ಬ್ರೇಕಿಂಗ್ ನ್ಯೂಸ್
29-10-22 04:18 pm Bangalore Correspondent ಕರ್ನಾಟಕ
ಬೆಂಗಳೂರು, ಅ.29: ದೀಪಾವಳಿ ಹಬ್ಬದ ನೆಪದಲ್ಲಿ ಪ್ರಮುಖ ಪತ್ರಿಕೆಗಳು ಮತ್ತು ಸುದ್ದಿ ವಾಹಿನಿಗಳ ಕೆಲವು ಆಯ್ದ ಪತ್ರಕರ್ತರಿಗೆ ಮುಖ್ಯಮಂತ್ರಿ ಕಚೇರಿಯಿಂದ ಸ್ವೀಟ್ ಬಾಕ್ಸ್ ಜೊತೆಗೆ ಲಕ್ಷ ಲಕ್ಷ ಹಣ ಹಂಚಿಕೆ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿರುವ ನಡುವೆಯೇ ಈ ಬಗ್ಗೆ ಜನಾಧಿಕಾರ ಸಂಘರ್ಷ ಪರಿಷತ್ ಲೋಕಾಯುಕ್ತಕ್ಕೆ ದೂರು ನೀಡಿದೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಮಾಧ್ಯಮ ಸಂಯೋಜಕ ಶಂಕರ ಪಾಗೋಜಿ ವಿರುದ್ಧ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ತನಿಖೆ ನಡೆಸಬೇಕೆಂದು ಲೋಕಾಯುಕ್ತಕ್ಕೆ ಇಮೇಲ್ ಮೂಲಕ ದೂರು ಸಲ್ಲಿಸಿದೆ. ಬೆಂಗಳೂರಿನ ಪ್ರಮುಖ ಪತ್ರಿಕೆಗಳು ಮತ್ತು ಪ್ರಮುಖ ಸುದ್ದಿ ವಾಹಿನಿಗಳ ರಾಜಕೀಯ ವಿಭಾಗದಲ್ಲಿ ವರದಿ ಮಾಡುವ ಪತ್ರಕರ್ತರಿಗೆ ದೀಪಾವಳಿ ಗಿಫ್ಟ್ ನೀಡಲಾಗಿತ್ತು. ಒಂದು ಲಕ್ಷದಿಂದ 5 ಲಕ್ಷದ ವರೆಗೆ ಪತ್ರಕರ್ತರ ಗ್ರೇಡ್ ಆಧರಿಸಿ ಗಿಫ್ಟ್ ನೀಡಲಾಗಿದೆ ಎನ್ನುವ ಗಂಭೀರ ಆರೋಪ ಕೇಳಿಬಂದಿದ್ದು, ಪತ್ರಕರ್ತರ ಒಳಗೆ ಭಾರೀ ಚರ್ಚೆಗೂ ಕಾರಣವಾಗಿದೆ.

ಈ ಪೈಕಿ ಹಣದ ಕಂತೆಯುಳ್ಳ ಗಿಫ್ಟ್ ಪಡೆದ ಪ್ರಜಾವಾಣಿ ವಿಭಾಗದ ಇಂಗ್ಲಿಷ್ ಮತ್ತು ಕನ್ನಡ ಪತ್ರಿಕೆಗಳ ಇಬ್ಬರು ಪತ್ರಕರ್ತರು, ತಮ್ಮ ಪತ್ರಿಕಾ ಸಂಸ್ಥೆಯ ಮುಖ್ಯಸ್ಥರಿಗೆ ವಿಷಯ ತಿಳಿಸಿ ಹಣದ ಕಂತೆಯನ್ನು ನೇರವಾಗಿ ಮುಖ್ಯಮಂತ್ರಿ ಕಚೇರಿಗೆ ಹಿಂತಿರುಗಿಸಿದ್ದಾರೆ ಎನ್ನಲಾಗುತ್ತಿದೆ. ಅಲ್ಲದೆ, ಪತ್ರಿಕಾ ಸಂಸ್ಥೆಯ ಮುಖ್ಯಸ್ಥರು ಈ ಬಗ್ಗೆ ಮುಖ್ಯಮಂತ್ರಿಗೆ ಖಂಡನಾ ಪತ್ರವನ್ನು ಬರೆದಿದ್ದಾರೆ ಎನ್ನುವ ಮಾಹಿತಿಗಳಿವೆ.
ಪತ್ರಕರ್ತರಿಗೆ ಲಂಚ ನೀಡಿರುವ ಆರೋಪದ ಬಗ್ಗೆ ಕಾಂಗ್ರೆಸ್ ಟ್ವೀಟ್ ಮಾಡಿದ್ದು, ಇದು ನಲ್ವತ್ತು ಪರ್ಸೆಂಟ್ ಕಮಿಷನ್ ಪಡೆದಿರುವ ಹಣವೇ..? ಅಥವಾ ನಲ್ವತ್ತು ಪರ್ಸೆಂಟ್ ಕಮಿಷನ್ ಹಗರಣವನ್ನು ಮುಚ್ಚಿಡಲು ನೀಡಿದ ಲಂಚವೇ..? ಮಾಧ್ಯಮಗಳನ್ನು ಖರೀದಿಸುವ ವ್ಯವಹಾರವೇ ಎಂದು ಪ್ರಶ್ನೆ ಮಾಡಿದೆ. ಮುಖ್ಯಮಂತ್ರಿ ಬೊಮ್ಮಾಯಿ ಅವರೇ ಈ ಬಗ್ಗೆ ಉತ್ತರ ನೀಡಬೇಕು ಎಂದು ಕಾಂಗ್ರೆಸ್ ಆಗ್ರಹ ಮಾಡಿದೆ.
Allegations of Chief Minister’s Office (CMO) ‘gifting’ Rs 1 lakh in cash in Deepavali gift boxes to some journalists has left the state government embarrassed and red-faced. Sources in the CMO have said Chief Minister Basavaraj Bommai has apologised and said he was ignorant about the cash ‘gifted’ to journalists. He is likely to order a probe, the sources said.
28-05-26 10:56 am
HK News Staffer
ನಾಳೆ ರಾಜೀನಾಮೆ ಕೊಡ್ತೀನಿ ಎಂದೇ ಬಂದಿದ್ದಾರೆ..! ಸಿದ...
27-05-26 06:26 pm
ನಾಗಲಕ್ಷ್ಮಿಗೆ ಸುತ್ತಿಕೊಂಡ ಮತ್ತೊಂದು ವಿವಾದ ; ಉಡುಪ...
27-05-26 04:58 pm
ಡಿಕೆಗೆ ಪಟ್ಟ ; ಬಹುತೇಕ ಸಚಿವರಿಗೆ ಕೊಕ್- ಹೊಸಬರಿಗೆ...
27-05-26 01:41 pm
ರಾಜ್ಯ ರಾಜಕೀಯದಲ್ಲಿ ಭಾರೀ ಕ್ಲೈಮ್ಯಾಕ್ಸ್ ; ಸಿಎಂ ಸಿ...
26-05-26 11:03 pm
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
27-05-26 12:29 pm
HK News Desk
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
28-05-26 10:43 am
HK News Staffer
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm