ಬ್ರೇಕಿಂಗ್ ನ್ಯೂಸ್
27-10-22 10:27 pm HK News Desk ಕರ್ನಾಟಕ
ಮಂಡ್ಯ, ಅ.27 : ಮಳವಳ್ಳಿಯ ಹತ್ತು ವರ್ಷದ ಬಾಲಕಿಯ ಅತ್ಯಾಚಾರ ಹಾಗೂ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಕಾಂತರಾಜು ವಿರುದ್ಧ ಪೊಲೀಸರು ನ್ಯಾಯಾಲಯಕ್ಕೆ 638 ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ.
ಪ್ರಕರಣದ ವಿಚಾರಣೆಯನ್ನು ಮಳವಳ್ಳಿ ಉಪ ವಿಭಾಗದ ಡಿವೈಎಸ್ಪಿ ನವೀನ್ಕುಮಾರ್ ನೇತೃತ್ವದ ತಂಡಕ್ಕೆ ಒಪ್ಪಿಸಲಾಗಿತ್ತು. ತುರ್ತಾಗಿ ವಿಚಾರಣೆ ನಡೆಸಿದ ಪೊಲೀಸರು ಕೇವಲ 15 ದಿನಗಳಲ್ಲೇ ಆರೋಪಿ ಕಾಂತರಾಜು ವಿರುದ್ಧ ನ್ಯಾಯಾಲಯಕ್ಕೆ 638 ಪುಟಗಳ ದೋಷಾರೋಪಣಾ ಪಟ್ಟಿಯನ್ನು ಸಲ್ಲಿಸಿದ್ದಾರೆ. ಕಳೆದ ಅಕ್ಟೋಬರ್ 11ರಂದು ಬೆಳಗ್ಗೆ 11 ಗಂಟೆ ಸಮಯದಲ್ಲಿ ಆರೋಪಿ ಕಾಂತರಾಜು ತಾನು ನಡೆಸುತ್ತಿದ್ದ ಟ್ಯೂಷನ್ ಸೆಂಟರಿಗೆ ಬಾಲಕಿಯನ್ನು ಬರುವಂತೆ ಹೇಳಿದ್ದ. ಆನಂತರ 4ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಬಾಲಕಿ ಮೇಲೆ ಅತ್ಯಾಚಾರ ನಡೆಸಿ ಆಕೆಯ ಕತ್ತು ಹಿಸುಕಿ ಹತ್ಯೆಗೈದಿದ್ದ. ಬಳಿಕ ನಿರ್ಮಾಣ ಹಂತದ ಕಟ್ಟಡದಲ್ಲಿದ್ದ ನೀರಿನ ಸಂಪಿಗೆ ಆಕೆಯ ಶವವನ್ನು ಎಸೆದು ಪರಾರಿಯಾಗಿದ್ದ.
ಈ ನಡುವೆ, ಬಾಲಕಿ ಶವ ಪತ್ತೆಯಾಗಿ ಪೊಲೀಸರು ತನಿಖೆ ಆರಂಭಿಸಿದ್ದರು. ಕಿರಾತಕ ಆರೋಪಿ ಪೊಲೀಸರ ವಿಚಾರಣೆ ವೇಳೆಯೂ ದಿಕ್ಕು ತಪ್ಪಿಸಲು ಯತ್ನಿಸಿದ್ದ. ಆದರೆ ಸೂಕ್ತ ದಾಖಲೆ ಮುಂದಿಟ್ಟು ತನಿಖೆ ನಡೆಸಿದಾಗ, ಆರೋಪಿ ಶಿಕ್ಷಕ ಸಿಕ್ಕಿಬಿದ್ದಿದ್ದ. ಡಿವೈಎಸ್ಪಿ ನವೀನ್ಕುಮಾರ್ ನೇತೃತ್ವದ ವಿಶೇಷ ಪೊಲೀಸರ ತಂಡ ಸಮಗ್ರ ತನಿಖೆ ನಡೆಸಿದ್ದು 15 ದಿನಗಳಲ್ಲೇ ನ್ಯಾಯಾಲಯಕ್ಕೆ ಆರೋಪಿ ವಿರುದ್ಧ 638 ಪುಟಗಳ ದೋಷಾರೋಪಣಾ ಪಟ್ಟಿ ಸಲ್ಲಿಸಿದೆ ಎಂದು ಜಿಲ್ಲಾ ಪೊಲೀಸ್ ಅಧೀಕ್ಷ ಎನ್. ಯತೀಶ್ ತಿಳಿಸಿದ್ದಾರೆ. ಪೊಲೀಸರ ಕಾರ್ಯವನ್ನು ಶ್ಲಾಘಿಸಿರುವ ಅಪರ ಪೊಲೀಸ್ ಮಹಾನಿರ್ದೇಶಕ ಅಲೋಕ್ ಕುಮಾರ್, ಮಂಡ್ಯ ಪೊಲೀಸ್ ಅಧಿಕಾರಿಗಳ ತಂಡಕ್ಕೆ ಒಂದು ಲಕ್ಷ ರೂಪಾಯಿ ಬಹುಮಾನ ಘೋಷಿಸಿದ್ದಾರೆ.
Mandya student rape case, 638 pages of charge sheet filed by police in 15 days.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm