಾರಿಗಳ ತಂಡಕ್ಕೆ ಒಂದು ಲಕ್ಷ ರೂಪಾಯಿ ಬಹುಮಾನ ಘೋಷಿಸಿದ್ದಾರೆ.
Mandya student rape case, 638 pages of charge sheet filed by police in 15 days.
16-09-25 11:00 pm
Bangalore Correspondent
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
16-09-25 07:48 pm
Mangalore Correspondent
Ex IPS Kempaiah, Professor Umeshchandra, Mang...
16-09-25 07:02 pm
Mangalore BJP Protest, UT khader, Red Stone:...
16-09-25 06:51 pm
UT Khader, Mangalore, Ullal: ಉಳ್ಳಾಲ ಕ್ಷೇತ್ರದಲ...
16-09-25 06:06 pm
ಕೆಂಪು ಕಲ್ಲು ನಿಯಮ ಸರಳೀಕರಣಕ್ಕೆ ಸಂಪುಟದಲ್ಲಿ ಒಪ್ಪಿ...
16-09-25 05:12 pm
16-09-25 10:40 pm
HK News Desk
Bidar crime: ಏಳು ವರ್ಷದ ಬಾಲಕಿಯನ್ನ ಮೂರನೇ ಮಹಡಿಯಿ...
16-09-25 07:12 pm
Bangalore Police, Inspector Suspend, Crime, D...
15-09-25 10:47 pm
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am