ಬ್ರೇಕಿಂಗ್ ನ್ಯೂಸ್
29-10-22 07:01 pm HK News Desk ಕರ್ನಾಟಕ
ಧಾರವಾಡ, ಅ.29: 2023 ರ ವಿಧಾನಸಭೆ ಚುನಾವಣೆಯಲ್ಲಿ ಸ್ವತಂತ್ರವಾಗಿ ಸ್ಪರ್ಧಿಸುವ ಬಗ್ಗೆ ಶ್ರೀರಾಮ ಸೇನೆ ವರಿಷ್ಠ ಪ್ರಮೋದ್ ಮುತಾಲಿಕ್ ಸುಳಿವು ನೀಡಿದ್ದಾರೆ.
ಬೆಳಗಾವಿ, ಬಾಗಲಕೋಟೆ, ಮಂಗಳೂರು, ಉಡುಪಿ ಜಿಲ್ಲೆಯಿಂದ ಸ್ಪರ್ಧೆಗೆ ಕಾರ್ಯಕರ್ತರು ಒತ್ತಡ ಹೇರುತ್ತಿದ್ದಾರೆ. ಬೆಳಗಾವಿ ನಗರದ ಎರಡು ಕ್ಷೇತ್ರ, ಬಾಗಲಕೋಟೆಯ ತೇರದಾಳ, ಜಮಖಂಡಿ, ದಕ್ಷಿಣ ಕನ್ನಡ ಜಿಲ್ಲೆಯ ಕಾರ್ಕಳ, ಪುತ್ತೂರು, ಚಿಕ್ಕಮಗಳೂರಿನ ಶೃಂಗೇರಿಯಿಂದ ಸ್ಪರ್ಧಿಸುವಂತೆ ಒತ್ತಾಯ ಮಾಡುತ್ತಿದ್ದಾರೆ. ಒಂದು ಕ್ಷೇತ್ರದ ಬಗ್ಗೆ ನಿರ್ಣಯ ಮಾಡುತ್ತೇನೆ. ಚುನಾವಣೆಯಲ್ಲಿ ಸ್ಪರ್ಧಿಸುವುದು ಖಚಿತ ಎಂದು ಮುತಾಲಿಕ್ ಹೇಳಿದ್ದಾರೆ.

2014 ರಿಂದ ಬಿಜೆಪಿ ತನಗೆ ಟಿಕೇಟ್ ಕೊಡುತ್ತೆ ಎಂದು ಭಾವಿಸಿದ್ದೆ. ಬಿಜೆಪಿ ಪಕ್ಷವನ್ನು ಕಟ್ಟಿದವರು ನಾವು. ಆದರೆ ಬಿಜೆಪಿ ನನಗೆ ನಿರಂತರ ತೊಂದರೆ ಕೊಟ್ಟಿದೆ. ಹಿಂದುಗಳ ಹೆಸರಲ್ಲಿ ಗೆದ್ದು ಬಂದು ಅವರ ಮೇಲೆ ದೌರ್ಜನ್ಯಗಳನ್ನು ಎಸಗಿದೆ. ಇದಕ್ಕಾಗಿ ಚುನಾವಣೆಗೆ ನಿಲ್ಲುವ ತೀರ್ಮಾನಕ್ಕೆ ಬಂದಿದ್ದೇನೆ. ನಾನು ಕಟ್ಟರ್ ಹಿಂದುತ್ವವಾದಿ. ಚುನಾವಣೆಯಲ್ಲಿ ಗೆದ್ದರೆ, ನಾನು ಹಿಂದುತ್ವ ಪರ ಇರುವ ಬಿಜೆಪಿಗೆ ಬೆಂಬಲಿಸುತ್ತೇನೆ. ಆದರೆ ಬಿಜೆಪಿಗೆ ಹಿಂದುತ್ವ ಬೇಕಾಗಿಲ್ಲ.

ಬಿಜೆಪಿಯಲ್ಲಿ ಸದ್ಯ ಕಾಂಗ್ರೆಸ್ಸಿಗರೇ ತುಂಬಿದ್ದಾರೆ. ಹಿಂದುತ್ವದ ಹಿನ್ನೆಲೆ ಹೊಂದಿದವರಿಗೆ ಬಿಜೆಪಿಯಲ್ಲಿ ಮರ್ಯಾದೆ ಇಲ್ಲ. ಹೊಸ ಪಕ್ಷ ಮಾಡುವ ಗೋಜಿಗೆ ಹೋಗಲ್ಲ. ಸ್ವತಂತ್ರವಾಗಿ ಸ್ಪರ್ಧಿಸಲು ಹಿಂದು ಕಾರ್ಯಕರ್ತರು ನಿರ್ಧರಿಸಿದ್ದಾರೆ. ಕಾಂಗ್ರೆಸ್ ಹಾಗೂ ಬಿಜೆಪಿಗೆ ಹೋಗುವ ಪ್ರಶ್ನೆಯೇ ಇಲ್ಲ. ಡಿಸೆಂಬರ ಮೊದಲ ವಾರದಲ್ಲಿ ಯಾವ ಕ್ಷೇತ್ರದಿಂದ ಸ್ಪರ್ಧಿಸಬೇಕು ಅನ್ನೋದನ್ನ ಪ್ರಕಟಿಸುತ್ತೇನೆ ಎಂದು ಪ್ರಮೋದ ಮುತಾಲಿಕ್ ಹೇಳಿದ್ದಾರೆ.
Pramod Muthalik all set to join politics, yet to choose constituency.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm